ಅವನು (ಅಭಿಷಿಕ್ತ ಯಾಜಕ) ದೋಷಪರಿಹಾರಕ ಯಜ್ಞದ ಹೋರಿಯ ವಿಷಯದಲ್ಲಿ ಹೇಗೆ ಮಾಡಬೇಕೆಂದು ವಿಧಿಸಲ್ಪಟ್ಟಿತೋ, ಇದರ ವಿಷಯದಲ್ಲಿಯೂ ಹಾಗೆಯೇ ಮಾಡಬೇಕು. ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಿದನಂತರ ಅವರಿಗೆ ಕ್ಷಮಾಪಣೆಯಾಗುವುದು.
TSK
TSK · ಯಾಜಕಕಾಂಡ 12:7
مراجع Treasury of Scripture Knowledge في ಕನ್ನಡ IRV.
ಸಮಾಧಾನ ಯಜ್ಞಪಶುಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲಾ ಕೊಬ್ಬನ್ನು ಪ್ರತ್ಯೇಕಿಸಿ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕೆ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು.
ಯಾಜಕನು ದೋಷಪರಿಹಾರಕ ಯಜ್ಞಕ್ಕಾಗಿ ಒಂದನ್ನು ಮತ್ತು ಸರ್ವಾಂಗಹೋಮಕ್ಕಾಗಿ ಇನ್ನೊಂದನ್ನು ಸಮರ್ಪಿಸಬೇಕು. ಹೀಗೆ ಯಾಜಕನು ಅವನ ಸ್ರಾವದ ವಿಷಯದಲ್ಲಿ ಯೆಹೋವನ ಸನ್ನಿಧಿಯಲ್ಲಿ ಅವನಿಗಾಗಿ ದೋಷಪರಿಹಾರ ಮಾಡುವನು.
ಔತಣದ ಸರದಿ ತೀರಿದ ನಂತರ ಯೋಬನು, “ನನ್ನ ಮಕ್ಕಳು ಒಂದು ವೇಳೆ ಹೃದಯದಲ್ಲಿ ದೇವರನ್ನು ದೂಷಿಸಿ ಪಾಪ ಮಾಡಿರಬಹುದು” ಎಂದು ಅವರನ್ನು ಕರೆಯಿಸಿ ಶುದ್ಧಿಪಡಿಸಿ, ಬೆಳಿಗ್ಗೆ ಎದ್ದು ಅವರ ಸಂಖ್ಯೆಗೆ ತಕ್ಕಂತೆ ಹೋಮಗಳನ್ನು ಅರ್ಪಿಸುತ್ತಿದ್ದನು. ಹೀಗೆ ಯೋಬನು ಕ್ರಮವಾಗಿ ಮಾಡುವುದು ದೈನಂದಿನ ಕ್ರಮವಾಗಿತ್ತು.
ಎಲ್ಲರೂ ಪಾಪ ಮಾಡಿ ದೇವರ ಮಹಿಮೆಯನ್ನು ಹೊಂದದೇ ಹೋಗಿದ್ದಾರೆ.
ಯಾಕೆಂದರೆ ಕ್ರಿಸ್ತ ನಂಬಿಕೆಯಿಲ್ಲದ ಗಂಡನು ತನ್ನ ಹೆಂಡತಿಯ ನಿಮಿತ್ತ ಪವಿತ್ರನಾದನು ಮತ್ತು ಕ್ರಿಸ್ತ ನಂಬಿಕೆಯಿಲ್ಲದ ಹೆಂಡತಿಯು ತನ್ನ ಗಂಡನ ನಿಮಿತ್ತ ಪವಿತ್ರಳಾದಳು. ಹಾಗಲ್ಲದಿದ್ದರೆ ನಿಮ್ಮ ಮಕ್ಕಳು ಅಪವಿತ್ರರಾಗುತ್ತಿದ್ದರು. ಈಗಲಾದರೋ ಅವರು ಪವಿತ್ರರೇ ಆಗಿದ್ದಾರೆ.
ಹೋತಗಳ ಮತ್ತು ಹೋರಿಕರುಗಳ ರಕ್ತದ ಮೂಲಕವಲ್ಲ ತನ್ನ ಸ್ವಂತ ರಕ್ತದ ಮೂಲಕ ಒಂದೇ ಸಾರಿ ಎಲ್ಲರಿಗೋಸ್ಕರ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿ ನಿತ್ಯ ವಿಮೋಚನೆಯನ್ನು ಸಾಧಿಸಿದನು.