ಅವನು ಬಹಳವಾಗಿ ಆಲೋಚಿಸಿ, ಕಡೆಯಲ್ಲಿ ಬಂಗಾರದ ಎರಡು ಬಸವನ ಮೂರ್ತಿಗಳನ್ನು ಮಾಡಿಸಿ ಇಸ್ರಾಯೇಲರಿಗೆ, “ನೀವು ಜಾತ್ರೆಗಾಗಿ ಯೆರೂಸಲೇಮಿಗೆ ಹೋದದ್ದು ಸಾಕಾಯಿತು, ಇಗೋ, ನಿಮ್ಮನ್ನು ಐಗುಪ್ತದಿಂದ ಕರೆತಂದ ದೇವರುಗಳು ಇಲ್ಲಿರುತ್ತವೆ” ಎಂದು ಹೇಳಿದನು.
TSK
TSK · ಯಾಜಕಕಾಂಡ 13:29
مراجع Treasury of Scripture Knowledge في ಕನ್ನಡ IRV.
ದುಷ್ಟತ್ವವನ್ನು ನಡೆಸುವವರು ಯಾರೆಂದು ತಿಳಿಯುವುದಿಲ್ಲವೋ? ಅವರು ನನ್ನ ಜನರನ್ನು ಕೊಳ್ಳೆಹೊಡೆದು ಜೀವಿಸುತ್ತಾರೆ; ದೇವರನ್ನು ಪ್ರಾರ್ಥಿಸುವುದಿಲ್ಲ.
ಅಯ್ಯೋ, ಕೆಟ್ಟದ್ದನ್ನು ಒಳ್ಳೆಯದೆಂದೂ, ಒಳ್ಳೆಯದನ್ನು ಕೆಟ್ಟದೆಂದೂ ಬೋಧಿಸಿ; ಕತ್ತಲನ್ನು ಬೆಳಕೆಂದೂ, ಬೆಳಕನ್ನು ಕತ್ತಲೆಂದೂ ಸಾಧಿಸಿ; ಕಹಿಯನ್ನು ಸಿಹಿಯೆಂದು, ಸಿಹಿಯನ್ನು ಕಹಿ ಎಂದು ಎಣಿಸುವವರ ಗತಿಯನ್ನು ಏನೆಂದು ಹೇಳಲಿ!
ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ. ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ. ಆದರೂ ಯೆಹೋವನ ಮೇಲೆ ಭಾರ ಹಾಕಿ, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು” ಅಂದುಕೊಳ್ಳುತ್ತಾರೆ.
‹“ಯೆಶಾಯನು ಹೇಳಿದ ಪ್ರವಾದನೆಯು ಅವರಲ್ಲಿ ನೆರವೇರುತ್ತದೆ. ಅದೇನೆಂದರೆ,› ‹‘ನೀವು ಕೇಳುತ್ತೀರಿ, ಕೇಳಿದರೂ ತಿಳಿದುಕೊಳ್ಳುವುದೇ ಇಲ್ಲ.› ‹ನೀವು ನೋಡುತ್ತೀರಿ, ನೋಡಿದರೂ ಗ್ರಹಿಸುವುದೇ ಇಲ್ಲ.›
¶ “ನಾನು ಯೆಹೂದ್ಯನು, ಕಿಲಿಕ್ಯದ ತಾರ್ಸದಲ್ಲಿ ಹುಟ್ಟಿದವನು, ಆದರೆ ಈ ಪಟ್ಟಣದಲ್ಲೇ ಬೆಳೆದವನು. ಗಮಲಿಯೇಲನ ಪಾದಸನ್ನಿಧಿಯಲ್ಲಿ, ನಮ್ಮ ಪೂರ್ವಿಕರ ಧರ್ಮಶಾಸ್ತ್ರದಲ್ಲಿ ಪೂರ್ಣ ಶಿಕ್ಷಣವನ್ನು ಪಡೆದವನು; ನೀವೆಲ್ಲರೂ ಈಹೊತ್ತು ದೇವರ ವಿಷಯದಲ್ಲಿ ಅಭಿಮಾನಿಗಳಾಗಿರುವಂತೆಯೇ, ನಾನೂ ಅಭಿಮಾನಿಯಾಗಿದ್ದೆನು.
ನಾವು ಸಾರುವ ಸುವಾರ್ತೆಯು ಕೆಲವರಿಗೆ ಮರೆಯಾಗಿರುವುದಾದರೆ ನಾಶಮಾರ್ಗದಲ್ಲಿರುವವರಿಗೇ ಅದು ಮರೆಯಾಗಿರುವುದು.