TSK

TSK · ಯಾಜಕಕಾಂಡ 14:34

مراجع Treasury of Scripture Knowledge في ಕನ್ನಡ IRV.

العودة إلى المقطع

ನೀನೆದ್ದು, ಈ ದೇಶದ ಎಲ್ಲಾ ಕಡೆಯಲ್ಲಿಯೂ ತಿರುಗಾಡು; ಇದನ್ನು ನಿನಗೆ ಕೊಡುವೆನು” ಎಂದು ಹೇಳಿದನು.

ಯೆಹೋವನು ಅವರಿಗೆ, “ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ಆತನ ದೃಷ್ಟಿಗೆ ಸರಿಬೀಳುವುದನ್ನು ಮಾಡಿ, ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು, ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ, ನಾನು ಐಗುಪ್ತ್ಯರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನೂ, ನಿಮ್ಮನ್ನು ಗುಣಪಡಿಸುವವನೂ ಆಗಿದ್ದೇನೆ” ಎಂದನು.

ನಿಮಗಾದರೂ, ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ, ಹಾಲೂ ಮತ್ತು ಜೇನೂ ಹರಿಯುವಂಥ ಆ ದೇಶವನ್ನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವೆನು ಎಂದು ನಾನು ಮಾತುಕೊಟ್ಟೆನಲ್ಲವೇ. ನಾನು ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ ನಿಮ್ಮ ದೇವರಾದ ಯೆಹೋವನು.

“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ನಾನು ನಿಮಗೆ ಕೊಡುವ ದೇಶಕ್ಕೆ ನೀವು ಬಂದಾಗ ಆ ದೇಶವೂ ಯೆಹೋವನ ಗೌರವಾರ್ಥವಾಗಿ ಸಬ್ಬತ್ ಕಾಲವನ್ನು ಆಚರಿಸಬೇಕು.

ನಾವು ಯೆಹೋವನ ಮುಂದೆ ಯುದ್ಧಸನ್ನದ್ಧರಾಗಿ ಕಾನಾನ್ ದೇಶಕ್ಕೆ ಹೊರಡುವೆವು, ಆಗ ಯೊರ್ದನ್ ನದಿಯ ಆಚೆಯೇ ನಮಗೆ ಸ್ವತ್ತು ದೊರಕಬೇಕು” ಎಂದರು.

¶ ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸೇರಿಸಿ ಅಧಿಕ ಸಂಖ್ಯೆಯಲ್ಲಿಯೂ ಮತ್ತು ಅಧಿಕ ಬಲದಲ್ಲಿಯೂ ನಿಮಗೆ ಮೀರುವ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ಎಂಬ ಏಳು ಜನಾಂಗಗಳನ್ನು ನಿಮ್ಮ ಮುಂದೆಯೇ ಹೊರಡಿಸುವನು.

¶ ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶದಲ್ಲಿ ನೀವು ಭೂಮಿಯ ಮೇಲೆ ವಾಸಿಸುವ ಎಲ್ಲಾ ದಿನಗಳಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳು ಇವೇ:

¶ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದ ಜನಾಂಗಗಳನ್ನು ಆತನು ನಾಶಮಾಡಿ ಬಿಟ್ಟ ತರುವಾಯ, ನೀವು ಆ ದೇಶವನ್ನು ಸ್ವಾಧೀನಮಾಡಿಕೊಂಡು ಅವರ ಗ್ರಾಮಗಳಲ್ಲಿಯೂ,

ನಿಮ್ಮ ಪೂರ್ವಿಕರ ದೇವರಾದ ಯೆಹೋವನು ತಾನು ವಾಗ್ದಾನಮಾಡಿದಂತೆ ನಿಮಗೆ ಕೊಡುವ ಹಾಲೂ ಮತ್ತು ಜೇನೂ ಹರಿಯುವ ದೇಶವನ್ನು ಪ್ರವೇಶಿಸುವುದಕ್ಕೆ ನೀವು ಯೊರ್ದನ್ ನದಿಯನ್ನು ದಾಟುವಾಗ ಈ ಧರ್ಮಶಾಸ್ತ್ರದ ವಾಕ್ಯಗಳನ್ನೆಲ್ಲಾ ಆ ದೊಡ್ಡ ಕಲ್ಲುಗಳ ಮೇಲೆ ಬರೆಯಿಸಬೇಕು.

¶ ಯೆಹೋಶುವನು ದಿನತುಂಬಿದ ಮುದುಕನಾಗಲು ಯೆಹೋವನು ಅವನಿಗೆ, “ನೀನು ಈಗ ಮುದುಕನಾದಿ, ಸ್ವಾಧೀನಮಾಡಿಕೊಳ್ಳತಕ್ಕ ದೇಶಗಳು ಇನ್ನೂ ಬಹಳ ಇವೆ.

ಯೆಹೋವನು ದುಷ್ಟನ ಮನೆಯನ್ನು ಶಪಿಸುವನು, ನೀತಿವಂತರ ನಿವಾಸವನ್ನೋ ಆಶೀರ್ವದಿಸುವನು.

ಪಟ್ಟಣದಲ್ಲಿ ಕೊಂಬನ್ನು ಊದಿದರೆ ಜನರು ಹೆದರುವುದಿಲ್ಲವೋ? ಯೆಹೋವನಿಂದಲ್ಲದೆ ಪಟ್ಟಣಕ್ಕೆ ವಿಪತ್ತು ಸಂಭವಿಸುವುದೋ?

ಯೆಹೋವನ ನಾಮದಲ್ಲಿ ಭಯಭಕ್ತಿಯಿಡುವುದು ಸುಜ್ಞಾನವೇ, ಎಂದು ಯೆರೂಸಲೇಮಿನ ಪಟ್ಟಣಕ್ಕೆ ಎಚ್ಚರಿಕೆ ನೀಡುವ ಯೆಹೋವನ ನುಡಿ. ಬೀಸಿ ಬರುವ ಶಿಕ್ಷೆಯ ದಂಡಕ್ಕೆ ಎಚ್ಚರವಾಗಿರಿ. ಅದನ್ನು ನೇಮಿಸಿದವನು ಯಾರೆಂದು ತಿಳಿದುಕೊಳ್ಳಿರಿ.