ಹಿಸ್ಸೋಪ್ ಗಿಡದ ಕಟ್ಟನ್ನು ತೆಗೆದುಕೊಂಡು ಬೋಗುಣಿಯಲ್ಲಿರುವ ರಕ್ತದಲ್ಲಿ ಅದನ್ನು ಅದ್ದಿ ಬಾಗಿಲಿನ ಮೇಲಿನ ಅಡ್ಡಪಟ್ಟಿಗೂ, ಅದರ ಪಕ್ಕದಲ್ಲಿರುವ ಎರಡು ನಿಲುವುಪಟ್ಟಿಗಳಿಗೂ ಹಚ್ಚಬೇಕು. ತರುವಾಯ ನಿಮ್ಮಲ್ಲಿ ಒಬ್ಬರೂ ಬೆಳಗಾಗುವವರೆಗೆ ಮನೆಯ ಬಾಗಿಲನ್ನು ಬಿಟ್ಟು ಹೊರಗೆ ಹೋಗಬಾರದು.
TSK
TSK · ಯಾಜಕಕಾಂಡ 14:4
مراجع Treasury of Scripture Knowledge في ಕನ್ನಡ IRV.
¶ “‘ಕುರಿಯನ್ನು ಕೊಡುವುದಕ್ಕೆ ಅವನಿಗೆ ಗತಿಯಿಲ್ಲದ ಪಕ್ಷದಲ್ಲಿ ದೋಷದ ಪ್ರಾಯಶ್ಚಿತ್ತಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ಬಂದು, ಒಂದನ್ನು ದೋಷಪರಿಹಾರಕ ಯಜ್ಞವಾಗಿ ಮತ್ತೊಂದನ್ನು ಸರ್ವಾಂಗಹೋಮವಾಗಿ ಯೆಹೋವನಿಗೆ ಸಮರ್ಪಿಸಬೇಕು.
¶ “ಅವನು ಮತ್ತೊಂದು ಪಕ್ಷಿಯನ್ನು, ಆ ದೇವದಾರಿನ ಕಟ್ಟಿಗೆಯನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತೆಗೆದುಕೊಂಡು ಹರಿಯುವ ನೀರಿನ ಮೇಲೆ ವಧಿಸಿದ ಆ ಮೊದಲನೆಯ ಪಕ್ಷಿಯ ರಕ್ತದಲ್ಲಿ ಈ ಎಲ್ಲಾ ವಸ್ತುಗಳನ್ನು ಮತ್ತು ಆ ಪಕ್ಷಿಯನ್ನು ಸಜೀವವಾಗಿಯೇ ಅದ್ದಬೇಕು.
ಅವನು ಒಂದು ಪಕ್ಷಿಯನ್ನು ಒರತೆ ನೀರಿನ ಮೇಲೆ ಮಣ್ಣಿನ ಪಾತ್ರೆಯಲ್ಲಿ ವಧಿಸಬೇಕು,
ಆಗ ಶುದ್ಧನಾದವನೊಬ್ಬನು ಆ ನೀರನ್ನು ಹಿಸ್ಸೋಪ್ ಗಿಡದ ಬರಲಿಂದ ಮನುಷ್ಯನು ಸತ್ತ ಆ ಡೇರೆಯ ಮೇಲೆಯೂ, ಅದರಲ್ಲಿದ್ದ ಸಾಮಾನುಗಳ ಮತ್ತು ಮನುಷ್ಯರ ಮೇಲೆಯೂ ಚಿಮಿಕಿಸಬೇಕು. ಹಾಗೆಯೇ ಎಲುಬಾಗಲಿ, ಹತವಾದವನ ಅಥವಾ ಬೇರೆ ಮನುಷ್ಯನ ಶವವಾಗಲಿ, ಸಮಾಧಿಯಾಗಲಿ ಯಾವನಿಗೆ ಸೋಂಕುವುದೋ ಅವನ ಮೇಲೆಯೂ ನೀರನ್ನು ಚಿಮಿಕಿಸಬೇಕು.
ಮೋಶೆಯು ದೇವರ ಪ್ರತಿಯೊಂದು ಆಜ್ಞೆಯನ್ನು ಧರ್ಮಶಾಸ್ತ್ರದ ಪ್ರಕಾರ ಜನರೆಲ್ಲರಿಗೆ ತಿಳಿಸಿದ ಮೇಲೆ, ಅವನು ನೀರು, ಕೆಂಪು ಉಣ್ಣೆ, ಹಿಸ್ಸೋಪುಕಡ್ಡಿ ಇವುಗಳೊಂದಿಗೆ ಹೋರಿಕರುಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು ಸುರುಳಿಗಳ ಮೇಲೆಯೂ ಎಲ್ಲಾ ಜನರ ಮೇಲೆಯೂ ಪ್ರೋಕ್ಷಿಸಿದನು.