TSK

TSK · ಯಾಜಕಕಾಂಡ 14:45

مراجع Treasury of Scripture Knowledge في ಕನ್ನಡ IRV.

العودة إلى المقطع

ಇದಲ್ಲದೆ, ಬಾಳ್ ದೇವತೆಯ ವಿಗ್ರಹ ಸ್ತಂಭಗಳನ್ನೂ, ದೇವಸ್ಥಾನಗಳನ್ನೂ ಕೆಡವಿ ಹಾಳುಮಾಡಿದರು. ಅಂದಿನಿಂದ ಇಂದಿನವರೆಗೂ ಆ ಸ್ಥಳವನ್ನು ಶೌಚಾಲಯಕ್ಕಾಗಿ ಉಪಯೋಗಿಸುತ್ತಿದ್ದಾರೆ.

ಪೂಜಾಸ್ಥಳಗಳನ್ನು ಹಾಳುಮಾಡಿ, ಕಲ್ಲುಕಂಬಗಳನ್ನು ಒಡೆದು, ಅಶೇರ ವಿಗ್ರಹ ಸ್ತಂಭಗಳನ್ನು ಕತ್ತರಿಸಿ ಹಾಕಿದನು. ಮೋಶೆಯು ಮಾಡಿಸಿದ ತಾಮ್ರದ ಸರ್ಪವನ್ನು ಚೂರು‍ಚೂರು ಮಾಡಿದನು. ಇಸ್ರಾಯೇಲರು ಅದಕ್ಕೆ ಆ ವರೆಗೂ ಧೂಪವನ್ನರ್ಪಿಸುತ್ತಿದ್ದರು. ಅದಕ್ಕೆ “ನೆಹುಷ್ಟಾನ್” ಎಂಬ ಹೆಸರಿತ್ತು.

ಆದರೆ ಏಳನೆಯ ತಿಂಗಳಿನಲ್ಲಿ ರಾಜವಂಶದವನೂ, ಎಲೀಷಾಮನ ಮೊಮ್ಮಗನೂ, ನೆತನ್ಯನ ಮಗನೂ ಆದ ಇಷ್ಮಾಯೇಲನು ಹತ್ತು ಮಂದಿ ಆಳುಗಳೊಡನೆ ಬಂದು ಗೆದಲ್ಯನನ್ನೂ, ಅವನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರನ್ನೂ, ಕಸ್ದೀಯರನ್ನೂ ಸಂಹರಿಸಿದನು.

ಆಮೇಲೆ ಇವುಗಳಲ್ಲಿ ಕೆಲವನ್ನು ಆರಿಸಿ ಬೆಂಕಿಯೊಳಗೆ ಹಾಕಿ ಸುಡು; ಅವುಗಳಿಂದ ಬೆಂಕಿಯು ಹೊರಟು ಇಸ್ರಾಯೇಲ್ ವಂಶವನ್ನೆಲ್ಲಾ ವ್ಯಾಪಿಸುವುದು.”

ಆದರೆ ಅದಕ್ಕೆ ಉತ್ತರವಾಗಿ ಆತನು ಅವರಿಗೆ, ‹“ಇವುಗಳನ್ನೆಲ್ಲಾ ನೋಡುತ್ತೀರಲ್ಲವೇ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ, ಎಲ್ಲಾ ಕೆಡವಲ್ಪಡುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ”› ಅಂದನು.

ಆಲಯದ ಹೊರಗಿರುವ ಹೊರಾಂಗಣವನ್ನು ಅಳೆಯದೆ ಬಿಟ್ಟುಬಿಡು, ಅದು ಅನ್ಯಜನರಿಗಾಗಿ ಕೊಡಲ್ಪಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಲವತ್ತೆರಡು ತಿಂಗಳು ತುಳಿದಾಡುವರು.