ಯಾವ ಹೋತ ಅಜಾಜೇಲನದೆಂದು ಗೊತ್ತಾಗುವುದೋ ಅದನ್ನು ಯೆಹೋವನ ಸನ್ನಿಧಿಯಲ್ಲಿ ಸಜೀವವಾಗಿಯೇ ನಿಲ್ಲಿಸಿ, ಅದರ ಮೇಲೆ ದೋಷವನ್ನು ಹೊರಿಸಿ ಅರಣ್ಯಕ್ಕೆ ಅಜಾಜೇಲನಿಗಾಗಿ ಬಿಡಬೇಕು.
TSK
TSK · ಯಾಜಕಕಾಂಡ 16:17
مراجع Treasury of Scripture Knowledge في ಕನ್ನಡ IRV.
ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ಹೋಗಿದ್ದೆವು, ಪ್ರತಿಯೊಬ್ಬನೂ ತನ್ನ ತನ್ನ ದಾರಿಯನ್ನು ಹಿಡಿಯುತ್ತಿದ್ದನು; ನಮ್ಮೆಲ್ಲರ ದೋಷಫಲವನ್ನೂ ಯೆಹೋವನು ಅವನ ಮೇಲೆ ಹಾಕಿದನು.
ಧೂಪವನ್ನು ಅರ್ಪಿಸುವ ಹೊತ್ತಿನಲ್ಲಿ ಜನಸಮೂಹದವರೆಲ್ಲರು ಹೊರಗೆ ನಿಂತು ಪ್ರಾರ್ಥಿಸುತ್ತಿರಲಾಗಿ,
ಏಕೆಂದರೆ ದೇವರು ಒಬ್ಬನೇ, ದೇವರಿಗೂ ಮನುಷ್ಯರಿಗೂ ಮಧ್ಯಸ್ಥನು ಒಬ್ಬನೇ, ಆತನು ಮನುಷ್ಯನಾಗಿರುವ ಕ್ರಿಸ್ತ ಯೇಸುವೇ.
ಆದರೆ ಎರಡನೆಯ ಕೋಣೆಯೊಳಗೆ ಮಹಾಯಾಜಕನೊಬ್ಬನೇ ವರ್ಷಕ್ಕೊಮ್ಮೆ ಪ್ರವೇಶಿಸುತ್ತಿದ್ದನು. ತನ್ನೊಡನೆ ಬಲಿರಕ್ತವನ್ನು ತೆಗೆದುಕೊಳ್ಳದೆ ಹೋಗುತ್ತಿರಲಿಲ್ಲ. ಆ ರಕ್ತವನ್ನು ತನ್ನಗಾಗಿಯೂ ಮತ್ತು ಜನರ ಉದ್ದೇಶಪೂರ್ವಕವಲ್ಲದ ಅಪರಾಧಗಳಿಗೋಸ್ಕರವೂ ಸಮರ್ಪಿಸಬೇಕಾಗಿತ್ತು.
ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.