ಮೊದಲನೆಯ ದಿನದಲ್ಲಿ ಪರಿಶುದ್ಧ ದೇವಾರಾಧನೆಗಾಗಿ ಸಭೆ ಸೇರಬೇಕು. ಏಳನೆಯ ದಿನದಲ್ಲಿಯೂ ದೇವಾರಾಧನೆಗಾಗಿ ಸಭೆ ಸೇರಬೇಕು. ಈ ಎರಡು ದಿನಗಳಲ್ಲಿ ಯಾವ ಕೆಲಸವನ್ನು ಮಾಡಕೂಡದು. ಊಟಕ್ಕೆ ಬೇಕಾದದ್ದನ್ನು ಮಾತ್ರ ಮಾಡಬಹುದೇ ಹೊರತು ಬೇರೆ ಯಾವ ಕೆಲಸವನ್ನು ಮಾಡಬಾರದು.
TSK
TSK · ಯಾಜಕಕಾಂಡ 16:29
مراجع Treasury of Scripture Knowledge في ಕನ್ನಡ IRV.
ಆರೋನನು ಅವನ ಸಂತತಿಯವರೂ ವರ್ಷಕ್ಕೆ ಒಂದು ಸಾರಿ ದೋಷಪರಿಹಾರಕ ಯಜ್ಞದ ಪಶುವಿನ ರಕ್ತವನ್ನು ಆ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ಅದರ ಕುರಿತಾಗಿ ದೋಷಪರಿಹಾರವನ್ನು ಮಾಡಬೇಕು. ಅದು ಯೆಹೋವನಿಗೆ ಅತಿ ಪರಿಶುದ್ಧವಾಗಿದೆ.”
ಮೊದಲನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು; ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು.
“ಅದೇ ಏಳನೆಯ ತಿಂಗಳಿನ ಹತ್ತನೆಯ ದಿನ ದೋಷಪರಿಹಾರಕ ದಿನ. ಅದರಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು; ನೀವು ಪೂರ್ಣವಾಗಿ ಉಪವಾಸಮಾಡಬೇಕು ಮತ್ತು ಯೆಹೋವನ ಸನ್ನಿಧಿಯಲ್ಲಿ ಹೋಮವನ್ನು ಮಾಡಬೇಕು.
ಆ ಏಳು ದಿನಗಳಲ್ಲಿಯೂ ನೀವು ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು. ಎಂಟನೆಯ ದಿನದಲ್ಲಿಯೂ ದೇವಾರಾಧನೆಗಾಗಿ ಸಭೆಸೇರಬೇಕು, ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು. ಅದು ಸಭೆಸೇರುವ ದಿನವಾದುದರಿಂದ ಆ ದಿನದಲ್ಲಿ ಯಾವ ಉದ್ಯೋಗವನ್ನು ಮಾಡಬಾರದು.
¶ “‘ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನೀವು ಯಾವ ಕೆಲಸವನ್ನೂ ಮತ್ತು ಊಟವನ್ನು ಮಾಡದೆ ನಿಮ್ಮನ್ನು ತಗ್ಗಿಸಿಕೊಳ್ಳುವುದಕ್ಕಾಗಿ ದೇವಾರಾಧನೆಗಾಗಿ ಸಭೆಕೂಡಬೇಕು.
¶ ಸೆರೆವಾಸದಿಂದ ಹಿಂದಿರುಗಿ ಬಂದು ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಾಯೇಲರು ಏಳನೆಯ ತಿಂಗಳಿನಲ್ಲಿ ಏಕಮನಸ್ಸಿನಿಂದ ಯೆರೂಸಲೇಮಿಗೆ ಕೂಡಿಬಂದರು.
ನಾನು ದುಃಖದಿಂದ ಅತ್ತು ಉಪವಾಸ ಮಾಡಿ ನನ್ನ ಆತ್ಮವನ್ನು ಕುಗ್ಗಿಸಿಕೊಂಡಿದ್ದೇನೆ, ಪರಿಹಾಸ್ಯಕ್ಕೆ ಕಾರಣವಾಯಿತು.
ಮನುಷ್ಯನು ತನ್ನ ಆತ್ಮವನ್ನು ಕುಂದಿಸಿಕೊಳ್ಳುವುದಕ್ಕಾಗಿ ನಾನು ನೇಮಿಸಿದ ಉಪವಾಸದಿನವು ಇಂಥದ್ದೋ,? ಒಬ್ಬನು ಜೊಂಡಿನಂತೆ ತಲೆಯನ್ನು ಬೊಗ್ಗಿಸಿಕೊಂಡು ಗೋಣಿತಟ್ಟನ್ನೂ ಮತ್ತು ಬೂದಿಯನ್ನೂ ಆಸನಮಾಡಿಕೊಳ್ಳುವುದು ಯೆಹೋವನಿಗೆ ಸಮರ್ಪಕವಾದ ಉಪವಾಸ ಎನ್ನುತ್ತೀರೋ?
ಮೂರು ವಾರ ಮುಗಿಯುವ ತನಕ ನಾನು ರುಚಿಪದಾರ್ಥವನ್ನು ತಿನ್ನಲಿಲ್ಲ. ಮಾಂಸವನ್ನೂ, ದ್ರಾಕ್ಷಾರಸವನ್ನೂ ನನ್ನ ಬಾಯಿಗೆ ಹಾಕಲಿಲ್ಲ. ಎಣ್ಣೆಯನ್ನು ಹಚ್ಚಿಕೊಳ್ಳಲಿಲ್ಲ.
ನಮ್ಮನ್ನು ನಾವೇ ಪರೀಕ್ಷಿಸಿಕೊಂಡರೆ ನ್ಯಾಯ ವಿಚಾರಣೆಗೊಳಗಾಗುವುದಿಲ್ಲ.
ಹೇಗೆಂದರೆ ದೇವರು ತನ್ನ ಕೆಲಸಗಳನ್ನು ಮುಗಿಸಿ ಹೇಗೆ ವಿಶ್ರಮಿಸಿಕೊಂಡನೋ ಹಾಗೆಯೇ ಆತನ ವಿಶ್ರಾಂತಿಯಲ್ಲಿ ಸೇರಿರುವವನು ಸಹ ತನ್ನ ಕೆಲಸಗಳನ್ನು ಮುಗಿಸಿ ವಿಶ್ರಮಿಸಿಕೊಂಡಿದ್ದಾನೆ.