TSK

TSK · ಯಾಜಕಕಾಂಡ 17:11

مراجع Treasury of Scripture Knowledge في ಕನ್ನಡ IRV.

العودة إلى المقطع

ಆದರೆ ಮಾಂಸವನ್ನು ಅದರ ಜೀವಸತ್ವವಾದ ರಕ್ತದೊಂದಿಗೆ ನೀವು ತಿನ್ನಬಾರದು. ಏಕೆಂದರೆ ರಕ್ತದಲ್ಲಿ ಜೀವ ಇದೆ.

ಸಮಾಧಾನಯಜ್ಞದ ಪಶುವಿನ ಕೊಬ್ಬನ್ನು ಅವನು ಹೋಮಮಾಡುವ ಪ್ರಕಾರವೇ ಇದರ ಎಲ್ಲಾ ಕೊಬ್ಬನ್ನು ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು.

¶ “ಆರೋನನು ತನಗಾಗಿ ದೋಷಪರಿಹಾರಕ ಯಜ್ಞದ ಹೋರಿಯನ್ನು ಸಮರ್ಪಿಸಿ ತನಗಾಗಿಯೂ ಮತ್ತು ತನ್ನ ಮನೆತನದವರಿಗಾಗಿಯೂ ದೋಷಪರಿಹಾರವನ್ನು ಮಾಡಬೇಕು.

ಏಕೆಂದರೆ ಪ್ರತಿದೇಹಿಗೂ ರಕ್ತವೇ ಪ್ರಾಣಾಧಾರವು. ಆದಕಾರಣ ನಾನು ಇಸ್ರಾಯೇಲರಿಗೆ, ಪ್ರತಿಪ್ರಾಣಿಗೂ ರಕ್ತವೇ ಪ್ರಾಣಾಧಾರವಾದುದರಿಂದ ನೀವು ಯಾವ ವಿಧವಾದ ಪ್ರಾಣಿಯ ರಕ್ತವನ್ನು ಉಣ್ಣಬಾರದು; ರಕ್ತಭೋಜನ ಮಾಡಿದವನಿಗೆ ಬಹಿಷ್ಕಾರವಾಗಬೇಕೆಂದು ಆಜ್ಞಾಪಿಸಿದ್ದೇನೆ.

‹ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವುದಕ್ಕಾಗಿ ಬರಲಿಲ್ಲ, ಸೇವೆ ಮಾಡುವುದಕ್ಕೂ, ಅನೇಕರ ವಿಮೋಚನೆಗಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದನು”› ಎಂದು ಹೇಳಿದನು.

ಯೇಸು ಅವರಿಗೆ, ‹“ಇದು ನನ್ನ ರಕ್ತ, ಬಹು ಜನರಿಗಾಗಿ ಸುರಿಸಲ್ಪಡುವ›‹ಒಡಂಬಡಿಕೆಯ ರಕ್ತ.›

ಈಗ ನಾವು ಆತನ ರಕ್ತದಿಂದ ನೀತಿವಂತರಾಗಿರಲಾಗಿ ಆತನ ಮೂಲಕವಾಗಿ ದೇವರ ಕೋಪದಿಂದ ಖಂಡಿತವಾಗಿಯೂ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ?

ಧರ್ಮಶಾಸ್ತ್ರದ ಪ್ರಕಾರ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು. ರಕ್ತಧಾರೆ ಇಲ್ಲದೆ ಪಾಪ ಕ್ಷಮಾಪಣೆಯು ಉಂಟಾಗುವುದಿಲ್ಲ.

ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ, ವಿಧೇಯರಾಗುವುದಕ್ಕಾಗಿ, ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗಿ, ತಂದೆಯಾದ ದೇವರ ಭವಿಷ್ಯದ ಜ್ಞಾನಾನುಸಾರವಾಗಿ ಆರಿಸಿಕೊಳಲ್ಪಟ್ಟವರಿಗೆ ಬರೆಯುವುದೇನೆಂದರೆ ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ಉಂಟಾಗಲಿ.

ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತ ಯಜ್ಞವಾಗಿದ್ದಾನೆ. ನಮ್ಮ ಪಾಪಗಳಿಗೆ ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳಿಗೂ ಪ್ರಾಯಶ್ಚಿತ್ತವಾಗಿದ್ದಾನೆ.