¶ “‘ಏಳು ದಿನಗಳವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಬಿಡಬೇಕು. ಏಕೆಂದರೆ ಮೊದಲನೆಯ ದಿನದಿಂದ ಏಳನೆಯ ದಿನದವರೆಗೆ ಹುಳಿರೊಟ್ಟಿಯನ್ನು ತಿನ್ನುವವನು ಇಸ್ರಾಯೇಲಿನೊಳಗಿಂದ ತೆಗೆದುಹಾಕಲ್ಪಡಬೇಕು.
TSK
TSK · ಯಾಜಕಕಾಂಡ 17:4
مراجع Treasury of Scripture Knowledge في ಕನ್ನಡ IRV.
ಇದರಂತೆ ತೈಲವನ್ನು ಮಾಡುವವನಾಗಲಿ ಇದನ್ನು ಯಾಜಕನಲ್ಲದವನ ಮೇಲೆ ಹಚ್ಚುವವನಾಗಲಿ ತನ್ನ ಕುಲದಿಂದ ಬಹಿಷ್ಕೃತನಾಗುವನು.”
¶ “‘ಅವನು ದನವನ್ನು ಸರ್ವಾಂಗಹೋಮವಾಗಿ ಸಮರ್ಪಿಸುವುದಾದರೆ ಪೂರ್ಣಾಂಗವಾದ ಗಂಡನ್ನು ತರಬೇಕು. ತನ್ನನ್ನು ಯೆಹೋವನು ಮೆಚ್ಚುವಂತೆ ದೇವದರ್ಶನದ ಗುಡಾರದ ಬಾಗಿಲಿಗೆ ಅದನ್ನು ತರಬೇಕು.
ಆ ಯಜ್ಞಪಶುವಿನ ಮಾಂಸದಲ್ಲಿ ಸ್ವಲ್ಪವನ್ನಾದರೂ ಮೂರನೆಯ ದಿನದಲ್ಲಿ ಊಟಮಾಡಿದರೆ ಆ ಯಜ್ಞವು ಸಮರ್ಪಕವಾದದ್ದಲ್ಲ; ಅರ್ಪಿಸಿದವನಿಗೆ ಅದರಿಂದ ಫಲವೇನೂ ದೊರೆಯುವುದಿಲ್ಲ. ಅದು ಅಸಹ್ಯವಾದುದರಿಂದ ಅದನ್ನು ತಿಂದವನು ಆ ಪಾಪದ ಫಲವನ್ನು ಅನುಭವಿಸಬೇಕು.
ಏಕೆಂದರೆ ಪ್ರತಿದೇಹಿಗೂ ರಕ್ತವೇ ಪ್ರಾಣಾಧಾರವು. ಆದಕಾರಣ ನಾನು ಇಸ್ರಾಯೇಲರಿಗೆ, ಪ್ರತಿಪ್ರಾಣಿಗೂ ರಕ್ತವೇ ಪ್ರಾಣಾಧಾರವಾದುದರಿಂದ ನೀವು ಯಾವ ವಿಧವಾದ ಪ್ರಾಣಿಯ ರಕ್ತವನ್ನು ಉಣ್ಣಬಾರದು; ರಕ್ತಭೋಜನ ಮಾಡಿದವನಿಗೆ ಬಹಿಷ್ಕಾರವಾಗಬೇಕೆಂದು ಆಜ್ಞಾಪಿಸಿದ್ದೇನೆ.
ಅವನು ತನ್ನ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಕೊಟ್ಟು, ನನ್ನ ದೇವಸ್ಥಾನವನ್ನು ಅಶುದ್ಧಮಾಡಿ, ನನ್ನ ಪರಿಶುದ್ಧವಾದ ಹೆಸರನ್ನು ಅಪಕೀರ್ತಿಗೆ ಒಳಪಡಿಸಿದರೆ, ನಾನು ಅವನಿಗೆ ವಿಮುಖನಾಗಿ ಅವನನ್ನು ಕುಲದಿಂದ ತೆಗೆದುಹಾಕುವೆನು.
ಯಾವನಾದರೂ ಮುಟ್ಟಾದ ಸ್ತ್ರೀಯನ್ನು ಸಂಗಮಿಸಿದರೆ ಅವನು ಅವಳ ರಕ್ತಸ್ರಾವದ ಸ್ಥಾನವನ್ನು ಬಯಲುಪಡಿಸಿದವನು, ಅವಳು ಬಯಲುಪಡಿಸಿಕೊಂಡವಳು; ಆದುದರಿಂದ ಅವರಿಬ್ಬರನ್ನು ಕುಲದಿಂದ ಹೊರಗೆ ಹಾಕಬೇಕು.
ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಲ್ಲಾ ಕುಲಗಳೊಳಗಿಂದ ಆರಿಸಿಕೊಳ್ಳುವನು. ನೀವು ಆ ಸ್ಥಳದಿಂದ ಆತನು ಆರಿಸಿಕೊಳ್ಳುವ ಸ್ಥಳಕ್ಕೆ ಸೇರಿ ಬರಬೇಕು. ಅಲ್ಲೇ ಆತನು ವಾಸಿಸುವನು.
ನಿಮ್ಮ ಕುಲಗಳಲ್ಲಿ ಯಾವುದೋ ಒಂದು ಕುಲದಲ್ಲಿ ಯೆಹೋವನು ಆರಿಸಿಕೊಳ್ಳುವ ಸ್ಥಳದಲ್ಲೇ ನಿಮ್ಮ ಸರ್ವಾಂಗಹೋಮಗಳನ್ನು ಸಮರ್ಪಿಸಬೇಕು; ಅಲ್ಲಿಯೇ ನಾನು ಆಜ್ಞಾಪಿಸಿದ ಎಲ್ಲಾ ಆಚಾರಗಳನ್ನು ನಡೆಸಬೇಕು.
ಯೆಹೋವನು ಯಾರ ಲೆಕ್ಕಕ್ಕೆ ಅಪರಾಧವನ್ನು ಎಣಿಸುವುದಿಲ್ಲವೋ? ಯಾರ ಹೃದಯದಲ್ಲಿ ಕಪಟವಿರುವುದಿಲ್ಲವೋ ಅವನು ಧನ್ಯನು.
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ದೇಶದಲ್ಲಿ ಇಸ್ರಾಯೇಲ್ ವಂಶದವರೆಲ್ಲರೂ ನನ್ನ ಪರಿಶುದ್ಧವಾದ ಬೆಟ್ಟದಲ್ಲಿ, ಇಸ್ರಾಯೇಲಿನ ಪರ್ವತಾಗ್ರದಲ್ಲಿ ನನ್ನನ್ನು ಸೇವಿಸುವರು; ಅಲ್ಲೇ ಅವರಿಗೆ ಪ್ರಸನ್ನನಾಗುವೆನು, ಅಲ್ಲೇ ನಿಮ್ಮ ಕಾಣಿಕೆಗಳನ್ನೂ, ಉತ್ತಮ ನೈವೇದ್ಯಗಳನ್ನೂ, ಮೀಸಲಾದ ಎಲ್ಲವನ್ನೂ ಬರಮಾಡಿಕೊಳ್ಳುವೆನು.
‹ನಾನೇ ಆ ಬಾಗಿಲು. ನನ್ನ ಮುಖಾಂತರವಾಗಿ ಯಾವನಾದರೂ ಒಳಗೆ ಪ್ರವೇಶಿಸಿದರೆ ಅವನು ಸುರಕ್ಷಿತನಾಗಿದ್ದು ಒಳಗೆ ಹೋಗುವನು, ಹೊರಗೆ ಬರುವನು ಮತ್ತು ಮೇವನ್ನು ಕಂಡುಕೊಳ್ಳುವನು.›
ದೇವರು ಯಾವನನ್ನು ಪುಣ್ಯಕ್ರಿಯೆಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾನೋ ಅವನು ಧನ್ಯನೆಂದು ದಾವೀದನು ಸಹ ಹೇಳುತ್ತಾನೆ. ಹೇಗೆಂದರೆ,
ಅಪರಾಧಗಳು ಹೆಚ್ಚಾಗುತ್ತಾ ಬಂದೆಂತಲ್ಲಾ ಧರ್ಮಶಾಸ್ತ್ರವು ಅದರೊಂದಿಗೆ ಪ್ರವೇಶಿಸಿತು. ಆದರೆ ಪಾಪವು ಹೆಚ್ಚಾದಾಗಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.