ಅಬ್ರಹಾಮನು ಬೇರ್ಷೆಬದಲ್ಲಿ ಪಿಚುಲ ವೃಕ್ಷವನ್ನು ನೆಟ್ಟು ಅಲ್ಲಿ ನಿತ್ಯದೇವರಾದ ಯೆಹೋವನ ಹೆಸರನ್ನು ಹೇಳಿಕೊಂಡು ಆರಾಧಿಸಿದನು.
TSK
TSK · ಯಾಜಕಕಾಂಡ 17:5
مراجع Treasury of Scripture Knowledge في ಕನ್ನಡ IRV.
ಅಬ್ರಹಾಮನು ಕಣ್ಣೆತ್ತಿ ನೋಡಲಾಗಿ ತನ್ನ ಹಿಂದೆ, ಒಂದು ಟಗರು ಪೊದೆಯಲ್ಲಿ ಕೊಂಬುಗಳಿಂದ ಸಿಕ್ಕಿ ಹಾಕಿಕೊಂಡಿರುವುದನ್ನು ಕಂಡನು. ಅವನು ಹೋಗಿ ಅದನ್ನು ಹಿಡಿದು ತಂದು ತನ್ನ ಮಗನಿಗೆ ಬದಲಾಗಿ ಹೋಮಮಾಡಿದನು.
ಇಸ್ರಾಯೇಲರ ಯೌವನಸ್ಥರಿಗೆ ನೀವು ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಮಾಡಿ ಸಮಾಧಾನ ಯಜ್ಞಕ್ಕಾಗಿ ಹೋರಿಗಳನ್ನು ಸಮರ್ಪಿಸಬೇಕೆಂದು ಅಪ್ಪಣೆಕೊಟ್ಟು ಕಳುಹಿಸಿದನು.
¶ “‘ಜನರು ಯೆಹೋವನಿಗೆ ಅರ್ಪಿಸುವ ಸಮಾಧಾನಯಜ್ಞದ ನಿಯಮಗಳು ಇವೇ.
ಆ ವರೆಗೂ ಯೆಹೋವನ ನಾಮಕ್ಕೋಸ್ಕರ ಆಲಯವಿರಲಿಲ್ಲವಾದುದರಿಂದ ಜನರು ಪೂಜಾಸ್ಥಳಗಳಲ್ಲಿ ಯಜ್ಞವನ್ನು ಆರ್ಪಿಸುತ್ತಿದ್ದರು.
ತಮ್ಮ ಪೂರ್ವಿಕರಂತೆಯೇ ಅವರೂ ತಮಗೋಸ್ಕರ ಪೂಜಾ ಸ್ಥಳಗಳನ್ನು ನಿರ್ಮಿಸಿಕೊಂಡರು. ಪ್ರತಿಯೊಂದು ದಿಣ್ಣೆಗಳ ಮೇಲೆ ಹಾಗೂ ಚೆನ್ನಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಕಲ್ಲಿನ ಕಂಬಗಳನ್ನೂ ಮತ್ತು ಅಶೇರ ವಿಗ್ರಹಸ್ತಂಭಗಳನ್ನೂ ನಿಲ್ಲಿಸಿದರು.
ಎಲ್ಲಾ ದಿನ್ನೆಗಳ ಮೇಲೆ ಮತ್ತು ಎಲ್ಲಾ ಹಸುರು ಮರಗಳ ಕೆಳಗೆ ಕಲ್ಲು ಕಂಬ, ಅಶೇರ ವಿಗ್ರಹಸ್ತಂಭ ಇವುಗಳನ್ನು ನಿಲ್ಲಿಸಿದರು.
ನಾನು ಪ್ರಮಾಣ ಪೂರ್ವಕವಾಗಿ ಅವರಿಗೆ ವಾಗ್ದಾನ ಮಾಡಿದ ದೇಶಕ್ಕೆ ಅವರನ್ನು ಸೇರಿಸಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳನ್ನೂ ನೋಡಿ ಅಲ್ಲಿ ಯಜ್ಞಪಶುಗಳನ್ನು ವಧಿಸಿ, ನನ್ನನ್ನು ರೇಗಿಸುವ ನೈವೇದ್ಯವನ್ನರ್ಪಿಸಿ, ಸುಗಂಧ ಹೋಮಮಾಡಿ, ಪಾನದ್ರವ್ಯವನ್ನು ಸುರಿದು, ಬಲಿ ಅರ್ಪಿಸುತ್ತಿದ್ದರು.’