“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಇಸ್ರಾಯೇಲರಲ್ಲಾಗಲಿ ಅಥವಾ ಅವರ ನಡುವೆ ವಾಸವಾಗಿರುವ ಪರದೇಶದವರಲ್ಲಾಗಲಿ ಯಾವನಾದರೂ ತನ್ನ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಕೊಟ್ಟರೆ, ಅವನಿಗೆ ಮರಣಶಿಕ್ಷೆಯಾಗಬೇಕು; ದೇಶದ ಜನರು ಅವನನ್ನು ಕಲ್ಲೆಸೆದು ಕೊಲ್ಲಬೇಕು.
TSK
TSK · ಯಾಜಕಕಾಂಡ 18:21
مراجع Treasury of Scripture Knowledge في ಕನ್ನಡ IRV.
ಅವರು ದೇವರಿಗೆ ಮೀಸಲಾಗಿರಬೇಕು; ತಾವು ಸೇವಿಸುವ ದೇವರ ಹೆಸರನ್ನು ಅಪಕೀರ್ತಿಗೆ ಗುರಿಪಡಿಸಬಾರದು. ತಮ್ಮ ದೇವರ ಆಹಾರವನ್ನು ಅಂದರೆ ಯೆಹೋವನ ಹೋಮದ್ರವ್ಯಗಳನ್ನು ಅವರು ಸಮರ್ಪಿಸುವವರು ಆಗಿರುವುದರಿಂದ ಪವಿತ್ರರಾಗಿರಬೇಕು.
ನನ್ನ ಪರಿಶುದ್ಧ ನಾಮದ ಘನತೆಗೆ ಕುಂದು ತರಬಾರದು; ಇಸ್ರಾಯೇಲರಲ್ಲಿ ನಾನು ಪರಿಶುದ್ಧನೆಂದು ಎಣಿಸಲ್ಪಡಬೇಕು; ನಾನು ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು.
ಯೆಹೋವನಿಗೆ ಅಸಹ್ಯವಾಗಿರುವ ಹಲವು ಕೆಟ್ಟಕೆಲಸಗಳನ್ನು ಅವರು ತಮ್ಮ ದೇವತೆಗಳಿಗೋಸ್ಕರ ನಡಿಸುತ್ತಾರಲ್ಲಾ. ತಮ್ಮ ಗಂಡು ಹೆಣ್ಣು ಮಕ್ಕಳನ್ನು ತಮ್ಮ ದೇವತೆಗಳಿಗೋಸ್ಕರ ಬೆಂಕಿಯಲ್ಲಿ ಸುಡುತ್ತಾರಲ್ಲಾ. ನೀವು ನಿಮ್ಮ ದೇವರಾದ ಯೆಹೋವನನ್ನು ಹಾಗೆ ಸೇವಿಸಲೇಬಾರದು.
ಅವನು ಯೆರೂಸಲೇಮಿನ ಮೂಡಲಲ್ಲಿರುವ ಗುಡ್ಡದಲ್ಲಿ ಮೋವಾಬ್ಯರ ಕೆಮೋಷ್ ಎಂಬ ಅಸಹ್ಯ ವಿಗ್ರಹಕ್ಕೂ ಮತ್ತು ಅಮ್ಮೋನಿಯರ ಮೋಲೆಕ್ ಎಂಬ ಅಸಹ್ಯ ವಿಗ್ರಹಕ್ಕೂ ಪೂಜಾಸ್ಥಳಗಳನ್ನು ಕಟ್ಟಿಸಿದನು.
ಇದಲ್ಲದೆ, ಅವನು ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದುದಲ್ಲದೆ, ಯೆಹೋವನು ಇಸ್ರಾಯೇಲರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯವಾದ ಪೂಜಾಕಾರ್ಯಗಳನ್ನು ಅನುಸರಿಸಿ ತನ್ನ ಮಗನನ್ನು ಅಗ್ನಿಗೆ ಬಲಿಕೊಟ್ಟನು.
ಇದಲ್ಲದೆ ಅವನು ತನ್ನ ಸ್ವಂತ ಮಗನನ್ನೇ ಆಹುತಿಕೊಟ್ಟನು. ಕಣಿಕೇಳಿಸುವುದು, ಮಾಟಮಂತ್ರಗಳನ್ನು ಮಾಡಿಸುವುದು, ಜೋತಿಷ್ಯ, ಮುಹೂರ್ತಗಳನ್ನು ನೋಡುವುದು ಮತ್ತು ಭೂತಪ್ರೇತಗಳನ್ನೂ ವಿಚಾರಿಸುವುದು, ಇವೇ ಮೊದಲಾದ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನು ಎಬ್ಬಿಸಿದನು.
ಅವರು ತಮ್ಮ ಗಂಡು ಹೆಣ್ಣು ಮಕ್ಕಳನ್ನು ಭೂತಗಳಿಗೆ ಬಲಿಕೊಟ್ಟರು.
ಅವರು ಗಂಡು ಮತ್ತು ಹೆಣ್ಣು ಮಕ್ಕಳನ್ನು ಆಹುತಿಕೊಡುವುದಕ್ಕೆ ಬೆನ್ ಹಿನ್ನೋಮ್ ತಗ್ಗಿನಲ್ಲಿನ ‘ತೋಫೆತ್’ ಎಂಬ ಪೂಜಾಸ್ಥಳವನ್ನು ಕಟ್ಟಿದ್ದಾರೆ. ನಾನು ಆ ಸಂಸ್ಕಾರವನ್ನು ವಿಧಿಸಲಿಲ್ಲ, ಅದು ನನ್ನ ಮನಸ್ಸಿನಲ್ಲಿ ಹುಟ್ಟಲೂ ಇಲ್ಲ.
ನೀವು ಬಲಿಯರ್ಪಿಸುತ್ತಾ ನಿಮ್ಮ ಮಕ್ಕಳನ್ನು ಆಹುತಿಕೊಟ್ಟು ಇಂದಿನವರೆಗೂ ನಿಮ್ಮನ್ನು ಅಶುದ್ಧ ಮಾಡಿಕೊಳ್ಳುತ್ತಿದ್ದೀರೋ? ಇಸ್ರಾಯೇಲ್ ವಂಶದವರೇ, ನಾನು ನಿಮ್ಮಂಥವರಿಗೆ ದೈವೋತ್ತರವನ್ನು ದಯಪಾಲಿಸಬಹುದೋ? ನನ್ನ ಜೀವದಾಣೆ, ನಿಮಗೆ ದೈವೋತ್ತರವನ್ನು ದಯಪಾಲಿಸುವುದಿಲ್ಲ” ಇದು ಕರ್ತನಾದ ಯೆಹೋವನ ನುಡಿ.
ಅವರು ಆ ಜನಾಂಗಗಳೊಳಗೆ ಸೇರಿಕೊಂಡ ಮೇಲೆ, ‘ಇವರು ಯೆಹೋವನ ಪ್ರಜೆಗಳು, ಆತನ ದೇಶದಿಂದ ಭ್ರಷ್ಟರಾಗಿ ಬಂದಿದ್ದಾರೆ’ ಎಂದು ಅವರಿಗೆ ಹೇಳಿ, ನನ್ನ ಪರಿಶುದ್ಧ ಹೆಸರನ್ನು ಅಪವಿತ್ರ ಮಾಡುವರು.
ಸಿಕ್ಕೊತ್ ಎಂಬ ನಿಮ್ಮ ಒಡೆಯನನ್ನು, ಕಿಯೂನ್ ಎಂಬ ನಿಮ್ಮ ನಕ್ಷತ್ರ ದೇವತೆಯನ್ನು, ನಿರ್ಮಿಸಿಕೊಂಡಿರುವ ನಿಮ್ಮ ಮೂರ್ತಿಗಳನ್ನು ನೀವು ಹೊತ್ತುಕೊಂಡು ಹೋಗಬೇಕಾಗುವುದು.
ಅದಕ್ಕೆ ಬದಲಾಗಿ ನೀವು ಆರಾಧಿಸಬೇಕೆಂದು ಮಾಡಿಕೊಂಡ ಮೂರ್ತಿಗಳನ್ನು ಅಂದರೆ ಮೊಲೋಖನ ಗುಡಾರವನ್ನೂ ರೆಫಾನ್ ದೇವತೆಯ ನಕ್ಷತ್ರರೂಪವನ್ನೂ ಹೊತ್ತುಕೊಂಡು ಹೋಗುತ್ತಿದ್ದಿರಲ್ಲಾ. ಆದುದರಿಂದ ನಾನು ನಿಮ್ಮನ್ನು ಬಾಬಿಲೋನಿನ ಆಚೆಗೆ ಗಡಿಪಾರು ಮಾಡುವೆನು’ ಎಂಬುದೇ ಆಗಿದೆ.
“ನಿಮ್ಮ ದೆಸೆಯಿಂದ ಅನ್ಯಜನರ ಮಧ್ಯದಲ್ಲಿ ದೇವರ ನಾಮವು ದೂಷಣೆಗೆ ಗುರಿಯಾಗುತ್ತಿದೆಂದು” ಬರೆದಿದೆಯಲ್ಲಾ.