ಕಳ್ಳನು ಸಿಕ್ಕದೇ ಹೋದರೆ ಆ ಮನೆಯ ಯಜಮಾನನು ತಾನೇ ಆ ಒಡವೆಗಳನ್ನು ಕದ್ದನೋ ಇಲ್ಲವೋ ಎಂಬುದನ್ನು ದೃಢಪಡಿಸುವುದಕ್ಕಾಗಿ ದೇವರ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕು.
TSK
TSK · ಯಾಜಕಕಾಂಡ 19:13
مراجع Treasury of Scripture Knowledge في ಕನ್ನಡ IRV.
ಯಜಮಾನನು ಅದರ ಹತ್ತಿರದಲ್ಲೇ ಇದಿದ್ದರೆ, ಅವನಿಗೆ ಈಡುಕೊಡಬೇಕಾದ ಅಗತ್ಯವಿಲ್ಲ. ಅದನ್ನು ಬಾಡಿಗೆಗೆ ತೆಗೆದುಕೊಂಡಿದ್ದರೆ ಅದಕ್ಕೆ ಉಂಟಾದ ನಷ್ಟವು ಬಾಡಿಗೆಯ ಲೆಕ್ಕಕ್ಕೆ ಎಣಿಕೆಯಾಗಬೇಕು.
ನಾನು ಕೋಪಗೊಂಡು ನಿಮ್ಮ ಶತ್ರುಗಳನ್ನು ಕತ್ತಿಯಿಂದ ಸಂಹಾರಮಾಡಿಸುವೆನು. ನಿಮ್ಮ ಹೆಂಡತಿಯರು ವಿಧವೆಯರಾಗುವರು. ನಿಮ್ಮ ಮಕ್ಕಳು ದಿಕ್ಕಿಲ್ಲದವರಾಗುವರು.
ನೀವು ಸ್ಥಿರಸೊತ್ತನ್ನು ಸ್ವದೇಶದವರೊಡನೆ ಕ್ರಯ ಮತ್ತು ವಿಕ್ರಯ ಮಾಡುವಾಗ ಇದರ ವಿಷಯದಲ್ಲಿ ಅನ್ಯಾಯಮಾಡಬಾರದು.
¶ ನೀವು ಸ್ವದೇಶದವರಲ್ಲಿಯಾಗಲಿ ಅಥವಾ ನಿಮ್ಮಲ್ಲಿರುವ ಅನ್ಯದೇಶದವರಲ್ಲಿಯಾಗಲಿ ಗತಿಯಿಲ್ಲದ ಬಡ ಕೂಲಿಯವನಿಗೆ
ನಾನು ಸಂಜೆಯನ್ನು ಬಯಸುವ ದಾಸನಂತೆಯೂ, ಕೂಲಿಯನ್ನು ನಿರೀಕ್ಷಿಸುವ ಆಳಿನಂತೆಯೂ ಇದ್ದೇನೆ.
ತೂಕದ ಕಲ್ಲನ್ನೂ, ಅಳತೆಯ ಪಾತ್ರೆಯನ್ನೂ ಹೆಚ್ಚಿಸುವುದು, ತಗ್ಗಿಸುವುದು ಇವೆರಡೂ ಯೆಹೋವನಿಗೆ ಅಸಹ್ಯ.
ಯೆಹೋವನು, ನೀತಿ, ನ್ಯಾಯಗಳನ್ನು ಆಚರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ. ವಿದೇಶಿ, ಅನಾಥ, ವಿಧವೆ ಇವರಿಗೆ ಯಾವ ಅನ್ಯಾಯವನ್ನೂ ಮತ್ತು ಹಿಂಸೆಯನ್ನೂ ಮಾಡಬೇಡಿರಿ; ನಿರ್ದೋಷಿಯ ರಕ್ತವನ್ನು ಈ ಸ್ಥಳದಲ್ಲಿ ಸುರಿಸಬೇಡಿರಿ” ಎಂದು ಹೇಳುತ್ತಾನೆ.
ಸಾಮಾನ್ಯ ಜನರನ್ನು ಹಿಂಸಿಸಿ ಸೂರೆಮಾಡಿದ್ದಾರೆ, ದೀನದರಿದ್ರರನ್ನು ಬಾಧಿಸಿ, ವಿದೇಶಿಗಳನ್ನು ಅನ್ಯಾಯಕ್ಕೆ ಒಳಪಡಿಸಿದ್ದಾರೆ.
‹ನರಹತ್ಯಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು. ಮೋಸಮಾಡಬಾರದು, ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು ಎಂಬ ದೇವರಾಜ್ಞೆಗಳು ನಿನಗೆ ಗೊತ್ತಿವೆಯಷ್ಟೆ”› ಎಂದು ಹೇಳಿದನು.
ಈ ವಿಷಯದಲ್ಲಿ ಯಾರೂ ತನ್ನ ಸಹೋದರನನ್ನು ವಂಚಿಸಿ ಕೇಡು ಮಾಡಬಾರದು. ನಾವು ಮೊದಲೇ ತಿಳಿಸಿ, ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಪ್ರತಿಕಾರ ಮಾಡುವವನಾಗಿದ್ದಾನೆ.