¶ ತಂದೆಯು ಯಾಕೋಬನಿಗೆ ಮಾಡಿದ ಆಶೀರ್ವಾದದ ನಿಮಿತ್ತ ಏಸಾವನು ಯಾಕೋಬನನ್ನು ಹಗೆಮಾಡಿ ತನ್ನ ಮನಸ್ಸಿನೊಳಗೆ, “ತಂದೆಗೋಸ್ಕರ ದುಃಖಿಸುವ ಕಾಲ ಸಮೀಪಿಸಿತು. ತರುವಾಯ ನನ್ನ ತಮ್ಮನಾದ ಯಾಕೋಬನನ್ನು ಕೊಲ್ಲುವೆನು” ಎಂದುಕೊಂಡನು.
TSK
TSK · ಯಾಜಕಕಾಂಡ 19:17
مراجع Treasury of Scripture Knowledge في ಕನ್ನಡ IRV.
ಆಗ ನಾನು ಯೆಹೂದದ ಶ್ರೀಮಂತರಿಗೆ, “ನೀವು ಮಾಡುವುದು ಎಂಥ ದುಷ್ಕೃತ್ಯ, ನೀವು ಸಬ್ಬತ್ ದಿನವನ್ನು ಅಶುದ್ಧ ಮಾಡುತ್ತಿದ್ದೀರಿ.
ಧರ್ಮನಿಂದಕನನ್ನು ಗದರಿಸಬೇಡ, ನಿನ್ನನ್ನು ಹಗೆಮಾಡುವನು. ಜ್ಞಾನವಂತನನ್ನು ಗದರಿಸಿದರೆ ನಿನ್ನನ್ನು ಪ್ರೀತಿಸುವನು.
ಕಾರ್ಯದಿಂದ ಹೊರಪಡದ ಪ್ರೀತಿಗಿಂತಲೂ, ಬಹಿರಂಗವಾದ ಗದರಿಕೆಯು ಲೇಸು.
‹ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನಿನ್ನ ಸಹೋದರನು ತಪ್ಪುಮಾಡಿದರೆ ಅವನನ್ನು ಗದರಿಸು. ಅವನು ಪಶ್ಚಾತ್ತಾಪಪಟ್ಟರೆ ಅವನ ತಪ್ಪನ್ನು ಕ್ಷಮಿಸಿಬಿಡು.›
ಹೀಗಿದ್ದರೂ ನೀವು ದುಃಖಿಸದೆ, ಈ ಕಾರ್ಯಮಾಡಿದವನನ್ನು ನಿಮ್ಮೊಳಗಿಂದ ಬಹಿಷ್ಕರಿಸದೆ, ಉಬ್ಬಿಕೊಂಡಿದ್ದೀರಲ್ಲಾ.
¶ ಸಹೋದರರೇ, ನಿಮ್ಮಲ್ಲಿ ಯಾರಾದರೂ ಯಾವುದಾದರೂ ಪಾಪದಲ್ಲಿ ಸಿಕ್ಕಿಹಾಕಿಕೊಂಡಿದ್ದರೆ ಅಂಥವರನ್ನು ಆತ್ಮಭರಿತರಾದ ನೀವು ಶಾಂತಭಾವದಿಂದ ತಿದ್ದಿ ಸರಿಮಾಡಿರಿ. ನೀವಾದರೂ ಶೋಧನೆಗೆ ಒಳಗಾಗದಂತೆ ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ.
ಪಾಪದಲ್ಲಿ ನಡೆಯುವವರನ್ನು ಎಲ್ಲರ ಮುಂದೆಯೇ ಗದರಿಸು. ಇವರಿಂದ ಉಳಿದವರಿಗೂ ಭಯವುಂಟಾಗುವುದು.
ದೇವರ ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತನಾಗಿರು. ಪೂರ್ಣ ದೀರ್ಘಶಾಂತಿಯಿಂದ ಉಪದೇಶಿಸುತ್ತಾ ಖಂಡಿಸು, ಗದರಿಸು, ಎಚ್ಚರಿಸು.
¶ ಈ ಕಾರ್ಯಗಳ ವಿಷಯದಲ್ಲಿ ಬೋಧಿಸುತ್ತಾ, ಎಚ್ಚರಿಸುತ್ತಾ, ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದ ಹಾಗೆ ನೋಡಿಕೋ.
ಆದರೆ ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲೆಯಲ್ಲಿದ್ದಾನೆ ಮತ್ತು ಕತ್ತಲೆಯಲ್ಲಿ ನಡೆಯುತ್ತಿದ್ದಾನೆ. ಕತ್ತಲೆಯು ಅವನ ಕಣ್ಣುಗಳನ್ನು ಕುರುಡುಮಾಡಿರುವುದರಿಂದ ತಾನು ಎಲ್ಲಿಗೆ ಹೋಗುತ್ತಿದ್ದೇನೆ ಎಂದು ಅವನಿಗೆ ತಿಳಿಯದು.
ಈ ಉಪದೇಶವನ್ನು ಮೀರಿದ ಯಾವನಾದರೂ ನಿಮ್ಮ ಬಳಿಗೆ ಬಂದರೆ ಅವನನ್ನು ಮನೆಯೊಳಗೆ ಸೇರಿಸಿಕೊಳ್ಳಬೇಡಿರಿ. ಅವನಿಗೆ ಶುಭವಾಗಲಿ ಎಂದು ಹೇಳಬೇಡಿರಿ.