ಮನೆಯ ಹೊರಗೆ ಕತ್ತಿಯೂ, ಒಳಗೆ ಭಯವೂ ಇರುವುದು. ಯೌವನಸ್ಥರು, ಕನ್ಯೆಯರು, ಮೊಲೆಕೂಸುಗಳು, ನರೇತಲೆಯವರು ಇವರೆಲ್ಲರೂ ಕತ್ತಿಯಿಂದ ಕೊಲ್ಲಲ್ಪಡುವರು.
TSK
TSK · ಯಾಜಕಕಾಂಡ 19:18
مراجع Treasury of Scripture Knowledge في ಕನ್ನಡ IRV.
ಇದಕ್ಕೆ ಮೊದಲೇ ಅಬ್ಷಾಲೋಮನು ತನ್ನ ಆಳುಗಳಿಗೆ, “ಕೇಳಿರಿ, ಅಮ್ನೋನನು ದ್ರಾಕ್ಷಾರಸ ಕುಡಿದು ಮತ್ತನಾಗಿರುವಾಗ ನಾನು ಹೊಡೆಯಬೇಕೆಂದು ಹೇಳಿದ ಕೂಡಲೆ ಅವನನ್ನು ಹೊಡೆದು ಕೊಂದುಹಾಕಿರಿ. ಹೆದರಬೇಡಿರಿ, ನಿಮಗೆ ಆಜ್ಞಾಪಿಸಿದವನು ನಾನಲ್ಲವೇ? ಧೈರ್ಯದಿಂದಿರಿ ಮತ್ತು ಶೂರರಾಗಿರಿ” ಎಂದು ಹೇಳಿದನು.
ಕೇಡಿಗೆ ಮುಯ್ಯಿತೀರಿಸುವೆನು ಅನ್ನಬೇಡ, ಯೆಹೋವನನ್ನು ನಿರೀಕ್ಷಿಸಿಕೊಂಡಿರು, ಆತನೇ ನಿನ್ನನ್ನು ಉದ್ಧರಿಸುವನು.
¶ ಇಗೋ ಒಬ್ಬನು ಯೇಸುವಿನ ಬಳಿಗೆ ಬಂದು, “ಬೋಧಕನೇ ನಾನು ನಿತ್ಯಜೀವವನ್ನು ಹೊಂದುವುದಕ್ಕೆ ಯಾವ ಒಳ್ಳೆ ಕಾರ್ಯವನ್ನು ಮಾಡಬೇಕು?” ಎಂದು ಕೇಳಿದನು.
‹ಇದಕ್ಕೆ ಸಮಾನವಾದ ಎರಡನೆಯ ಆಜ್ಞೆ ಯಾವುದೆಂದರೆ,›‹‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂಬುದೇ.›
ಅದಕ್ಕೆ ಅವನು, “‘ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣ ಬುದ್ಧಿಯಿಂದಲೂ ಪ್ರೀತಿಸಬೇಕು.’ ಮತ್ತು ‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂದು ಬರೆದದೆ” ಅಂದನು.
¶ ಯಾರಿಗೂ ಅಪಕಾರಕ್ಕೆ ಅಪಕಾರವನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವುದು ಗೌರವವಾದದ್ದೋ ಯುಕ್ತವಾದದ್ದೋ ಅದನ್ನೇ ಯೋಚಿಸಿ ಒಳ್ಳೆಯದನ್ನು ಮಾಡಿರಿ.
ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ. ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು. ಅವನು ಸುಮ್ಮನೆ ಕೈಯಲ್ಲಿ ಅಧಿಕಾರದ ದಂಡವನ್ನು ಹಿಡಿದಿಲ್ಲ. ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ಮಾಡುವವನಿಗೆ ದೇವರ ದಂಡನೆಯನ್ನು ವಿಧಿಸುತ್ತಾನೆ.
“ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು” ಎಂಬ ಒಂದೇ ಮಾತಿನಲ್ಲಿ ಧರ್ಮಶಾಸ್ತ್ರವೆಲ್ಲಾ ಅಡಗಿದೆ.
ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನಗಳನ್ನೂ ನಿಮ್ಮಿಂದ ದೂರ ಮಾಡಿರಿ.
“ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನೆಂದು” ಹೇಳಿದಾತನನ್ನು ಬಲ್ಲೆವು. ಇದಲ್ಲದೆ “ಕರ್ತನು ತನ್ನ ಜನರಿಗೆ ನ್ಯಾಯ ತೀರಿಸುವನು” ಎಂದು ಹೇಳಿಯದೆ.
¶ ಆದಕಾರಣ ಎಲ್ಲಾ ಕೆಟ್ಟತನವನ್ನೂ, ಎಲ್ಲಾ ವಂಚನೆಯನ್ನೂ, ಕಪಟವನ್ನೂ, ಹೊಟ್ಟೆಕಿಚ್ಚನ್ನೂ, ಎಲ್ಲಾ ತರದ ದೂಷಣೆಯನ್ನು ವಿಸರ್ಜಿಸಿರಿ.