TSK

TSK · ಯಾಜಕಕಾಂಡ 19:26

مراجع Treasury of Scripture Knowledge في ಕನ್ನಡ IRV.

العودة إلى المقطع

ಫರೋಹನು ಐಗುಪ್ತದೇಶದ ವಿದ್ವಾಂಸರನ್ನೂ ಮತ್ತು ಮಂತ್ರವಾದಿಗಳನ್ನೂ ಕರೆಯಿಸಿದಾಗ ಆ ಮಾಂತ್ರಿಕರು ತಮ್ಮ ಮಂತ್ರವಿದ್ಯೆಗಳಿಂದ ಅದೇ ರೀತಿಯಾಗಿ ಮಾಡಿದರು.

ಕೊಬ್ಬನ್ನಾಗಲಿ ಅಥವಾ ರಕ್ತವನ್ನಾಗಲಿ ತಿನ್ನಬಾರದೆಂಬುದು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ನೀವು ವಾಸಿಸುವ ಎಲ್ಲಾ ಸ್ಥಳಗಳಲ್ಲಿಯೂ ಶಾಶ್ವತವಾದ ನಿಯಮವಾಗಿದೆ’” ಅಂದನು.

¶ “‘ಇದಲ್ಲದೆ ಇಸ್ರಾಯೇಲರಲ್ಲಾಗಲಿ ಅಥವಾ ಅವರ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಾಗಲಿ ಯಾವನಾದರೂ ರಕ್ತಭೋಜನಮಾಡಿದರೆ ನಾನು ಆತನ ಮೇಲೆ ಉಗ್ರವಾದ ಕೋಪವನ್ನು ಮಾಡಿ ಅವನನ್ನು ಕುಲದಿಂದ ತೆಗೆದುಹಾಕುವೆನು.

ಮಕ್ಕಳನ್ನು ಬಲಿಕೊಡುವವರು, ಕಣಿಹೇಳುವವರು, ಶಕುನನೋಡುವವರು, ಯಂತ್ರ ಮಂತ್ರಗಳನ್ನು ಮಾಡುವವರು,

ಅವಿಧೇಯತ್ವವು ಮಂತ್ರತಂತ್ರಗಳಷ್ಟೇ ಕೆಟ್ಟದ್ದಾಗಿರುವುದು. ಹಟವು ಮಿಥ್ಯಾಭಕ್ತಿಗೂ, ವಿಗ್ರಹಾರಾಧನೆಗೂ ಸಮಾನವಾಗಿರುವುದು. ನೀನು ಯೆಹೋವನ ಮಾತಿನಂತೆ ಅನುಸರಿಸಿ ನಡೆಯದೆ ಇದ್ದುದರಿಂದ ಆತನು ನಿನ್ನನ್ನು ಅರಸುತನದಿಂದ ನಿವಾರಿಸಿಬಿಟ್ಟಿದ್ದಾನೆ” ಎಂದು ಹೇಳಿದನು.

ಇದಲ್ಲದೆ ಅವನು ತನ್ನ ಸ್ವಂತ ಮಗನನ್ನೇ ಆಹುತಿಕೊಟ್ಟನು. ಕಣಿಕೇಳಿಸುವುದು, ಮಾಟಮಂತ್ರಗಳನ್ನು ಮಾಡಿಸುವುದು, ಜೋತಿಷ್ಯ, ಮುಹೂರ್ತಗಳನ್ನು ನೋಡುವುದು ಮತ್ತು ಭೂತಪ್ರೇತಗಳನ್ನೂ ವಿಚಾರಿಸುವುದು, ಇವೇ ಮೊದಲಾದ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನು ಎಬ್ಬಿಸಿದನು.

ಯೆಹೋವನು, “ಜನಾಂಗಗಳ ಆಚರಣೆಯನ್ನು ಅಭ್ಯಾಸ ಮಾಡಿಕೊಳ್ಳಬೇಡಿರಿ, ಜನಾಂಗಗಳು ಹೆದರುವ ಆಕಾಶದ ಉತ್ಪಾತಗಳಿಗೆ ನೀವು ಹೆದರಬೇಡಿರಿ.

“ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.