TSK

TSK · ಯಾಜಕಕಾಂಡ 2:4

مراجع Treasury of Scripture Knowledge في ಕನ್ನಡ IRV.

العودة إلى المقطع

ಆ ರಾತ್ರಿಯಲ್ಲಿಯೇ ಆ ಮಾಂಸವನ್ನು ಭೋಜನಮಾಡಬೇಕು. ಅದನ್ನು ಬೆಂಕಿಯಲ್ಲಿ ಸುಟ್ಟು ಹುಳಿಯಿಲ್ಲದ ರೊಟ್ಟಿಗಳ ಮತ್ತು ಕಹಿಯಾದ ಸೊಪ್ಪಿನ ಪಲ್ಯಗಳ ಸಂಗಡ ಊಟಮಾಡಬೇಕು.

ಮತ್ತು ಹುಳಿಯಿಲ್ಲದ ರೊಟ್ಟಿಗಳನ್ನು, ಎಣ್ಣೆ ಮಿಶ್ರಿತವಾದ ಹುಳಿಯಿಲ್ಲದ ಹೋಳಿಗೆಗಳನ್ನು, ಎಣ್ಣೆ ಸವರಿದ ಹುಳಿಯಿಲ್ಲದ ಕಡಬುಗಳನ್ನೂ,

ಅದಕ್ಕೆ ಹುಳಿಹಿಟ್ಟು ಸೇರಿಸಿ ಸುಡಬಾರದು. ನನಗೆ ಹೋಮರೂಪವಾಗಿ ಸಮರ್ಪಿಸಿದ ದ್ರವ್ಯಗಳಲ್ಲಿ ಅದನ್ನು ಅವರ ಪಾಲಿಗೆ ಬಿಟ್ಟಿದ್ದೇನೆ. ದೋಷಪರಿಹಾರಕ ಯಜ್ಞದ್ರವ್ಯದಂತೆಯೂ ಮತ್ತು ಪ್ರಾಯಶ್ಚಿತ್ತ ಯಜ್ಞದ್ರವ್ಯದಂತೆಯೂ ಅದು ಮಹಾಪರಿಶುದ್ಧವಾದದ್ದು.

¶ ಮೋಶೆ ಆರೋನನಿಗೂ ಅವನ ಉಳಿದ ಮಕ್ಕಳಾದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬವರಿಗೆ, “ಯೆಹೋವನಿಗೆ ಅಗ್ನಿಯ ಮೂಲಕ ಸಮರ್ಪಿತವಾದ ದ್ರವ್ಯಗಳಲ್ಲಿ ಉಳಿದಿರುವ ಧಾನ್ಯನೈವೇದ್ಯ ದ್ರವ್ಯವನ್ನು ತೆಗೆದುಕೊಂಡು, ಅದರಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಸಿ, ಯಜ್ಞವೇದಿಯ ಬಳಿಯಲ್ಲಿ ಊಟಮಾಡಬೇಕು. ಅದು ಮಹಾಪರಿಶುದ್ಧವಾಗಿದೆ.

ದೇವಾಲಯದಲ್ಲಿ ಸೇವೆಮಾಡುವುದೂ, ನೈವೇದ್ಯದ ಮೀಸಲು ರೊಟ್ಟಿ, ನೈವೇದ್ಯಕ್ಕೆ ಬೇಕಾದ ಗೋದಿಹಿಟ್ಟು, ಹುಳಿಯಿಲ್ಲದ ರೊಟ್ಟಿ, ಕಬ್ಬಿಣದ ಹಂಚಿನಲ್ಲಿ ಸುಟ್ಟ ರೊಟ್ಟಿ, ಎಣ್ಣೆಯಿಂದ ನೆನೆದ ಭಕ್ಷ್ಯಗಳು ಇವುಗಳನ್ನು ಒದಗಿಸುವುದೂ, ಸೇರು, ಅಳತೆಗೋಲುಗಳನ್ನು ಪರೀಕ್ಷಿಸುವುದೂ,

ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ. ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಇವನಲ್ಲಿ ನನ್ನ ಆತ್ಮವನ್ನು ಇರಿಸಿದ್ದೇನೆ. ಇವನು ಅನ್ಯಜನಗಳಲ್ಲಿಯೂ ಸದ್ಧರ್ಮವನ್ನು ಪ್ರಚುರಪಡಿಸುವನು.

ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವುದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವುದಕ್ಕೂ, ಸೆರೆಯವರಿಗೆ ಬಿಡುಗಡೆಯಾಗುವುದನ್ನು, ಬಂದಿಗಳಿಗೆ ಕದ ತೆರೆಯುವುದನ್ನು ಪ್ರಸಿದ್ಧಿಪಡಿಸುವುದಕ್ಕೂ,

ಮತ್ತು ಅವರಿಗೆ, ‹“ನನ್ನ ಪ್ರಾಣವು ಸಾಯುವಷ್ಟು ದುಃಖಕ್ಕೆ ಒಳಗಾಗಿದೆ; ನೀವು ಇಲ್ಲೇ ಇದ್ದು ನನ್ನ ಸಂಗಡ ಎಚ್ಚರವಾಗಿರಿ”› ಎಂದು ಹೇಳಿದನು.

‹ಈಗ ನನ್ನ ಪ್ರಾಣವು ತತ್ತರಿಸುತ್ತಿದೆ. ನಾನೇನು ಹೇಳಲಿ? ‘ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು.’ ಆದರೆ ಈ ಕಾರಣಕ್ಕಾಗಿಯೇ ಈ ಗಳಿಗೆಗೆ ಬಂದಿದ್ದೇನಲ್ಲಾ?›

¶ ಇಂಥವನೇ ನಮಗೆ ಬೇಕಾಗಿರುವ ಮಹಾಯಾಜಕನು, ಈತನು ಪರಿಶುದ್ಧನೂ, ನಿರ್ದೋಷಿಯೂ, ನಿಷ್ಕಳಂಕನೂ, ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನು, ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು.

ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ.