¶ ಚೊಕ್ಕ ಬಂಗಾರದಿಂದ ಒಂದು ಪಟ್ಟಿಯನ್ನು ಮಾಡಿಸಿ ಮುದ್ರೆಯನ್ನು ಕೆತ್ತಿಸುವ ರೀತಿಯಲ್ಲಿ ಅದರ ಮೇಲೆ “ಯೆಹೋವನಿಗೆ ಮೀಸಲು” ಎಂಬ ಲಿಪಿಯನ್ನು ಕೆತ್ತಿಸಬೇಕು.
TSK
TSK · ಯಾಜಕಕಾಂಡ 21:6
مراجع Treasury of Scripture Knowledge في ಕನ್ನಡ IRV.
ಯಾಜಕನು ಯಜ್ಞವೇದಿಯ ಮೇಲೆ ಅವುಗಳನ್ನು ಹೋಮಮಾಡಬೇಕು. ಅದು ಯೆಹೋವನಿಗೆ ಅಗ್ನಿಯ ಮೂಲಕವಾಗಿ ಅರ್ಪಿಸಿದ ಆಹಾರವಾಗುವುದು.
¶ “‘ನಿಮ್ಮ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಸಮರ್ಪಿಸಿ ನಿಮ್ಮ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡಬಾರದು; ನಾನು ಯೆಹೋವನು.
ಅವನು ತನ್ನ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಕೊಟ್ಟು, ನನ್ನ ದೇವಸ್ಥಾನವನ್ನು ಅಶುದ್ಧಮಾಡಿ, ನನ್ನ ಪರಿಶುದ್ಧವಾದ ಹೆಸರನ್ನು ಅಪಕೀರ್ತಿಗೆ ಒಳಪಡಿಸಿದರೆ, ನಾನು ಅವನಿಗೆ ವಿಮುಖನಾಗಿ ಅವನನ್ನು ಕುಲದಿಂದ ತೆಗೆದುಹಾಕುವೆನು.
ಅವನಿಗೆ ಕಳಂಕವಿರುವುದರಿಂದ ತೆರೆಯನ್ನು ದಾಟಿ ಒಳಗೆ ಬರಬಾರದು; ಯಜ್ಞವೇದಿಯ ಬಳಿಗೆ ಬರಬಾರದು; ನನ್ನ ಪವಿತ್ರಸ್ಥಾನಗಳ ಗೌರವಕ್ಕೆ ಅವನಿಂದ ಕುಂದು ಉಂಟಾಗಬಾರದು; ಆ ಸ್ಥಾನಗಳನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು’” ಎಂದು ಹೇಳಿದನು.
“ನೀನು ಇಸ್ರಾಯೇಲರಿಗೆ ಆಜ್ಞಾಪಿಸಿ ಅವರಿಗೆ, ‘ನನಗೆ ಸುಗಂಧಹೋಮಮಾಡುವುದಕ್ಕಾಗಿ ಇಸ್ರಾಯೇಲರು ನನಗೋಸ್ಕರ ತರುವ ಆಹಾರವನ್ನು ನೇಮಕವಾದ ಕಾಲಗಳಲ್ಲಿ ತಂದು ಎಚ್ಚರಿಕೆಯಿಂದ ಸಮರ್ಪಿಸಬೇಕೆಂದು ಅವರಿಗೆ ಆಜ್ಞಾಪಿಸು.’
ತೊಲಗಿರಿ, ತೊಲಗಿರಿ, ಬಾಬೆಲಿನಿಂದ ಹೊರಡಿರಿ, ಅಶುದ್ಧವಾದ ಯಾವುದನ್ನೂ ಮುಟ್ಟದಿರಿ, ಅದರಿಂದ ದೂರ ಹೋಗಿ, ಯೆಹೋವನ ಆರಾಧನೆಯ ಉಪಕರಣಗಳನ್ನು ಹೊರುವವರೇ, ಶುದ್ಧರಾಗಿರಿ!
¶ “ನನ್ನ ನಾಮವನ್ನು ಧಿಕ್ಕರಿಸುವ ಯಾಜಕರೇ, ಮಗನು ತಂದೆಗೆ ಸನ್ಮಾನ ಸಲ್ಲಿಸುತ್ತಾನಲ್ಲಾ, ಆಳು ಧಣಿಗೆ ಭಯಭಕ್ತಿ ತೋರಿಸುತ್ತಾನಷ್ಟೇ; ನಾನು ತಂದೆಯಾಗಿರಲು ನನಗೆ ಸಲ್ಲುವ ಸನ್ಮಾನವೆಲ್ಲಿ? ನಾನು ದಣಿಯಾಗಿರಲು ನನಗೆ ತೋರಿಸುವ ಭಯಭಕ್ತಿಯೆಲ್ಲಿ?” ಎಂದು ಸೇನಾಧೀಶ್ವರನಾದ ಯೆಹೋವನು ನಿಮಗೇ ನುಡಿಯುತ್ತಾನೆ. ಆದರೆ ನೀವು, “ಯಾವ ವಿಷಯದಲ್ಲಿ ನಿನ್ನ ನಾಮವನ್ನು ಧಿಕ್ಕರಿಸಿದ್ದೇವೆ?” ಅನ್ನುತ್ತೀರಿ.
“ಸೂರ್ಯನು ಮೂಡುವ ದಿಕ್ಕಿನಿಂದ ಮುಳುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನು ಶುದ್ಧ ನೈವೇದ್ಯವನ್ನೂ ಅರ್ಪಿಸುತ್ತಾರೆ. ಹೌದು, ಅನ್ಯ ಜನಾಂಗಗಳಲ್ಲಿಯೇ ನನ್ನ ನಾಮವು ಬಹು ಮಾನ್ಯವಾಗಿದೆ.” ಇದು ಸೇನಾಧೀಶ್ವರನಾದ ಯೆಹೋವನ ನುಡಿ.