ಆ ಮರಿಯು ಊನವಿಲ್ಲದ ಒಂದು ವರ್ಷದ ಗಂಡುಮರಿಯಾಗಿರಬೇಕು. ನೀವು ಕುರಿಗಳಿಂದಾಗಲಿ ಅಥವಾ ಆಡುಗಳಿಂದಾಗಲಿ ಅದನ್ನು ತೆಗೆದುಕೊಳ್ಳಬಹುದು.
TSK
TSK · ಯಾಜಕಕಾಂಡ 22:19
مراجع Treasury of Scripture Knowledge في ಕನ್ನಡ IRV.
¶ “‘ಅವನು ದನವನ್ನು ಸರ್ವಾಂಗಹೋಮವಾಗಿ ಸಮರ್ಪಿಸುವುದಾದರೆ ಪೂರ್ಣಾಂಗವಾದ ಗಂಡನ್ನು ತರಬೇಕು. ತನ್ನನ್ನು ಯೆಹೋವನು ಮೆಚ್ಚುವಂತೆ ದೇವದರ್ಶನದ ಗುಡಾರದ ಬಾಗಿಲಿಗೆ ಅದನ್ನು ತರಬೇಕು.
¶ “‘ಅವನು ತನ್ನ ದೋಷಪರಿಹಾರಕ್ಕಾಗಿ ತರುವುದು ಕುರಿಯಾದರೆ ಅದು ಪೂರ್ಣಾಂಗವಾದ ಹೆಣ್ಣಾಗಿರಬೇಕು.
ಇದಲ್ಲದೆ ಅವನು ನ್ಯಾಯಾಸನದಲ್ಲಿ ಕುಳಿತಿರುವಾಗ ಅವನ ಹೆಂಡತಿಯು, “ನೀನು ಆ ನೀತಿವಂತನ ಗೊಡವೆಗೆ ಹೋಗಬೇಡ; ಅವನ ದೆಸೆಯಿಂದ ಈ ಹೊತ್ತು ಕನಸಿನಲ್ಲಿ ಬಹಳ ತೊಂದರೆ ಪಟ್ಟೆನು” ಎಂದು ಅವನ ಬಳಿಗೆ ಸಂದೇಶ ಹೇಳಿಕಳುಹಿಸಿದಳು.
ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ, ನಡೆದ ಸಂಗತಿಗಳನ್ನೂ ನೋಡಿ ಬಹಳ ಹೆದರಿಕೊಂಡು, “ನಿಜವಾಗಿ ಈತನು ದೇವಕುಮಾರನಾಗಿದ್ದನು” ಅಂದರು.
ನಾವಂತೂ ನ್ಯಾಯವಾಗಿ ದಂಡನೆಯಲ್ಲಿದ್ದೇವೆ, ನಾವು ಮಾಡಿದ್ದಕ್ಕೆ ತಕ್ಕ ಪ್ರತಿಫಲವನ್ನು ಹೊಂದುತ್ತೇವೆ. ಈತನಾದರೋ ಅಂತಹದ್ದೇನನ್ನೂ ಮಾಡಲಿಲ್ಲ” ಎಂದು ಹೇಳಿ,
ತರುವಾಯ ಪಿಲಾತನು ಪುನಃ ಹೊರಗೆ ಹೋಗಿ ಯೆಹೂದ್ಯರಿಗೆ, “ನನಗೆ ಅವನಲ್ಲಿ ಯಾವ ಅಪರಾಧವೂ ಕಾಣಿಸಲಿಲ್ಲವೆಂಬುದು ನಿಮಗೆ ತಿಳಿಯುವಂತೆ ಅವನನ್ನು ನಿಮ್ಮ ಬಳಿಗೆ ತರುತ್ತೇನೆ ನೋಡಿರಿ” ಎಂದು ಹೇಳಿದನು.
ಅದನ್ನು ಕಳಂಕ ಸುಕ್ಕು ಮುಂತಾದದ್ದೊಂದೂ ಇಲ್ಲದಂತೆ ಪರಿಶುದ್ಧವೂ, ನಿರ್ದೋಷವೂ, ಮಹಿಮೆಯುಳ್ಳದ್ದೂ ಆಗಿರುವ ಸಭೆಯನ್ನಾಗಿ ತನ್ನೆದುರಿನಲ್ಲಿ ನಿಲ್ಲಿಸಿಕೊಳ್ಳಬೇಕೆಂದು ವಾಕ್ಯೋಪದೇಶ ಸಹಿತವಾದ ಜಲಸ್ನಾನವನ್ನು ಮಾಡಿಸಿ ಶುದ್ಧಿಮಾಡಿದನು.
ಯೇಸು ಕ್ರಿಸ್ತನೆಂಬ ನಿಷ್ಕಳಂಕವೂ, ನಿರ್ಮಲವೂ ಆದ ಕುರಿಮರಿಯ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.
ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.