¶ “‘ನೀವು ಪೈರುಗಳನ್ನು ಕೊಯ್ಯುವಾಗ ಹೊಲಗಳ ಮೂಲೆಗಳಲ್ಲಿ ಇರುವುದನ್ನೆಲ್ಲಾ ಕೊಯ್ಯಬಾರದು ಮತ್ತು ಕೊಯ್ದಾಗ ಹಕ್ಕಲಾಯಬಾರದು.
TSK
TSK · ಯಾಜಕಕಾಂಡ 23:22
مراجع Treasury of Scripture Knowledge في ಕನ್ನಡ IRV.
ಮತ್ತು ಆತನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲಿ ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ದಾಸಿಯರೂ, ನಿಮ್ಮ ಊರಲ್ಲಿರುವ ಲೇವಿಯರೂ, ಪರದೇಶದವರೂ, ಅನಾಥರು ಮತ್ತು ವಿಧವೆಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂಭ್ರಮಿಸಬೇಕು.
ಆಕೆಯು ದೈವಯೋಗದಿಂದ ಎಲೀಮೆಲೆಕನ ಗೋತ್ರದವನಾದ ಬೋವಜನ ಸ್ವತ್ತಾಗಿದ್ದ ಹೊಲಕ್ಕೆ ಹೋಗಿ ತೆನೆ ಕೊಯ್ಯುವವರ ಹಿಂದಿನಿಂದ ಹಕ್ಕಲಾಯುತ್ತಾ ಇದ್ದಳು.
ನಾನು ಬಡವರ ಇಷ್ಟವನ್ನು ಭಂಗಪಡಿಸಿದೆನೋ? ಅಥವಾ ವಿಧವೆಯ ಕಣ್ಣುಗಳನ್ನು ಮಂಕಾಗಿಸಿದೆನೋ?
ಬಡವರಿಗೆ ಉದಾರವಾಗಿ ಕೊಡುತ್ತಾನೆ; ಅವನ ನೀತಿಯ ಫಲವು ಸದಾಕಾಲವೂ ಇರುವುದು. ಮಹಿಮೆಯೊಡನೆ ಅವನ ಕೊಂಬು ಎತ್ತಲ್ಪಡುವುದು.
ಹಸಿದವರಿಗೆ ಅನ್ನವನ್ನು ಹಂಚುವುದು, ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬೆತ್ತಲೆಯವರನ್ನು ಕಂಡಾಗೆಲ್ಲಾ ಅವರಿಗೆ ಹೊದಿಸುವುದು, ನಿನ್ನಂತೆ ಮನುಷ್ಯನಾಗಿರುವ ಯಾರಿಗೇ ಆಗಲಿ ಮುಖತಪ್ಪಿಸಿಕೊಳ್ಳದಿರುವುದು, ಇವುಗಳೇ ನನಗೆ ಇಷ್ಟವಾದ ಉಪವಾಸ ವ್ರತವಲ್ಲವೇ.
‹ಹೇಗೂ ಒಳಗಿರುವಂಥದನ್ನು ದಾನಕೊಡಿರಿ, ಆಗ ಸಕಲವೂ ನಿಮಗೆ ಶುದ್ಧವಾಗಿರುವುದು.›