TSK

TSK · ಯಾಜಕಕಾಂಡ 23:24

مراجع Treasury of Scripture Knowledge في ಕನ್ನಡ IRV.

العودة إلى المقطع

ಆಮೇಲೆ ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮ ದೇಶದಲ್ಲೆಲ್ಲಾ ಗಟ್ಟಿಯಾಗಿ ಕೊಂಬನ್ನು ಊದಿಸಬೇಕು. ಸಕಲ ದೋಷಪರಿಹಾರಕವಾದ ಆ ದಿನದಲ್ಲೇ ನಿಮ್ಮ ದೇಶದಲ್ಲೆಲ್ಲಾ ಆ ಕೊಂಬನ್ನು ಊದಿಸಬೇಕು.

¶ “‘ತುತ್ತೂರಿಗಳ ಧ್ವನಿಯಿಂದ ಪ್ರಕಟವಾಗುವ ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನೀವು ಯಾವ ಉದ್ಯೋಗವನ್ನೂ ನಡೆಸದೆ ದೇವಾರಾಧನೆಗಾಗಿ ಸಭೆಕೂಡಬೇಕು.

ಮಂಜೂಷವನ್ನು ಒಳಗಿಟ್ಟ ಯಾಜಕರು ದೇವಾಲಯದಿಂದ ಹೊರಗೆ ಬಂದಕೂಡಲೆ ಏಕ ಸ್ವರದಿಂದ ಸ್ವರವೆತ್ತಿ ಯೆಹೋವನನ್ನು ಕೀರ್ತಿಸುವುದಕ್ಕಾಗಿ ತುತ್ತೂರಿ ಊದುವವರೂ ಗಾಯನ ಮಾಡುವವರೂ ಅಲ್ಲಿ ನಿಂತಿದ್ದರು. ತುತ್ತೂರಿ, ತಾಳ ಮೊದಲಾದ ವಾದ್ಯಗಳ ಧ್ವನಿಯೊಡನೆ ಹೀಗೆ ಹಾಡಿದರು, “ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾಗಿರುವುದು” ಎಂದು ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡುವವರ ಸ್ವರವೂ ಕೇಳಿಸಿದೊಡನೆ, ಮೇಘವು ಯೆಹೋವನ ಆಲಯದಲ್ಲಿ ತುಂಬಿಕೊಂಡಿತು.

ಯಾಜಕನಾದ ಎಜ್ರನು ಗ್ರಹಿಸಿಕೊಳ್ಳಲು ಶಕ್ತರಾದ ಸ್ತ್ರೀಪುರುಷರು ನೆರೆದಿದ್ದ ಸಮೂಹದವರ ಮುಂದೆ ಏಳನೆಯ ತಿಂಗಳಿನ ಮೊದಲ ದಿನದಲ್ಲಿ ಆ ಧರ್ಮಶಾಸ್ತ್ರವನ್ನು ತಂದನು.

ತುತ್ತೂರಿಗಳನ್ನೂ, ಕೊಂಬನ್ನೂ ಊದುತ್ತಾ, ಯೆಹೋವರಾಜನಿಗೆ ಜಯಘೋಷಮಾಡಿರಿ.

ಕಡೆ ತುತ್ತೂರಿಯ ಧ್ವನಿಯು ಮೊಳಗುವಲ್ಲಿ, ಕ್ಷಣಮಾತ್ರದಲ್ಲಿ, ರೆಪ್ಪೆಬಡಿಯುವಷ್ಟರೊಳಗಾಗಿ ನಾವೆಲ್ಲರೂ ಮಾರ್ಪಡುವೆವು. ಹೌದು, ತುತ್ತೂರಿಯು ಮೊಳಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ರೂಪಾಂತರ ಹೊಂದುವೆವು.