TSK

TSK · ಯಾಜಕಕಾಂಡ 23:28

مراجع Treasury of Scripture Knowledge في ಕನ್ನಡ IRV.

العودة إلى المقطع

ಅವನು ದೇವಸ್ಥಾನ, ದೇವದರ್ಶನದ ಗುಡಾರ, ಯಜ್ಞವೇದಿ, ಯಾಜಕರು, ಜನಸಮೂಹದವರು ಈ ಎಲ್ಲರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು.

ಅವನನ್ನು ಜಜ್ಜುವುದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು, ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವುದು;

ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡಿರಿ; ಆ ಒಂದೇ ಕಲ್ಲಿನಲ್ಲಿ ಏಳು ಕಣ್ಣುಳ್ಳಾತನ ದೃಷ್ಟಿಯು ಬಿದ್ದಿದೆ; ಇಗೋ ನಾನೇ ಅದರಲ್ಲಿ ಕೆತ್ತನೆ ಕೆತ್ತುವೆನು. ಇದು ಸೇನಾಧೀಶ್ವರನಾದ ಯೆಹೋವನ ನುಡಿ. ‘ಒಂದೇ ದಿನದೊಳಗೆ ಈ ದೇಶದ ಪಾಪವನ್ನು ಪರಿಹರಿಸುವೆನು.’

ಹೋತಗಳ ಮತ್ತು ಹೋರಿಕರುಗಳ ರಕ್ತದ ಮೂಲಕವಲ್ಲ ತನ್ನ ಸ್ವಂತ ರಕ್ತದ ಮೂಲಕ ಒಂದೇ ಸಾರಿ ಎಲ್ಲರಿಗೋಸ್ಕರ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿ ನಿತ್ಯ ವಿಮೋಚನೆಯನ್ನು ಸಾಧಿಸಿದನು.

ಯೇಸು ಕ್ರಿಸ್ತನು ಒಂದೇ ಸಾರಿ ದೇಹ ಸಮರ್ಪಣೆ ಮಾಡಿ ದೇವರ ಚಿತ್ತವನ್ನು ನೆರವೇರಿಸಿದ್ದರಿಂದಲೇ ನಾವು ಶುದ್ಧೀಕರಿಸಲ್ಪಟ್ಟವರಾಗಿರುವೆವು.

ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತ ಯಜ್ಞವಾಗಿದ್ದಾನೆ. ನಮ್ಮ ಪಾಪಗಳಿಗೆ ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳಿಗೂ ಪ್ರಾಯಶ್ಚಿತ್ತವಾಗಿದ್ದಾನೆ.

¶ ಈತನು ಅಂದರೆ ಯೇಸು ಕ್ರಿಸ್ತನು ನೀರಿನಿಂದಲೂ, ರಕ್ತದಿಂದಲೂ ಬಂದಾತನು. ನೀರಿನಿಂದ ಮಾತ್ರವಲ್ಲದೆ ನೀರಿನಿಂದಲೂ, ರಕ್ತದಿಂದಲೂ ಸಾಕ್ಷಿ ಹೊಂದಿದವನಾಗಿದ್ದಾನೆ. ಆತ್ಮವು ಸಾಕ್ಷಿಯನ್ನು ಕೊಡುತ್ತದೆ. ಏಕೆಂದರೆ ಆತ್ಮನು ಸತ್ಯಸ್ವರೂಪನೇ.