¶ ಅದಲ್ಲದೆ ನೀವು ಬಿತ್ತಿದ ಹೊಲದಲ್ಲಿ ಪ್ರಥಮಫಲವು ದೊರೆತಾಗ ಸುಗ್ಗಿಯ ಹಬ್ಬವನ್ನು ಆಚರಿಸಬೇಕು. ಹೊಲ ತೋಟಗಳ ಬೆಳೆಯನ್ನೂ ಕೂಡಿಸುವಾಗ ಅಂದರೆ ವರ್ಷದ ಕೊನೆಯಲ್ಲಿ ಸುಗ್ಗಿ ಹಬ್ಬವನ್ನು ಆಚರಿಸಬೇಕು.
TSK
TSK · ಯಾಜಕಕಾಂಡ 23:34
مراجع Treasury of Scripture Knowledge في ಕನ್ನಡ IRV.
¶ “‘ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು. ನೀವು ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡೆಸಬಾರದು. ಆ ದಿನ ಮೊದಲುಗೊಂಡು ಏಳು ದಿನಗಳವರೆಗೆ ಯೆಹೋವನಿಗೆ ಉತ್ಸವವನ್ನು ಆಚರಿಸಬೇಕು.
ಆತನು ಅವರಿಗೆ, “ಪ್ರತಿ ಏಳು ವರ್ಷಗಳು ಪೂರ್ತಿಯಾದಾಗ ಬಿಡುಗಡೆಯ ಸಂವತ್ಸರದ ನೇಮಕ ಕಾಲದಲ್ಲಿ ಅಂದರೆ ಪರ್ಣಶಾಲೆಗಳ ಜಾತ್ರೆಯಲ್ಲಿ
ಅವನು ಎಂಟನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ, “ಬೇತೇಲಿನಲ್ಲಿ ಯೆಹೂದ ದೇಶದ ಜಾತ್ರೆಗೆ ಸರಿಯಾದ ಜಾತ್ರೆಯು ನಡೆಯಬೇಕು” ಎಂದು ಅಪ್ಪಣೆ ಮಾಡಿ, ತಾನು ಅಲ್ಲಿಗೆ ಹೋಗಿ ಅಲ್ಲಿ ನಿಲ್ಲಿಸಿದ ಬಸವನ ಮೂರ್ತಿಗಳಿಗೋಸ್ಕರ ಯಜ್ಞವೇದಿಯ ಮೇಲೆ ಯಜ್ಞ ಮಾಡಿದನು. ತಾನು ಏರ್ಪಡಿಸಿದ ಪೂಜಾಸ್ಥಳಗಳ ಯಾಜಕರನ್ನು ಬೇತೇಲಿನ ದೇವಸ್ಥಾನದ ಸೇವೆಗೆ ನೇಮಿಸಿದನು.
ಮೋಶೆಗೆ ಯೆಹೋವನಿಂದ ದೊರಕಿದ ಧರ್ಮಶಾಸ್ತ್ರದ ಪ್ರಕಾರ ಏಳನೆಯ ತಿಂಗಳಿನ ಜಾತ್ರೆಯಲ್ಲಿ ಇಸ್ರಾಯೇಲರು ಬಿಡಾರಗಳಲ್ಲಿ ವಾಸಮಾಡಬೇಕು.
¶ ಅನಂತರ ಯೆರೂಸಲೇಮಿನ ಮೇಲೆ ಬಿದ್ದ ಸಕಲ ಜನಾಂಗಗಳಲ್ಲಿ ಉಳಿದವರೆಲ್ಲರೂ ಸೇನಾಧೀಶ್ವರ ಯೆಹೋವನೆಂಬ ರಾಜಾಧಿರಾಜನನ್ನು ಆರಾಧಿಸುವುದಕ್ಕೂ, ಪರ್ಣಶಾಲೆಗಳ ಹಬ್ಬವನ್ನು ಆಚರಿಸುವುದಕ್ಕೂ ಪ್ರತಿವರ್ಷವೂ ಹೊರಟುಬರುವರು.
ಐಗುಪ್ತಕ್ಕೂ ಪರ್ಣಶಾಲೆಗಳ ಹಬ್ಬವನ್ನು ಆಚರಿಸುವುದಕ್ಕೆ ಬರದಿರುವ ಸಕಲ ಜನಾಂಗಗಳಿಗೂ ಸಂಭವಿಸುವ ದಂಡನೆಯು ಇದೇ.
ಆಗ ಯೆಹೂದ್ಯರ ಗುಡಾರಗಳ ಹಬ್ಬವು ಸಮೀಪವಾಗಿತ್ತು,
¶ ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದಲಿಲ್ಲ. ಆದರೂ ಅವುಗಳನ್ನು ದೂರದಿಂದ ನೋಡಿ ಮತ್ತು ಉಲ್ಲಾಸದೊಡನೆ ಸ್ವೀಕರಿಸಿ ನಂಬಿಕೆಯುಳ್ಳವರಾಗಿ ಮೃತರಾದರು. ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿಗಳು ಆಗಿದ್ದೆವೆಂದು ಒಪ್ಪಿಕೊಂಡರು.