¶ ಅದಕ್ಕೆ ಅಬ್ರಹಾಮನು, “ಈ ಸ್ಥಳದವರು ದೇವರ ಭಯಭಕ್ತಿ ಇಲ್ಲದವರಾಗಿ ನನ್ನ ಹೆಂಡತಿಯ ನಿಮಿತ್ತ ನನ್ನನ್ನು ಕೊಂದಾರೆಂದು ಭಾವಿಸಿದೆನು.
TSK
TSK · ಯಾಜಕಕಾಂಡ 25:17
مراجع Treasury of Scripture Knowledge في ಕನ್ನಡ IRV.
ಈ ಮನೆಯಲ್ಲಿ ನನಗಿಂತ ಯಾರೂ ದೊಡ್ಡವರಲ್ಲ. ನೀನು ಅವನ ಧರ್ಮಪತ್ನಿಯಾದುದರಿಂದ ನಿನ್ನನ್ನು ಮಾತ್ರ ನನಗೆ ಅಧೀನ ಮಾಡಲಿಲ್ಲ. ಹೀಗಿರುವಲ್ಲಿ ನಾನು ಇಂಥಾ ಮಹಾ ದುಷ್ಟ ಕಾರ್ಯವನ್ನು ಮಾಡಿ ದೇವರಿಗೆ ವಿರೋಧವಾಗಿ ಹೇಗೆ ಪಾಪ ಮಾಡಲಿ?” ಎಂದು ತನ್ನ ದಣಿಯ ಹೆಂಡತಿಗೆ ಉತ್ತರ ಹೇಳಿದನು.
ಅದಕ್ಕೆ ಮೋಶೆಯು ಜನರಿಗೆ, “ಭಯಪಡಬೇಡಿರಿ, ದೇವರು ನಿಮ್ಮನ್ನು ಪರೀಕ್ಷಿಸುವುದಕ್ಕಾಗಿ, ನೀವು ಪಾಪ ಮಾಡದಂತೆ ಆತನ ಮೇಲಿನ ಭಯವು ನಿಮಗೆ ಇರಬೇಕೆಂತಲೂ ಇಳಿದು ಬಂದಿದ್ದಾನೆ” ಎಂದನು.
ಕಿವುಡರನ್ನು ದೂಷಿಸಬಾರದು; ಕುರುಡರು ನಡೆಯುವ ದಾರಿಯಲ್ಲಿ ಅವರ ಕಾಲು ಎಡವುವಂತೆ ಕಲ್ಲನ್ನು ಇಡಬಾರದು; ನಿಮ್ಮ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ಯೆಹೋವನು.
ನೀವು ಸ್ಥಿರಸೊತ್ತನ್ನು ಸ್ವದೇಶದವರೊಡನೆ ಕ್ರಯ ಮತ್ತು ವಿಕ್ರಯ ಮಾಡುವಾಗ ಇದರ ವಿಷಯದಲ್ಲಿ ಅನ್ಯಾಯಮಾಡಬಾರದು.
ಅವರಿಂದ ಕಠಿಣವಾಗಿ ಸೇವೆಮಾಡಿಸಿಕೊಳ್ಳಬಾರದು; ನಿಮ್ಮ ದೇವರಿಗೆ ಭಯಪಡಬೇಕು.
ನೀವಾದರೋ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದು, ಆತನು ನಿಮಗೋಸ್ಕರವಾಗಿ ಮಾಡಿದ ಮಹತ್ಕಾರ್ಯಗಳನ್ನು ಸ್ಮರಿಸಿಕೊಂಡು, ಆತನನ್ನು ಸತ್ಯದಿಂದಲೂ, ಪೂರ್ಣಮನಸ್ಸಿನಿಂದಲೂ ಸೇವಿಸುತ್ತಾ ಬರಬೇಕು;
ಆನಂತರ ನಾನು ಅವರಿಗೆ, “ನೀವು ಮಾಡುತ್ತಿರುವುದು ಒಳ್ಳೆಯ ಕಾರ್ಯವಲ್ಲ; ನಾವು ನಮ್ಮ ವಿರೋಧಿಗಳಾಗಿರುವ ಅನ್ಯಜನರ ನಿಂದೆಗೆ ಗುರಿಯಾಗದಂತೆ ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕಲ್ಲವೇ.
ಯೆಹೋವನ ಭಯ ಪರಿಶುದ್ಧವಾಗಿದೆ; ಅದು ಶಾಶ್ವತವಾದದ್ದೇ. ಯೆಹೋವನ ಕಟ್ಟಳೆಗಳು ಯಥಾರ್ಥವಾದವುಗಳು; ಅವು ಕೇವಲ ನ್ಯಾಯವಾಗಿವೆ.
ಕೃಪಾಸತ್ಯತೆಗಳಿಂದ ಪಾಪನಿವಾರಣೆ, ಯೆಹೋವನ ಭಯಭಕ್ತಿಯಿಂದ ಹಾನಿನಿವಾರಣೆ.
ಯೆಹೋವನು ತನ್ನ ಜನರ ಹಿರಿಯರನ್ನು, ಅಧಿಕಾರಿಗಳನ್ನೂ ನ್ಯಾಯವಿಚಾರಣೆಗೆ ತರುವನು. ಏಕೆಂದರೆ, “ನೀವು ದ್ರಾಕ್ಷಿಯ ತೋಟವನ್ನು ನುಂಗಿಬಿಟ್ಟಿದ್ದೀರಿ. ಬಡವರಿಂದ ಕೊಳ್ಳೆಹೊಡೆದದ್ದು ನಿಮ್ಮ ಮನೆಗಳಲ್ಲಿ ಇದೆ.
ದೀನದರಿದ್ರರ ವ್ಯಾಜ್ಯವನ್ನು ತೀರಿಸುತ್ತಿದ್ದನು; ಆಗ ಸುಖವಾಗಿತ್ತು. ನನ್ನನ್ನು ಅರಿಯುವುದೆಂದರೆ ಇದೇ ಎಂಬುದು ಯೆಹೋವನ ನುಡಿ.
‹ಆದರೆ ನೀವು ಯಾರಿಗೆ ಭಯಪಡಬೇಕೆಂದು ತೋರಿಸುತ್ತೇನೆ, ಕೇಳಿ. ಸತ್ತ ಮೇಲೆ ನರಕದೊಳಗೆ ಹಾಕುವ ಅಧಿಕಾರವುಳ್ಳಾತನಿಗೆ ಹೆದರಬೇಕು. ಹೌದು ಆತನಿಗೇ ಭಯಪಡಬೇಕೆಂದು ನಿಮಗೆ ಒತ್ತಿಹೇಳುತ್ತೇನೆ.›
ಅವನು ದೈವಭಕ್ತನೂ, ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳುವವನು ಆಗಿದ್ದು, ಜನರಿಗೆ ಬಹಳವಾಗಿ ದಾನಧರ್ಮಮಾಡುತ್ತಾ, ದೇವರಿಗೆ ನಿತ್ಯವೂ ಪ್ರಾರ್ಥನೆಮಾಡುತ್ತಾ ಇದ್ದನು.
ಅವರ ದೃಷ್ಟಿಯಲ್ಲಿ ದೇವರ ಭಯವೇ ಇಲ್ಲ” ಎಂದು ಹೀಗೆ ಬರೆದಿದೆಯಲ್ಲಾ.
ಈ ವಿಷಯದಲ್ಲಿ ಯಾರೂ ತನ್ನ ಸಹೋದರನನ್ನು ವಂಚಿಸಿ ಕೇಡು ಮಾಡಬಾರದು. ನಾವು ಮೊದಲೇ ತಿಳಿಸಿ, ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಪ್ರತಿಕಾರ ಮಾಡುವವನಾಗಿದ್ದಾನೆ.