ಆದುದರಿಂದ ನನ್ನ ಆಜ್ಞಾವಿಧಿಗಳನ್ನೆಲ್ಲಾ ನೀವು ಅನುಸರಿಸಿ ನಡೆಯಬೇಕು. ನಾನು ಯೆಹೋವನು’” ಎಂದು ಹೇಳಿದನು.
TSK
TSK · ಯಾಜಕಕಾಂಡ 25:18
مراجع Treasury of Scripture Knowledge في ಕನ್ನಡ IRV.
ನಿಮ್ಮ ದೇಶದಲ್ಲಿ ನಿಮಗೆ ಸಮಾಧಾನವನ್ನು ಅನುಗ್ರಹಿಸುವೆನು; ಯಾರ ಭಯವೂ ಇಲ್ಲದೆ ಮಲಗಿಕೊಳ್ಳುವಿರಿ; ದುಷ್ಟಮೃಗಗಳನ್ನು ದೇಶದಿಂದ ತೆಗೆದುಹಾಕುವೆನು; ನಿಮ್ಮ ದೇಶವು ಶತ್ರುಗಳ ಕತ್ತಿಯಿಂದ ಹಾಳಾಗುವುದಿಲ್ಲ.
¶ ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದರೆ, ಆತನು ಭೂಮಿಯ ಮೇಲಿರುವ ಎಲ್ಲಾ ಜನಾಂಗಗಳಿಗಿಂತಲೂ ನಿಮ್ಮನ್ನು ಉನ್ನತಸ್ಥಿತಿಗೆ ತರುವನು.
ಆದಕಾರಣ ಇಸ್ರಾಯೇಲರು ಆಕಾಶದಿಂದ ಮಂಜು ಸುರಿದು, ಧಾನ್ಯವೂ ಮತ್ತು ದ್ರಾಕ್ಷಾರಸವೂ ಸಮೃದ್ಧಿಯಾಗಿರುವ ದೇಶದಲ್ಲೇ ಸೇರಿ ನಿರ್ಭಯವಾಗಿ ವಾಸಿಸುವವರಾದರು, ಯಾಕೋಬನ ವಂಶದವರು ಸುರಕ್ಷಿತರಾದರು.
ನಾನು ನಿರ್ಭಯವಾಗಿರುವುದರಿಂದ ಮಲಗಿಕೊಂಡು ಕೂಡಲೆ ನಿದ್ದೆಮಾಡುವೆನು. ಏಕೆಂದರೆ ಯೆಹೋವನೇ, ನನಗೆ ಯಾವ ಅಪಾಯವೂ ಬಾರದಂತೆ ನೀನು ನನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೀ.
ನನ್ನ ಮಾತಿಗೆ ಕಿವಿಗೊಡುವವನಾದರೋ ಸುರಕ್ಷಿತನಾಗಿದ್ದು, ಯಾವ ಕೇಡಿಗೂ ಭಯಪಡದೆ ನೆಮ್ಮದಿಯಾಗಿ ಬಾಳುವನು” ಎಂಬುದೇ.
ಅವನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು, ಇಸ್ರಾಯೇಲರು ನೆಮ್ಮದಿಯಾಗಿ ವಾಸಿಸುವರು; ‘ಯೆಹೋವ ಚಿದ್ಕೇನು’ ಅಂದರೆ ಯೆಹೋವನೇ ನಮ್ಮ ಸದ್ಧರ್ಮ ಎಂಬ ಹೆಸರು ಅವನಿಗಾಗುವುದು” ಎಂದು ನುಡಿಯುತ್ತಾನೆ.
ಆಗ ಯೆಹೂದ್ಯರು ಸುರಕ್ಷಿತವಾಗಿರುವರು, ಯೆರೂಸಲೇಮಿನವರು ನೆಮ್ಮದಿಯಾಗಿ ವಾಸಿಸುವರು; ‘ಯೆಹೋವ ಚಿದ್ಕೇನು’ ಅಂದರೆ ಯೆಹೋವನೇ ‘ನಮ್ಮ ಸದ್ಧರ್ಮ’ ಎಂಬ ಹೆಸರು ಈ ಪಟ್ಟಣಕ್ಕೆ ಸಲ್ಲುವುದು.”
ಅವರು ನಡೆಸಿದ ಬಹು ದುರಾಚಾರಗಳ ನಿಮಿತ್ತ ನಾನು ದೇಶವನ್ನು ಹಾಳುಮಾಡಿದಾಗ ನಾನೇ ಯೆಹೋವನು” ಎಂದು ಅವರಿಗೆ ದೃಢವಾಗುವುದು.
¶ “ನಾನು ನಿಮ್ಮನ್ನು ಜನಾಂಗಗಳೊಳಗಿಂದ ಬಿಡಿಸಿ, ಸಕಲ ದೇಶಗಳಿಂದ ಒಟ್ಟುಗೂಡಿಸಿ ಸ್ವದೇಶಕ್ಕೆ ಬರಮಾಡುವೆನು.