TSK

TSK · ಯಾಜಕಕಾಂಡ 25:19

مراجع Treasury of Scripture Knowledge في ಕನ್ನಡ IRV.

العودة إلى المقطع

ಕಣತುಳಿಸುವ ಕೆಲಸವು ದ್ರಾಕ್ಷಿಯ ಬೆಳೆಯ ಕಾಲದ ತನಕ ಮತ್ತು ದ್ರಾಕ್ಷಿಯ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದ ವರೆಗೂ ನಡೆಯುವವು, ನೀವು ಸಮೃದ್ಧಿಯಾಗಿ ಊಟ ಮಾಡುವಿರಿ, ನಿಮ್ಮ ದೇಶದಲ್ಲಿ ಸುರಕ್ಷಿತವಾಗಿ ವಾಸಮಾಡುವಿರಿ.

ಆದರೆ ನೀವು ಯೊರ್ದನ್ ನದಿಯನ್ನು ದಾಟಿ, ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವತ್ತಾಗಿ ಕೊಡುವ ಆ ದೇಶದಲ್ಲಿ ಮನೆಮಾಡಿಕೊಂಡಿರುವಾಗ, ನಿಮ್ಮ ಸುತ್ತಲೂ ಶತ್ರುಗಳು ಯಾರೂ ಇಲ್ಲದಂತೆ ಯೆಹೋವನು ಮಾಡಿದ್ದರಿಂದ ನೀವು ನಿರ್ಭಯವಾಗಿರುವ ಕಾಲದಲ್ಲಿ,

ಭೂಮಿಯು ಒಳ್ಳೆಯ ಬೆಳೆಯನ್ನು ಕೊಟ್ಟಿರುತ್ತದೆ. ದೇವರೇ, ನಮ್ಮ ದೇವರೇ ನಮ್ಮನ್ನು ಆಶೀರ್ವದಿಸಿದ್ದಾನೆ;

ನನ್ನ ಮಾತಿಗೆ ಕಿವಿಗೊಡುವವನಾದರೋ ಸುರಕ್ಷಿತನಾಗಿದ್ದು, ಯಾವ ಕೇಡಿಗೂ ಭಯಪಡದೆ ನೆಮ್ಮದಿಯಾಗಿ ಬಾಳುವನು” ಎಂಬುದೇ.

ಆಗ ನೀವು ಹೊಲದಲ್ಲಿ ಬೀಜ ಬಿತ್ತುವುದಕ್ಕೆ ಆತನು ಬಿತ್ತನೆಯ ಮಳೆಯನ್ನು ದಯಪಾಲಿಸುವನು; ನೆಲದ ಬೆಳೆಯಿಂದ ಸಾರವಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವನು; ಆ ದಿನದಲ್ಲಿ ನಿಮ್ಮ ಮಂದೆಗಳು ದೊಡ್ಡ ದೊಡ್ಡ ಕಾವಲುಗಳಲ್ಲಿ ಮೇಯುವವು.

¶ “‘ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ದುಷ್ಟಮೃಗಗಳು ದೇಶದಲ್ಲಿ ಇನ್ನಿರದಂತೆ ಮಾಡುವೆನು; ನನ್ನ ಜನರು ಕಾಡಿನಲ್ಲಿ ನಿರ್ಭಯವಾಗಿ ವಾಸಿಸುವರು, ಅರಣ್ಯದಲ್ಲಿ ಹಾಯಾಗಿ ನಿದ್ರಿಸುವರು.

ಕಣಜಗಳಲ್ಲಿ ಗೋದಿಯು ರಾಶಿರಾಶಿಯಾಗಿರುವುದು, ತೊಟ್ಟಿಗಳಲ್ಲಿ ದ್ರಾಕ್ಷಾರಸವೂ ಎಣ್ಣೆಯೂ ತುಂಬಿತುಳುಕುವವು.