ಆದರೆ ಏಳನೆಯ ವರ್ಷ ಯಾವ ವ್ಯವಸಾಯ ಮಾಡಬಾರದ ವಿಶ್ರಾಂತಿ ಕಾಲವಾಗಿಯೂ ಮತ್ತು ಯೆಹೋವನಿಗೆ ಆಚರಿಸಬೇಕಾದ ಸಬ್ಬತ್ ಕಾಲವಾಗಿಯೂ ಇರಬೇಕು. ಹೊಲದಲ್ಲಿ ಬೀಜವನ್ನು ಬಿತ್ತಬಾರದು, ದ್ರಾಕ್ಷಿತೋಟದ ಕೆಲಸವನ್ನು ಮಾಡಬಾರದು.
TSK
TSK · ಯಾಜಕಕಾಂಡ 25:20
مراجع Treasury of Scripture Knowledge في ಕನ್ನಡ IRV.
ಇವರು ನನ್ನ ಬಳಿಗೆ ಅಳುತ್ತಾ ಬಂದು, ‘ಮಾಂಸವನ್ನು ನಮಗೆ ತಿನ್ನಲಿಕ್ಕೆ ಕೊಡು’ ಎಂದು ಕೇಳುತ್ತಾರಲ್ಲಾ, ಇಷ್ಟು ಜನಕ್ಕೆ ಬೇಕಾದ ಮಾಂಸವು ನನಗೆ ಎಲ್ಲಿಂದ ದೊರಕೀತು?
ಇದನ್ನು ಕೇಳಿ ಅರಸನ ಸಮೀಪವರ್ತಿಯಾದ ಸರದಾರನು ದೇವರ ಮನುಷ್ಯನಿಗೆ, “ಯೆಹೋವನು ಆಕಾಶದಲ್ಲಿ ಕಿಂಡಿಗಳನ್ನು ಕೊರೆದರೂ ಇದು ಸಂಭವಿಸಲಾರದು” ಎನ್ನಲು ಎಲೀಷನು ಅವನಿಗೆ, “ಅದು ಸಂಭವಿಸುವುದನ್ನು ನೀನು ಕಣ್ಣಾರೆ ಕಾಣುವಿ, ಆದರೆ ನೀನು ಅದನ್ನು ಅನುಭವಿಸುವುದಿಲ್ಲ” ಎಂದು ಹೇಳಿದನು.
ಅವರು ಆತನಿಗೆ ವಿರುದ್ಧವಾಗಿ ಹೇಳಿದ್ದೇನೆಂದರೆ, “ದೇವರು ಅರಣ್ಯದಲ್ಲಿ ಊಟಕ್ಕೆ ಬಡಿಸಬಲ್ಲನೋ?
¶ ‹“ಈ ಕಾರಣದಿಂದ, ನಮ್ಮ ಜೀವನಕ್ಕೆ ಏನು ಊಟಮಾಡಬೇಕು, ಏನು ಕುಡಿಯಬೇಕು, ನಮ್ಮ ದೇಹರಕ್ಷಣೆಗಾಗಿ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವು ಉಡುಪಿಗಿಂತ ದೇಹವು ಮೇಲಾದುದಲ್ಲವೇ.›
‹ಏನು ಊಟ ಮಾಡಬೇಕು? ಏನು ಕುಡಿಯಬೇಕು? ಎಂದು ತವಕಪಟ್ಟು ಚಿಂತಿಸಬೇಡಿರಿ.›
ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. “ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ” ಎಂದು ದೇವರು ತಾನೇ ಹೇಳಿದ್ದಾನೆ.