ನಾನು ಕೋಪಗೊಂಡು ನಿಮ್ಮ ಶತ್ರುಗಳನ್ನು ಕತ್ತಿಯಿಂದ ಸಂಹಾರಮಾಡಿಸುವೆನು. ನಿಮ್ಮ ಹೆಂಡತಿಯರು ವಿಧವೆಯರಾಗುವರು. ನಿಮ್ಮ ಮಕ್ಕಳು ದಿಕ್ಕಿಲ್ಲದವರಾಗುವರು.
TSK
TSK · ಯಾಜಕಕಾಂಡ 25:36
مراجع Treasury of Scripture Knowledge في ಕನ್ನಡ IRV.
ಆದುದರಿಂದ ನೀವು ಒಬ್ಬರಿಗೊಬ್ಬರು ಅನ್ಯಾಯಮಾಡಬಾರದು; ನಿಮ್ಮ ದೇವರಿಗೆ ಭಯಪಡುವವರಾಗಿರಬೇಕು; ನಾನು ನಿಮ್ಮ ದೇವರಾದ ಯೆಹೋವನು.
ಇನ್ನು ಕೆಲವರು, “ಬರಗಾಲದಲ್ಲಿ ಧಾನ್ಯವನ್ನು ಸಂಪಾದಿಸಿಕೊಳ್ಳಲು ನಮ್ಮ ಹೊಲ, ದ್ರಾಕ್ಷಿತೋಟ, ಮನೆಗಳನ್ನು ಒತ್ತೆ ಇಟ್ಟಿದ್ದೇವೆ” ಎಂದು ಹೇಳಿದರು.
ನನಗಿಂತ ಮೊದಲಿದ್ದ ದೇಶಾಧಿಪತಿಗಳು ಜನರ ಮೇಲೆ ಬಹಳ ಭಾರಹಾಕಿ ಅವರಿಂದ ದಿನಕ್ಕೆ ನಲ್ವತ್ತು ರೂಪಾಯಿಯ ಆಹಾರವನ್ನೂ, ದ್ರಾಕ್ಷಾರಸವನ್ನೂ ತೆಗೆದುಕೊಂಡದ್ದಲ್ಲದೆ ಅವರ ಸೇವಕರೂ ಜನರ ಮೇಲೆ ದೊರೆತನ ನಡೆಸಿದರು. ನಾನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಇರುವುದರಿಂದ ಹಾಗೆ ಮಾಡದೆ ಆ ಪೌಳಿಗೋಡೆ ಕಟ್ಟುವುದರಲ್ಲಿ ನಿರತನಾಗಿದ್ದೆನು.
ಬಡ್ಡಿ ಮತ್ತು ಅನ್ಯಾಯ ಲಾಭದಿಂದ ವೃದ್ಧಿಯಾದ ಆಸ್ತಿಯು ಬಡವರಲ್ಲಿ ಕನಿಕರಪಡುವವನ ಪಾಲಾಗುವುದು.
ಅಸಹ್ಯಕಾರ್ಯವನ್ನು ಮಾಡಿ, ಸಾಲಕ್ಕೆ ಬಡ್ಡಿತೆಗೆದು, ಲಾಭಕ್ಕೆ ಹಣಕೊಟ್ಟು, ಬಲಾತ್ಕಾರಿಯೂ ಮತ್ತು ರಕ್ತಸುರಿಸುವವನೂ ಆಗಿದ್ದರೆ ಜೀವಿಸುವನೇ? ಖಂಡಿತ ಜೀವಿಸುವುದಿಲ್ಲ; ಈ ದುರಾಚಾರಗಳನ್ನೆಲ್ಲಾ ನಡೆಸಿದನಲ್ಲವೇ? ಅವನು ಸಾಯುವುದು ಖಂಡಿತ; ತನ್ನ ಮರಣ ದಂಡನೆಗೆ ತಾನೇ ಕಾರಣ.
ನಿನ್ನವರು ರಕ್ತ ಸುರಿಸುವುದಕ್ಕೆ ಲಂಚ ತೆಗೆದುಕೊಂಡಿದ್ದಾರೆ; ನಿನ್ನವರು ಸಾಲಕ್ಕೆ ಬಡ್ಡಿ ತೆಗೆದುಕೊಂಡು ಲಾಭಕ್ಕೆ ಹಣಕೊಟ್ಟು ತಮ್ಮ ನೆರೆಯವರನ್ನು ಬಾಧಿಸಿ, ದೋಚಿಕೊಂಡು ನನ್ನನ್ನು ಮರೆತೇ ಬಿಟ್ಟಿದ್ದಾರೆ ಇದು ಕರ್ತನಾದ ಯೆಹೋವನ ನುಡಿ.