¶ “ಸ್ವದೇಶಸ್ಥರಾದ ನೀವೂ ಮತ್ತು ನಿಮ್ಮಲ್ಲಿ ವಾಸವಾಗಿರುವ ಅನ್ಯದೇಶದವರು, ಎಲ್ಲರೂ ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಸಕಲ ವಿಧವಾದ ಕೆಲಸಗಳನ್ನು ಬಿಟ್ಟು ಉಪವಾಸಮಾಡಿ ನಿಮ್ಮ ಆತ್ಮಗಳನ್ನು ಕುಂದಿಸಿಕೊಳ್ಳಬೇಕು. ಇದು ನಿಮಗೆ ಶಾಶ್ವತವಾದ ನಿಯಮ.
TSK
TSK · ಯಾಜಕಕಾಂಡ 25:9
مراجع Treasury of Scripture Knowledge في ಕನ್ನಡ IRV.
“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನಿಮಗೆ ಸಂಪೂರ್ಣ ವಿರಾಮವಿರಬೇಕು. ಅದನ್ನು ತುತ್ತೂರಿಗಳ ಧ್ವನಿಯಿಂದ ಪ್ರಕಟಪಡಿಸಬೇಕು. ದೇವಾರಾಧನೆಗಾಗಿ ಸಭೆಸೇರಬೇಕು.
ನೀವು ಐವತ್ತನೆಯ ವರ್ಷವನ್ನು ದೇವರಿಗೆ ಮೀಸಲಾದ ವರ್ಷವೆಂದು ಭಾವಿಸಿ, ಅದರಲ್ಲಿ ದೇಶದ ನಿವಾಸಿಗಳೆಲ್ಲರಿಗೂ ಬಿಡುಗಡೆಯಾಯಿತು ಎಂಬುದಾಗಿ ಸಾರಬೇಕು. ಅದು ಜೂಬಿಲಿ ಸಂವತ್ಸರವಾದುದರಿಂದ ನೀವೆಲ್ಲರು ನಿಮ್ಮ ನಿಮ್ಮ ಸ್ವಂತ ಭೂಮಿಗಳಿಗೂ ಮತ್ತು ಸ್ವಜನರ ಬಳಿಗೂ ಹೋಗಿ ಇರಬಹುದು.
ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಮಾರಿದವನಿಗೆ ಅಂದರೆ ಯಾರ ಪಿತ್ರಾರ್ಜಿತ ಭೂಮಿಗೆ ಸೇರಿದೆಯೋ ಅವನಿಗೆ ಪುನಃ ಬರಬೇಕು.
ಇಸ್ರಾಯೇಲರ ಜೂಬಿಲಿ ಸಂವತ್ಸರವು ಬಂದಾಗ ಅವರ ಸ್ವತ್ತು ಅವರು ಸೇರಿಕೊಳ್ಳುವ ಕುಲದ ಸ್ವತ್ತಿಗೆ ಕೂಡಿಕೊಳ್ಳುವುದರಿಂದ ನಮ್ಮ ಕುಲದಿಂದ ತೆಗೆಯಲ್ಪಡುವುದು” ಎಂದು ಹೇಳಿದರು.
ಯಾವಾಗಲೂ ನಿನ್ನ ನಾಮದಲ್ಲಿ ಆನಂದಿಸುತ್ತಾರೆ; ನಿನ್ನ ನೀತಿಯಿಂದ ಏಳಿಗೆ ಹೊಂದುತ್ತಾರೆ.
ಆದರೂ “ಅವರಿಗೆ ಕೇಳಿಸಲಿಲ್ಲವೇನೋ?” ಎಂದು ಹೇಳುತ್ತೇನೆ. ಹೌದು ನಿಶ್ಚಯವಾಗಿ ಕೇಳಿಸಿಕೊಂಡಿದ್ದರು. “ಸಾರುವವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿದವು.”
ಹೇಗೆಂದರೆ, ಕ್ರಿಸ್ತನಲ್ಲಿ ದೇವರು ಜಗತ್ತನ್ನು ತನ್ನೊಡನೆ ಸಂಧಾನಮಾಡಿಕೊಳ್ಳುತ್ತಿದ್ದಾನೆ; ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೇ, ಈ ಸಂಧಾನದ ಸಂದೇಶವನ್ನು ಎಲ್ಲರಿಗೂ ಸಾರುವಂತೆ ಅದನ್ನು ನಮ್ಮ ಮೇಲೆ ಹೊರಿಸಿದ್ದಾನೆ.