ನಾನು ನಿಮಗಿಂತ ಮೊದಲು ಹೊರಡಿಸಿದ ಜನಾಂಗದ ಆಚಾರಗಳನ್ನು ನೀವು ಅನುಸರಿಸಬಾರದು; ಅವರು ಈ ದುರಾಚಾರಗಳನ್ನೆಲ್ಲಾ ನಡಿಸಿದ್ದರಿಂದ ನನಗೆ ಅಸಹ್ಯವಾದಾರು.
TSK
TSK · ಯಾಜಕಕಾಂಡ 26:30
مراجع Treasury of Scripture Knowledge في ಕನ್ನಡ IRV.
ನನ್ನ ನಿಯಮಗಳನ್ನು ಬೇಡವೆಂದು ನನ್ನ ವಿಧಿಗಳನ್ನು ತಳ್ಳಿಬಿಟ್ಟರೆ ನೀವು ನನ್ನ ಆಜ್ಞೆಗಳನ್ನು ಅನುಸರಿಸದೆ ನನ್ನ ನಿಬಂಧನೆಯನ್ನು ಮೀರಿ ನಡೆದರೆ,
ಅನಂತರ ಗೆಬದಿಂದ ಬೇರ್ಷೆಬದವರೆಗಿರುವ ಯೆಹೂದ ಪಟ್ಟಣಗಳ ಎಲ್ಲಾ ಯಾಜಕರನ್ನು ಕರೆಯಿಸಿಕೊಂಡು ಅವರು ಧೂಪಹಾಕುತ್ತಿದ್ದ ಪೂಜಾಸ್ಥಳಗಳನ್ನು ನಾಶಮಾಡಿಸಿದನು. ಪುರಾಧಿಕಾರಿಯಾದ ಯೆಹೋಶುವನ ಬಾಗಿಲಿನ ಎಡಗಡೆಯಲ್ಲಿದ್ದ ದ್ವಾರಗಳ ದೇವತೆಯ ಪೂಜಾಸ್ಥಳಗಳನ್ನು ಕೆಡವಿ ಹಾಕಿಸಿದನು.
ಯೋಷೀಯನು ಅವುಗಳನ್ನು ಕೆಡವಿಬಿಟ್ಟು ಅವುಗಳ ಪೂಜಾರಿಗಳನ್ನು ಯಜ್ಞವೇದಿಯ ಮೇಲೆ ವಧಿಸಿ ಆ ಮನುಷ್ಯರ ಎಲುಬುಗಳನ್ನು ಸುಟ್ಟು ಯೆರೂಸಲೇಮಿಗೆ ಹಿಂದಿರುಗಿ ಹೋದನು.
ತರುವಾಯ ಜನರೆಲ್ಲರೂ ಬಾಳನ ಕ್ಷೇತ್ರಕ್ಕೆ ಹೋಗಿ ಪೂಜಾರಿಯಾದ ಮತ್ತಾನನನ್ನು ಯಜ್ಞವೇದಿಗಳ ಎದುರಿನಲ್ಲಿಯೇ ಕೊಂದುಹಾಕಿದನು; ಆ ಕ್ಷೇತ್ರವನ್ನೂ ಅದರಲ್ಲಿದ್ದ ಯಜ್ಞವೇದಿ ಹಾಗೂ ವಿಗ್ರಹಗಳನ್ನೂ ಒಡೆದುಹಾಕಿ ಹಾಳುಮಾಡಿ ಬಿಟ್ಟರು.
¶ ಅವನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ಇನ್ನೂ ಯೌವನಸ್ಥನಾಗಿರುವಾಗಲೇ ತನ್ನ ಪೂರ್ವಿಕನಾದ ದಾವೀದನ ದೇವರನ್ನು ಹುಡುಕುವವನಾದನು. ಹನ್ನೆರಡನೆಯ ವರ್ಷ ಯೆಹೂದದಲ್ಲಿಯೂ ಯೆರೂಸಲೇಮಿನಲ್ಲಿ ಇದ್ದ ಪೂಜಾಸ್ಥಳಗಳನ್ನೂ, ಅಶೇರ ಸ್ತಂಭಗಳನ್ನೂ, ಕೆತ್ತಿದ ಮತ್ತು ಎರಕದ ವಿಗ್ರಹಗಳನ್ನೂ ತೆಗೆದುಹಾಕಿ ದೇಶವನ್ನು ಶುದ್ಧಿಗೊಳಿಸಿದನು.
ಅವರು ತಮ್ಮ ಪೂಜಾಸ್ಥಳಗಳಿಂದ ಆತನನ್ನು ಬೇಸರಗೊಳಿಸಿ, ವಿಗ್ರಹಗಳಿಂದ ರೇಗಿಸಿದರು.
ಆಗ ಯೆಹೋವನ ಕೋಪವು ಅವರ ಮೇಲೆ ಉರಿಗೊಂಡಿತು; ಆತನು ತನ್ನ ಸ್ವಾಸ್ತ್ಯವಾದ ಪ್ರಜೆಗಳನ್ನು ಅಸಹ್ಯಿಸಿ,
¶ ಯೆಹೋವನು ಹೀಗೆನ್ನುತ್ತಾನೆ, “ಆ ಕಾಲದಲ್ಲಿ ಯೆಹೂದದ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು, ಯೆರೂಸಲೇಮಿನ ನಿವಾಸಿಗಳು, ಇವರೆಲ್ಲರ ಎಲುಬುಗಳನ್ನು ಸಮಾಧಿಗಳೊಳಗಿಂದ ತೆಗೆದುಬಿಡುವರು.
ಅವರ ಅಧರ್ಮಕ್ಕೂ, ಪಾಪಕ್ಕೂ ಎರಡರಷ್ಟು ಶಿಕ್ಷೆಯನ್ನು ಮೊದಲು ಕೊಡುವೆನು; ಹೆಣಗಳಂತಿರುವ ತಮ್ಮ ಹೇಯವಿಗ್ರಹಗಳಿಂದ ನನ್ನ ದೇಶವನ್ನು ಹೊಲಸುಮಾಡಿ, ನನ್ನ ಸ್ವತ್ತನ್ನು ತಮ್ಮ ಅಸಹ್ಯ ವಸ್ತುಗಳಿಂದ ತುಂಬಿಸಿದ್ದಾರಷ್ಟೆ.”
ಆ ವಂಶದವರು ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ, ಎಲ್ಲಾ ಬೆಟ್ಟಗಳ ತುದಿಗಳಲ್ಲಿಯೂ, ಸೊಂಪಾದ ಎಲ್ಲಾ ಮರಗಳ ಕೆಳಗೂ ತಮ್ಮ ಸಮಸ್ತ ವಿಗ್ರಹಗಳಿಗೆ ಸುಗಂಧಹೋಮ ಮಾಡುತ್ತಿದ್ದ ದಟ್ಟವಾದ ಎಲ್ಲಾ ಏಲಾ ಮರಗಳ ಕೆಳಗೂ ಹತರಾಗಿ ತಮ್ಮ ಯಜ್ಞವೇದಿಗಳ ಸುತ್ತಲೂ ತಮ್ಮ ವಿಗ್ರಹಗಳ ನಡುವೆ ಬಿದ್ದಿರುವಾಗ ನಾನೇ ಯೆಹೋವನು ಎಂದು ಗೊತ್ತಾಗುವುದು.
ಇಸ್ರಾಯೇಲರ ಮನಸ್ಸು ನುಣುಚಿಕೊಳ್ಳುತ್ತದೆ; ಈಗ ದಂಡನೆಗೆ ಈಡಾಗಿದ್ದಾರೆ. ಯೆಹೋವನೇ ಅವರ ಯಜ್ಞವೇದಿಗಳನ್ನು ಮುರಿದುಬಿಡುವನು. ಅವರ ವಿಗ್ರಹ ಸ್ತಂಭಗಳನ್ನು ಹಾಳುಮಾಡುವನು.