¶ ಆ ದಿನದಲ್ಲಿ ಯೆಹೋವನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಐಗುಪ್ತ ದೇಶದ ನದಿಯಿಂದ ಯೂಫ್ರೆಟಿಸ್ ಮಹಾ ನದಿಯವರೆಗೂ ಇರುವ ಈ ದೇಶವನ್ನೆಲ್ಲಾ ನಿನ್ನ ಸಂತತಿಯವರಿಗೆ ಕೊಟ್ಟಿದ್ದೇನೆ.
TSK
TSK · ಯಾಜಕಕಾಂಡ 26:45
مراجع Treasury of Scripture Knowledge في ಕನ್ನಡ IRV.
ಆ ರಾತ್ರಿ ಯೆಹೋವನು ಅವನಿಗೆ ಕಾಣಿಸಿಕೊಂಡು, “ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರು; ನೀನು ಭಯಪಡಬೇಡ; ನಾನು ನಿನ್ನ ಸಂಗಡ ಇದ್ದೇನೆ; ನನ್ನ ಸೇವಕನಾದ ಅಬ್ರಹಾಮನ ನಿಮಿತ್ತ ನಿನ್ನನ್ನು ಆಶೀರ್ವದಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು” ಎಂದು ಹೇಳಿದನು.
ದೇವರು ಅವರ ನರಳಾಟವನ್ನು ಕೇಳಿ, ತಾನು ಅಬ್ರಹಾಮ, ಇಸಾಕ, ಯಾಕೋಬನ ಸಂಗಡ ಮಾಡಿದ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡನು.
ಆದ್ದರಿಂದ ನೀವು ನನ್ನ ಮಾತುಗಳನ್ನು ಶ್ರದ್ಧೆಯಿಂದ ಕೇಳಿ, ನನ್ನ ಒಡಂಬಡಿಕೆಯನ್ನು ಕಾಪಾಡಿಕೊಂಡರೆ, ನೀವು ಎಲ್ಲಾ ಜನಾಂಗಗಳಲ್ಲಿ ನನಗೆ ಸ್ವಕೀಯ ಜನರಾಗಿರುವಿರಿ. ಸಮಸ್ತ ಭೂಮಿಯು ನನ್ನದೇ.
ನಿಮ್ಮ ದೇವರಾಗಿರುವುದಕ್ಕೆ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ಯೆಹೋವನು ನಾನೇ; ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು.
ನಾನು ನಿಮ್ಮ ದೇವರಾದ ಯೆಹೋವನು; ನಿಮಗೆ ದೇವರಾಗುವುದಕ್ಕೂ ಮತ್ತು ನಿಮಗೆ ಕಾನಾನ್ ದೇಶವನ್ನು ಕೊಡುವುದಕ್ಕೂ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿದವನು ನಾನೇ.
ಇವರ ಮೊಂಡುತನ, ದುಷ್ಟತ್ವ, ಪಾಪ ಇವುಗಳನ್ನು ಮನಸ್ಸಿಗೆ ತೆಗೆದುಕೊಳ್ಳದೆ ನಿನ್ನ ಸೇವಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರನ್ನು ನೆನಪಿಗೆ ತಂದುಕೋ.
ತನ್ನ ಒಡಂಬಡಿಕೆಯನ್ನು ನೆನಪುಮಾಡಿಕೊಂಡು, ತನ್ನ ಕೃಪಾತಿಶಯದಿಂದ ಅವರನ್ನು ಕನಿಕರಿಸಿದನು.
‘ಆದರೂ ಯಾವ ಜನಾಂಗಗಳ ಮುಂದೆ ಅವರನ್ನು ಪಾರುಮಾಡಿದೆನೋ, ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗಬಾರದೆಂದು ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆನು.
ಆತನು ನಮ್ಮ ಪೂರ್ವಿಕರಿಗೆ ದಯೆಯನ್ನು ತೋರಿಸುವುದರ ಮೂಲಕ ನಮ್ಮ ಮೂಲಪಿತೃವಾದ ಅಬ್ರಹಾಮನಿಗೆ ಪ್ರಮಾಣಮಾಡಿ ಕೊಟ್ಟ ತನ್ನ ಪರಿಶುದ್ಧವಾದ ಒಡಂಬಡಿಕೆಯನ್ನು ನೆನಪಿಸಿಕೊಳ್ಳುವವನಾಗಿದ್ದಾನೆ.
ಇಸ್ರಾಯೇಲ್ಯರ ಕೂಡ ಇನ್ನು ಅಪನಂಬಿಕೆಯಲ್ಲಿ ನಿಲ್ಲದ ಪಕ್ಷಕ್ಕೆ ಅವರನ್ನೂ ಕಸಿಮಾಡುವನು. ದೇವರು ಅವರನ್ನು ತಿರುಗಿ ಕಸಿಕಟ್ಟುವುದಕ್ಕೆ ಸಮರ್ಥನಾಗಿದ್ದಾನೆ.
ಈ ದಿನದವರೆಗೂ ಮೋಶೆಯ ಧರ್ಮಶಾಸ್ತ್ರವು ಓದುವಾಗೆಲ್ಲಾ ಮುಸುಕು ಅವರ ಹೃದಯವನ್ನು ಮುಚ್ಚಿರುತ್ತದೆ.