¶ “‘ನನ್ನ ಆಜ್ಞಾವಿಧಿಗಳನ್ನು ನೀವು ಅನುಸರಿಸಿ ನಡೆಯಬೇಕು. ಆಗ ನೀವು ಆ ದೇಶದಲ್ಲಿ ನಿರ್ಭಯವಾಗಿ ವಾಸವಾಗಿರುವಿರಿ.
TSK
TSK · ಯಾಜಕಕಾಂಡ 26:6
مراجع Treasury of Scripture Knowledge في ಕನ್ನಡ IRV.
ನಿಮ್ಮ ಮೇಲೆ ಕಾಡುಮೃಗಗಳನ್ನು ಬರಮಾಡುವೆನು; ಅವು ನಿಮ್ಮ ಮಕ್ಕಳನ್ನು ಕದ್ದುಕೊಂಡು ಹೋಗುವವು, ನಿಮ್ಮ ಪಶುಗಳನ್ನು ಕೊಲ್ಲುವವು, ನಿಮ್ಮನ್ನು ಸ್ವಲ್ಪ ಜನರನ್ನಾಗಿ ಮಾಡುವವು; ನಿಮ್ಮ ದಾರಿಗಳು ಪಾಳು ಬೀಳುತ್ತದೆ.
ಅವರಿಗೆ ಆರಂಭದಲ್ಲಿ ಯೆಹೋವನ ಭಯಭಕ್ತಿ ಇರಲಿಲ್ಲ. ಆದುದರಿಂದ ಆತನು ಸಿಂಹಗಳನ್ನು ಕಳುಹಿಸಿದನು. ಅವು ಅವರಲ್ಲಿ ಕೆಲವರನ್ನು ಕೊಂದವು.
ಹೀಗೆ ದೇವರ ಅನುಗ್ರಹದಿಂದ ಸುತ್ತಮುತ್ತಲಿನ ವೈರಿಗಳು ಭಯಭೀತರಾದರು. ಯೆಹೋಷಾಫಾಟನ ರಾಜ್ಯಕ್ಕೆ ಶತ್ರುಗಳ ಭಯತಪ್ಪಿ ಸಮಾಧಾನ ಉಂಟಾಯಿತು.
ಮಲಗಿಕೊಂಡಾಗ ನಿನ್ನನ್ನು ಯಾರೂ ಹೆದರಿಸುವುದಿಲ್ಲ. ಅನೇಕರು ನಿನ್ನ ಮುಖ ಪ್ರಸನ್ನತೆಯನ್ನು ಅಪೇಕ್ಷಿಸುವರು.
ನಾನು ನಿರ್ಭಯವಾಗಿರುವುದರಿಂದ ಮಲಗಿಕೊಂಡು ಕೂಡಲೆ ನಿದ್ದೆಮಾಡುವೆನು. ಏಕೆಂದರೆ ಯೆಹೋವನೇ, ನನಗೆ ಯಾವ ಅಪಾಯವೂ ಬಾರದಂತೆ ನೀನು ನನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೀ.
ಯೆಹೋವ ದೇವರು ಏನು ಹೇಳುತ್ತಾನೋ ಕೇಳುತ್ತೇನೆ. ಆತನು ತನ್ನ ಭಕ್ತಜನರಿಗೆ ಸಮಾಧಾನದ ವಾಕ್ಯವನ್ನು ಹೇಳುತ್ತಾನಲ್ಲಾ. ಅವರಾದರೋ ತಿರುಗಿ ಮೂರ್ಖತನದಲ್ಲಿ ಬೀಳದಿರಲಿ.
ನಮ್ಮ ಪಶುಗಳು ಅಸಂಖ್ಯಾತವಾಗಲಿ, ವೈರಿಗಳು ಒಳಗೆ ನುಗ್ಗುವುದಾಗಲಿ, ನಮ್ಮವರನ್ನು ಸೆರೆ ಒಯ್ಯುವುದಾಗಲಿ ಇರುವುದಿಲ್ಲ, ಬೀದಿಗಳಲ್ಲಿ ಗೋಳಾಟವು ಕೇಳಿಸುವುದಿಲ್ಲ.
ನೀನು ಮಲಗುವಾಗ ಹೆದರಿಕೆ ಇರುವುದಿಲ್ಲ, ಮಲಗಿದ ಮೇಲೆ ಸುಖವಾಗಿ ನಿದ್ರೆಮಾಡುವಿ.
ಆತನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ದಿಯಾಗುವುದು. ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವುದು. ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.
ಸಿಂಹವು ಅಲ್ಲಿ ಇರದು. ಇಲ್ಲವೆ ಕ್ರೂರವಾದ ಮೃಗಗಳು ಅದರ ಮೇಲೆ ಹೋಗುವುದಿಲ್ಲ. ಅದು ಅಲ್ಲಿ ಕಾಣುವುದೇ ಇಲ್ಲ. ಬಿಡುಗಡೆಯಾದವರೇ ಅಲ್ಲಿ ನಡೆಯುವರು.
ಯೆಹೋವನು ಇಂತೆನ್ನುತ್ತಾನೆ, “ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ! ಇಸ್ರಾಯೇಲೇ, ಅಂಜಬೇಡ! ಇಗೋ ನಾನು ನಿನ್ನನ್ನು ದೂರದೇಶದಿಂದ ಉದ್ಧರಿಸುವೆನು, ನಿನ್ನ ಸಂತಾನವನ್ನು ಸೆರೆಹೋದ ಸೀಮೆಯಿಂದ ರಕ್ಷಿಸುವೆನು. ಯಾಕೋಬನು ಹಿಂದಿರುಗಿ ನೆಮ್ಮದಿಯಾಗಿಯೂ, ಹಾಯಾಗಿಯೂ ಇರುವುದು; ಯಾರೂ ಅದನ್ನು ಹೆದರಿಸರು.”
ನಾನು ಕಳುಹಿಸುವ ಕ್ಷಾಮದಿಂದಲೂ, ದುಷ್ಟಮೃಗಗಳಿಂದಲೂ ನಿನಗೆ ಪುತ್ರಶೋಕವು ಉಂಟಾಗುವುದು; ವ್ಯಾಧಿಯೂ, ರಕ್ತ ಪ್ರವಾಹವೂ ನಿನ್ನಲ್ಲಿ ವ್ಯಾಪಿಸುವವು; ನಿನ್ನನ್ನು ಖಡ್ಗಕ್ಕೆ ತುತ್ತು ಮಾಡುವೆನು” ಇದು ಯೆಹೋವನಾದ ನನ್ನ ನುಡಿ.
¶ “ಖಡ್ಗವೇ, ದೇಶವನ್ನು ಹೊಕ್ಕು ಹೋಗು ಎಂದು ಆಜ್ಞಾಪಿಸಿ, ನಾನು ಅದನ್ನು ಆ ದೇಶಕ್ಕೆ ತಂದು, ಜನ ಪಶುಗಳನ್ನು ಅದರೊಳಗಿಂದ ನಿರ್ಮೂಲಮಾಡುವ ಪಕ್ಷದಲ್ಲಿ,
¶ “‘ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ದುಷ್ಟಮೃಗಗಳು ದೇಶದಲ್ಲಿ ಇನ್ನಿರದಂತೆ ಮಾಡುವೆನು; ನನ್ನ ಜನರು ಕಾಡಿನಲ್ಲಿ ನಿರ್ಭಯವಾಗಿ ವಾಸಿಸುವರು, ಅರಣ್ಯದಲ್ಲಿ ಹಾಯಾಗಿ ನಿದ್ರಿಸುವರು.
ಆ ಕಾಲದಲ್ಲಿ ನಾನು ನನ್ನ ಜನರಿಗಾಗಿ ಭೂಜಂತುಗಳಿಗೂ, ಆಕಾಶದ ಪಕ್ಷಿಗಳಿಗೂ, ನೆಲದ ಕ್ರಿಮಿಕೀಟಗಳಿಗೂ ನಿಬಂಧನೆಮಾಡಿ ವಿಧಿಸಿ ಬಿಲ್ಲು, ಕತ್ತಿ ಮತ್ತು ಕಾಳಗಗಳನ್ನು ದೇಶದಲ್ಲಿ ನಿಲ್ಲದಂತೆ ಧ್ವಂಸಪಡಿಸಿ, ನನ್ನ ಜನರು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.
ಒಬ್ಬೊಬ್ಬನು ತನ್ನ ದ್ರಾಕ್ಷಾಲತೆ ಅಂಜೂರಗಿಡ ಇವುಗಳ ನೆರಳಿನಲ್ಲಿ ಕುಳಿತುಕೊಳ್ಳುವನು. ಅವರನ್ನು ಯಾರೂ ಹೆದರಿಸರು. ಸೇನಾಧೀಶ್ವರನಾದ ಯೆಹೋವನೇ ಇದನ್ನು ನುಡಿದಿದ್ದಾನೆ.
‘ಈ ಆಲಯದ ಮುಂದಿನ ವೈಭವವು ಹಿಂದಿನ ವೈಭವಕ್ಕಿಂತ ವಿಶೇಷವಾಗಿರುವುದು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ. ‘ಈ ಸ್ಥಳದಲ್ಲಿ ಸಮಾಧಾನವನ್ನು ಅನುಗ್ರಹಿಸುವೆನು’” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
¶ ‹“ನಾನು ನನ್ನ›‹ಸಮಾಧಾನವನ್ನು ನಿಮಗೆ ಕೊಟ್ಟು ಹೋಗುತ್ತಿದ್ದೇನೆ. ನನ್ನಲ್ಲಿರುವಂಥ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.›
¶ ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರೊಂದಿಗೆ ನಮಗೆ ಸಮಾಧಾನವುಂಟು.