ಇಸ್ರಾಯೇಲರ ಯೌವನಸ್ಥರಿಗೆ ನೀವು ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಮಾಡಿ ಸಮಾಧಾನ ಯಜ್ಞಕ್ಕಾಗಿ ಹೋರಿಗಳನ್ನು ಸಮರ್ಪಿಸಬೇಕೆಂದು ಅಪ್ಪಣೆಕೊಟ್ಟು ಕಳುಹಿಸಿದನು.
TSK
TSK · ಯಾಜಕಕಾಂಡ 3:1
مراجع Treasury of Scripture Knowledge في ಕನ್ನಡ IRV.
¶ “‘ಅವನು ದನವನ್ನು ಸರ್ವಾಂಗಹೋಮವಾಗಿ ಸಮರ್ಪಿಸುವುದಾದರೆ ಪೂರ್ಣಾಂಗವಾದ ಗಂಡನ್ನು ತರಬೇಕು. ತನ್ನನ್ನು ಯೆಹೋವನು ಮೆಚ್ಚುವಂತೆ ದೇವದರ್ಶನದ ಗುಡಾರದ ಬಾಗಿಲಿಗೆ ಅದನ್ನು ತರಬೇಕು.
¶ “‘ಜನರು ಯೆಹೋವನಿಗೆ ಅರ್ಪಿಸುವ ಸಮಾಧಾನಯಜ್ಞದ ನಿಯಮಗಳು ಇವೇ.
ಏಕೆಂದರೆ ಯಜ್ಞಪಶುಗಳನ್ನು ಬಯಲಿನಲ್ಲಿ ವಧಿಸುತ್ತಿದ್ದ ಇಸ್ರಾಯೇಲರು ಇನ್ನು ಮೇಲೆ ಅವುಗಳನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತಂದು, ಯೆಹೋವನ ಮುಂದೆ ಸಮಾಧಾನಯಜ್ಞವಾಗಿ ಯೆಹೋವನಿಗೆ ಸಮರ್ಪಿಸಬೇಕು.
ಯಾವನಾದರೂ ಸಮಾಧಾನಯಜ್ಞಕ್ಕಾಗಿ ಹರಕೆಯಾಗಿ ಅಥವಾ ಕಾಣಿಕೆಯಾಗಿ ದನವನ್ನು ಅಥವಾ ಹಿಂಡಿನ ಆಡು ಇಲ್ಲವೇ ಕುರಿಗಳನ್ನು ತಂದರೆ ಅವು ಯೆಹೋವನಿಗೆ ಸಮರ್ಪಕವಾಗುವುದಕ್ಕಾಗಿ ಅದು ಪೂರ್ಣಾಂಗವಾಗಿಯೇ ಇರಬೇಕು; ಅದರಲ್ಲಿ ಯಾವ ಕುಂದುಕೊರತೆಯೂ ಇರಬಾರದು.
ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು, ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು. ಅಮ್ಮೀನಾದಾಬನ ಮಗನಾದ ನಹಶೋನನು ಸಮರ್ಪಿಸಿದ ಕಾಣಿಕೆಗಳು ಇವೇ.
ಮರುದಿನ ಅವರು ಬೆಳಿಗ್ಗೆ ಎದ್ದು ಯಜ್ಞವೇದಿಯನ್ನು ಕಟ್ಟಿ ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು.
“ಎಲೈ, ಈ ದಿನ ನನ್ನ ಹರಕೆಗಳನ್ನು ಸಲ್ಲಿಸಿದ್ದೇನೆ, ಸಮಾಧಾನ ಯಜ್ಞಶೇಷವು ನನ್ನಲ್ಲಿದೆ,
ನೀವು ನನಗೆ ಸರ್ವಾಂಗಹೋಮಗಳನ್ನು ಮತ್ತು ಧಾನ್ಯನೈವೇದ್ಯಗಳನ್ನು ಅರ್ಪಿಸಿದರೂ, ನಾನು ಅದನ್ನು ಸ್ವೀಕರಿಸುವುದಿಲ್ಲ, ಸಮಾಧಾನದ ಯಜ್ಞವಾಗಿ ನೀವು ಒಪ್ಪಿಸಿದ ಕೊಬ್ಬಿದ ಪಶುಗಳನ್ನು ನೋಡುವುದಿಲ್ಲ.
“ಒಬ್ಬನು ಹರಕೆ ಹೊತ್ತು ತನ್ನ ಹಿಂಡಿನಲ್ಲಿರುವ ಗಂಡುಪಶು ಹಾಗೂ ಕಳಂಕವಾದ ಪಶುವನ್ನು ಯೆಹೋವನಿಗೆ ಯಜ್ಞಮಾಡಿದರೆ ಆ ಮೋಸಗಾರನಿಗೆ ಶಾಪವು ತಟ್ಟಲಿ; ನಾನು ರಾಜಾಧಿರಾಜ, ನನ್ನ ನಾಮವು ಅನ್ಯಜನಾಂಗಗಳ ಭಯಭಕ್ತಿಗೆ ಪಾತ್ರವಾಗಿದೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
ಮತ್ತು ಆತನು ಶಿಲುಬೆಯ ಮೇಲೆ ಸುರಿಸಿದ ರಕ್ತದಿಂದ ತಾನು ಸಮಾಧಾನವನ್ನುಂಟುಮಾಡಿ, ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ತನ್ನ ಕುಮಾರನ ಮೂಲಕ ತನಗೆ ಸಂಧಾನಪಡಿಸಿಕೊಳ್ಳಬೇಕೆಂತಲೂ ತಂದೆಯಾದ ದೇವರು ಇಚ್ಛಿಸಿದನು.
ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಸೇರಬೇಕೆಂದು ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಚುರಪಡಿಸುತ್ತೇವೆ. ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರುವಂಥದ್ದಾಗಿದೆ.