ಆರೋನನ ವಂಶದವರಾದ ಯಾಜಕರು ಅದನ್ನು ಯಜ್ಞವೇದಿಯಲ್ಲಿ ಉರಿಯುವ ಕಟ್ಟಿಗೆಯ ಮೇಲಿರುವ ಸರ್ವಾಂಗಹೋಮ ದ್ರವ್ಯದೊಡನೆ ಹೋಮಮಾಡಬೇಕು. ಅದು ಯೆಹೋವನಿಗೆ ಸುಗಂಧಹೋಮ ಆಗಿರುವುದು.
TSK
TSK · ಯಾಜಕಕಾಂಡ 3:11
مراجع Treasury of Scripture Knowledge في ಕನ್ನಡ IRV.
ಅವರು ದೇವರಿಗೆ ಮೀಸಲಾಗಿರಬೇಕು; ತಾವು ಸೇವಿಸುವ ದೇವರ ಹೆಸರನ್ನು ಅಪಕೀರ್ತಿಗೆ ಗುರಿಪಡಿಸಬಾರದು. ತಮ್ಮ ದೇವರ ಆಹಾರವನ್ನು ಅಂದರೆ ಯೆಹೋವನ ಹೋಮದ್ರವ್ಯಗಳನ್ನು ಅವರು ಸಮರ್ಪಿಸುವವರು ಆಗಿರುವುದರಿಂದ ಪವಿತ್ರರಾಗಿರಬೇಕು.
“ನೀನು ಆರೋನನಿಗೆ ಹೀಗೆ ಆಜ್ಞಾಪಿಸು, ‘ನಿನ್ನ ಸಂತತಿಯವರ ಎಲ್ಲಾ ತಲಾಂತರಗಳಲ್ಲಿಯೂ ಯಾವ ಅಂಗವಿಕಲನೂ ದೇವರ ಆಹಾರವನ್ನು ಸಮರ್ಪಿಸುವುದಕ್ಕೆ ನನ್ನ ಸನ್ನಿಧಿಗೆ ಬರಬಾರದು; ಅಂಗವಿಕಲನು ಈ ಕಾರ್ಯವನ್ನು ವಹಿಸಿಕೊಳ್ಳಲೇ ಬಾರದು.
ಅನ್ಯದೇಶದವನಿಂದ ತೆಗೆದುಕೊಂಡ ಅಂತಹ ಪಶುವನ್ನು ನಿಮ್ಮ ದೇವರಿಗೆ ಆಹಾರವಾಗಿ ಒಪ್ಪಿಸಬಾರದು; ಅದು ಕುಂದುಳ್ಳದ್ದು, ಪೂರ್ಣಾಂಗವಾದುದಲ್ಲ; ಆದಕಾರಣ ಸಮರ್ಪಣೆ ಆಗುವುದಿಲ್ಲ’” ಅಂದನು.
ನಾನು ಹೊಯ್ಯಲ್ಪಟ್ಟ ನೀರಿನಂತಿದ್ದೇನೆ; ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿದೆ. ನನ್ನ ಹೃದಯ ಮೇಣದಂತೆ ನನ್ನಲ್ಲಿ ಕರಗಿಹೋಗಿದೆ.
‘ಇಸ್ರಾಯೇಲ್ ವಂಶದವರೇ, ನೀವು ನನ್ನ ರೊಟ್ಟಿಯನ್ನೂ, ಕೊಬ್ಬನ್ನೂ, ರಕ್ತವನ್ನೂ ಅರ್ಪಿಸುವಾಗ, ಹೃದಯದಲ್ಲಿಯೂ, ಶರೀರದಲ್ಲಿಯೂ ಸುನ್ನತಿಹೀನರಾದ ಮ್ಲೇಚ್ಛರನ್ನು ನನ್ನ ಪವಿತ್ರಾಲಯದೊಳಗೆ ಬರಮಾಡಿ, ನನ್ನ ಮಂದಿರವನ್ನು ಅಪವಿತ್ರಗೊಳಿಸಿ, ನನ್ನ ಒಡಂಬಡಿಕೆಯನ್ನು ಭಂಗಪಡಿಸಿ, ನಿಮ್ಮ ದುರಾಚಾರಗಳ ಲೆಕ್ಕವನ್ನು ಹೆಚ್ಚಿಸಿದ್ದೀರಿ.
¶ ನೀವೋ, “ಯೆಹೋವನ ಮೇಜು ಅಶುದ್ಧ, ಅದರ ಮೇಲಣ ನೈವೇದ್ಯ ಅಸಹ್ಯ ಅಂದುಕೊಳ್ಳುವುದರಿಂದ ನನ್ನ ನಾಮವನ್ನು ಅಪಕೀರ್ತಿಗೆ ಗುರಿಮಾಡಿದ್ದೀರಿ.
ನೀವು ಕರ್ತನ ಪಾನಪಾತ್ರೆಯಲ್ಲಿಯೂ ಹಾಗೂ ದೆವ್ವಗಳ ಪಾನಪಾತ್ರೆಯಲ್ಲಿಯೂ ಕುಡಿಯಲಾರಿರಿ. ಕರ್ತನ ಪಂಕ್ತಿಯಲ್ಲಿಯೂ ಮತ್ತು ದೆವ್ವಗಳ ಪಂಕ್ತಿಯಲ್ಲಿಯೂ ಊಟಮಾಡಲಾರಿರಿ.