ಅದರ ಪಿತ್ತಕೋಶದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರಕೋಶಗಳನ್ನೂ ಅವುಗಳ ಮೇಲಿರುವ ಕೊಬ್ಬನ್ನೂ ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮ ಮಾಡಬೇಕು.
TSK
TSK · ಯಾಜಕಕಾಂಡ 3:16
مراجع Treasury of Scripture Knowledge في ಕನ್ನಡ IRV.
ಆ ಯಜ್ಞಪಶುವಿನ ಅಂಗಾಂಶದ ಕೊಬ್ಬನ್ನು, ಕರುಳುಗಳ ಮೇಲಣ ಎಲ್ಲಾ ಕೊಬ್ಬನ್ನು,
ಅದರ ಅಂಗಾಂಶದ ಕೊಬ್ಬನ್ನು ಮತ್ತು ಕರುಳುಗಳ ಮೇಲಣ ಎಲ್ಲಾ ಕೊಬ್ಬನ್ನು,
ಸಮಾಧಾನಯಜ್ಞದ ಪಶುವಿನ ಕೊಬ್ಬನ್ನು ಅವನು ಹೋಮಮಾಡುವ ಪ್ರಕಾರವೇ ಇದರ ಎಲ್ಲಾ ಕೊಬ್ಬನ್ನು ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು.
“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ನೀವು ಎತ್ತು, ಕುರಿ ಮತ್ತು ಆಡುಗಳ ಕೊಬ್ಬನ್ನು ತಿನ್ನಬಾರದು.
ಯೆಹೋವನ ಸನ್ನಿಧಿಯಿಂದ ಬೆಂಕಿಯು ಹೊರಟು ಯಜ್ಞವೇದಿಯ ಮೇಲಿದ್ದ ಸರ್ವಾಂಗಹೋಮದ್ರವ್ಯವನ್ನು ಮತ್ತು ಕೊಬ್ಬನ್ನು ದಹಿಸಿಬಿಟ್ಟಿತು. ಜನರೆಲ್ಲರೂ ಅದನ್ನು ಕಂಡು ಉತ್ಸಾಹದಿಂದ ಆರ್ಭಟಿಸಿ, ಅಡ್ಡಬಿದ್ದು ನಮಸ್ಕರಿಸಿದರು.
ಇದಲ್ಲದೆ ಯಾಜಕನ ಆಳು ಕೊಬ್ಬನ್ನು ಹೋಮಮಾಡುವುದಕ್ಕಿಂತ ಮುಂಚೆಯೇ ಬಂದು ಯಜ್ಞವನ್ನರ್ಪಿಸುವವನಿಗೆ, “ಯಾಜಕನಿಗೋಸ್ಕರ ಸುಡತಕ್ಕ ಮಾಂಸವನ್ನು ಕೊಡು; ನೀನು ಬೇಯಿಸಿದ ಮಾಂಸವನ್ನು ಅವನು ತೆಗೆದುಕೊಳ್ಳುವುದಿಲ್ಲ; ಅವನಿಗೆ ಹಸಿಮಾಂಸವೇ ಬೇಕು” ಅನ್ನುವನು.
ಇದಲ್ಲದೆ ಯಾಜಕರೂ ಯೆಹೋವನಿಗೆ ಸಮರ್ಪಿಸಬೇಕಾಗಿದ್ದ ಸರ್ವಾಂಗಹೋಮ, ಸಮಾಧಾನ ಯಜ್ಞಗಳ ಕೊಬ್ಬು ಹಾಗು ಸರ್ವಾಂಗಹೋಮ ಸಂಬಂಧವಾದ ಪಾನದ್ರವ್ಯ ಇವು ಅಪಾರವಾಗಿದ್ದವು.
¶ “‘ಆದರೆ ಇಸ್ರಾಯೇಲರು ನನ್ನನ್ನು ತೊರೆದಾಗ, ಲೇವಿಯರೂ, ಚಾದೋಕನ ಸಂತಾನದವರೂ ಆದ ಯಾಜಕರು ನನ್ನ ಪವಿತ್ರಾಲಯದ ಪಾರುಪತ್ಯವನ್ನು ನೆರವೇರಿಸಿದ್ದರಿಂದ ಅವರು ನನ್ನನ್ನು ಸೇವಿಸಲು ನನ್ನ ಸನ್ನಿಧಿಗೆ ಸೇರುವರು, ನನಗೆ ಕೊಬ್ಬನ್ನೂ, ರಕ್ತವನ್ನೂ ಅರ್ಪಿಸಲು ನನ್ನ ಸಮ್ಮುಖದಲ್ಲಿ ನಿಂತುಕೊಳ್ಳುವರು’ ಇದು ಕರ್ತನಾದ ಯೆಹೋವನ ನುಡಿ.