ಅದರ ಸುವಾಸನೆಯು ಯೆಹೋವನಿಗೆ ಗಮಗಮಿಸಲು ಆತನು ಹೃದಯದೊಳಗೆ, “ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಅವರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಈಗ ನಾಶಮಾಡಿದಂತೆ ಇನ್ನು ಮೇಲೆ ನಾಶ ಮಾಡುವುದಿಲ್ಲ.
TSK
TSK · ಯಾಜಕಕಾಂಡ 4:31
مراجع Treasury of Scripture Knowledge في ಕನ್ನಡ IRV.
ಅದರ ಕರುಳುಗಳನ್ನು ಮತ್ತು ಕಾಲುಗಳನ್ನು ನೀರಿನಲ್ಲಿ ತೊಳೆದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗುತ್ತದೆ.
ಅವನು ಆ ಪಕ್ಷಿಯನ್ನು ರೆಕ್ಕೆಗಳ ಮಧ್ಯದಲ್ಲಿ ಇಬ್ಭಾಗವಾಗಿ ಹರಿಯಬೇಕು, ಅವನು ಅದನ್ನು ವಿಭಾಗಿಸಬಾರದು. ಆದರೆ ರೆಕ್ಕೆಗಳನ್ನು ಪೂರಾ ಕಿತ್ತುಹಾಕಬಾರದು. ಅನಂತರ ಯಾಜಕನು ಅದನ್ನು ಯಜ್ಞವೇದಿಯ ಮೇಲಣ ಬೆಂಕಿಯಲ್ಲಿರುವ ಕಟ್ಟಿಗೆಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗಿದೆ.
ಆ ಸಮಾಧಾನಯಜ್ಞದ ಪಶುವಿನ ಕೊಬ್ಬನ್ನು ಯೆಹೋವನಿಗೋಸ್ಕರ ಹೋಮವಾಗಿ ಸಮರ್ಪಿಸಬೇಕು. ಹೇಗೆಂದರೆ, ಬಾಲದ ಕೊಬ್ಬನ್ನೆಲ್ಲಾ ಬೆನ್ನೆಲುಬಿನ ಬಳಿಯಿಂದ ತೆಗೆದುಬಿಟ್ಟು ಅದನ್ನು, ಅಂಗಾಂಶದ ಕೊಬ್ಬನ್ನು, ಕರುಳುಗಳ ಮೇಲಣ ಎಲ್ಲಾ ಕೊಬ್ಬನ್ನು,
ಎರಡು ಮೂತ್ರಪಿಂಡಗಳನ್ನು, ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನು ಮತ್ತು ಕಳಿಜದ ಹತ್ತಿರ ಮೂತ್ರಪಿಂಡಗಳ ತನಕ ಇರುವ ಕೊಬ್ಬನ್ನು ಯೆಹೋವನಿಗೋಸ್ಕರ ಅಗ್ನಿಯ ಮೂಲಕ ಸಮರ್ಪಿಸಬೇಕು.
ಅವನು ಹೋರಿಯ ಕೊಬ್ಬನ್ನೆಲ್ಲಾ ಪ್ರತ್ಯೇಕಿಸಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು.
ಸಮಾಧಾನ ಯಜ್ಞಪಶುಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲಾ ಕೊಬ್ಬನ್ನು ಪ್ರತ್ಯೇಕಿಸಿ, ಯಜ್ಞವೇದಿಯಲ್ಲಿ ಉರಿಯುವ ಹೋಮ ದ್ರವ್ಯಗಳ ಮೇಲೆ ಯೆಹೋವನಿಗೆ ಹೋಮಮಾಡಬೇಕು. ಅವನ ತಪ್ಪಿನ ನಿಮಿತ್ತ ಯಾಜಕನು ಹೀಗೆ ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು.
ಅವನು ಎರಡನೆಯ ಪಕ್ಷಿಯನ್ನು ನಿಯಮಗಳಿಗೆ ಅನುಸಾರವಾಗಿ ಅದೇ ರೀತಿಯಲ್ಲಿ ಸರ್ವಾಂಗಹೋಮ ಮಾಡಬೇಕು. ಅವನ ತಪ್ಪಿನ ನಿಮಿತ್ತ ಯಾಜಕನು ಹೀಗೆ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು.
ಅವನು ತನ್ನ ಕೈಯಲ್ಲಿರುವ ಉಳಿದ ಎಣ್ಣೆಯನ್ನು ಶುದ್ಧಮಾಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ದುಬಿಡಬೇಕು. ಹೀಗೆ ಯಾಜಕನು ಯೆಹೋವನ ಸನ್ನಿಧಿಯಲ್ಲಿ ಅವನ ದೋಷವನ್ನು ಪರಿಹರಿಸುವನು.
ಅವನ ದೋಷಪರಿಹಾರಕ್ಕಾಗಿ ಯಾಜಕನು ಆ ಟಗರನ್ನು ಪ್ರಾಯಶ್ಚಿತ್ತಯಜ್ಞವಾಗಿ ಯೆಹೋವನಿಗೆ ಸಮರ್ಪಿಸಿ, ಅವನಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು.
ಅವರಾದರೋ ಪರಲೋಕದೇವರಿಗೆ ಸುಗಂಧಹೋಮಗಳನ್ನು ಸಮರ್ಪಿಸಿ, ರಾಜನ ಮತ್ತು ರಾಜಪುತ್ರರ ದೀರ್ಘಾಯಷ್ಯಕ್ಕಾಗಿ ಪ್ರಾರ್ಥನೆಮಾಡಲಿ.
ಯಜ್ಞನೈವೇದ್ಯಗಳು ನಿನಗೆ ಇಷ್ಟವಿಲ್ಲ; ಸರ್ವಾಂಗಹೋಮಗಳನ್ನಾಗಲಿ, ದೋಷಪರಿಹಾರಕ ಯಜ್ಞಗಳನ್ನಾಗಲಿ ನೀನು ಅಪೇಕ್ಷಿಸಲಿಲ್ಲ. ಆದರೆ ಶ್ರವಣಶಕ್ತಿಯನ್ನು ನನಗೆ ಅನುಗ್ರಹಿಸಿದಿ.
ನಾನು ಸಂಕೀರ್ತಿಸುತ್ತಾ ದೇವರ ನಾಮವನ್ನು ಕೊಂಡಾಡುವೆನು; ಕೃತಜ್ಞತಾಸ್ತುತಿಯಿಂದ ಘನಪಡಿಸುವೆನು.
ಅವನನ್ನು ಜಜ್ಜುವುದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು, ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವುದು;
ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುವಾಸನೆಯಾದ ಕಾಣಿಕೆಯಾಗಿಯೂ, ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.
ಹೋತಗಳ ಮತ್ತು ಹೋರಿಕರುಗಳ ರಕ್ತದ ಮೂಲಕವಲ್ಲ ತನ್ನ ಸ್ವಂತ ರಕ್ತದ ಮೂಲಕ ಒಂದೇ ಸಾರಿ ಎಲ್ಲರಿಗೋಸ್ಕರ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿ ನಿತ್ಯ ವಿಮೋಚನೆಯನ್ನು ಸಾಧಿಸಿದನು.
ಆದರೆ ಕ್ರಿಸ್ತನು ಪಾಪಗಳಿಗೋಸ್ಕರ ಸದಾಕಾಲಕ್ಕೂ ಒಂದೇ ಯಜ್ಞವನ್ನು ಸಮರ್ಪಿಸಿದ ಮೇಲೆ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.
ನೀವು ಜೀವವುಳ್ಳ ಕಲ್ಲಾಗಿರುವಾತನ ಬಳಿಗೆ ಬಂದಿದ್ದೀರಿ. ಆ ಕಲ್ಲನ್ನು ಜನರು ನಿರಾಕರಿಸಿದರು ಆದರೆ ಅದು ದೇವರಿಂದ ಆರಿಸಿಕೊಳ್ಳಲ್ಪಟ್ಟದು ಮತ್ತು ಆತನಿಗೆ ಅಮೂಲ್ಯವಾದದ್ದು ಆಗಿದೆ.
ನಾವು ಆತನ ಮೂಲಕ ಜೀವಿಸುವುದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮಲ್ಲಿ ಪ್ರತ್ಯಕ್ಷವಾಗಿದೆ.