TSK

TSK · ಯಾಜಕಕಾಂಡ 4:34

مراجع Treasury of Scripture Knowledge في ಕನ್ನಡ IRV.

العودة إلى المقطع

ಯಾಜಕನು ಆ ಪಶುರಕ್ತದಲ್ಲಿ ಸ್ವಲ್ಪವನ್ನು ಬೆರೆಳಿನಿಂದ ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.

ಯೆಹೋವನು ಧರ್ಮಸ್ವರೂಪನಾಗಿರುವುದರಿಂದ ಧರ್ಮೋಪದೇಶವನ್ನು ಘನಪಡಿಸಿ ಮಹತ್ತಿಗೆ ತರಬೇಕೆಂದು ಇಷ್ಟಪಟ್ಟನು.

¶ ಆದ್ದರಿಂದ ಈಗ ಕ್ರಿಸ್ತ ಯೇಸುವಿನಲ್ಲಿರುವವರಿಗೆ ಯಾವ ಅಪರಾಧ ನಿರ್ಣಯವೂ ಇಲ್ಲ,

ನಂಬುವವರೆಲ್ಲರಿಗೆ ನೀತಿಯನ್ನು ದೊರಕಿಸಿಕೊಡುವುದಕ್ಕಾಗಿ ಕ್ರಿಸ್ತನೇ ಧರ್ಮಶಾಸ್ತ್ರವನ್ನು ಕೊನೆಗೊಳಿಸಿದನು.

ಸಮಸ್ತವು ಯಾವನಿಗೋಸ್ಕರವೂ ಯಾವನಿಂದಲೂ ಉಂಟಾಯಿತೋ, ಆತನು ಬಹುಮಂದಿ ಪುತ್ರರನ್ನು ಮಹಿಮೆಗೆ ಸೇರಿಸುವುದಕ್ಕಾಗಿ, ಅವರ ರಕ್ಷಣಾನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವುದು ಆತನಿಗೆ ಯುಕ್ತವಾಗಿತ್ತು.

ನಿಮ್ಮ ಪೂರ್ವಿಕರಿಂದ ಬಂದಿರುವ ವ್ಯರ್ಥವಾದ ಸಂಪ್ರದಾಯಗಳ ನಡವಳಿಕೆಗಳಿಂದ ನಿಮಗೆ ಬಿಡುಗಡೆಯನ್ನುಂಟುಮಾಡಿದ್ದು ಬೆಳ್ಳಿ, ಬಂಗಾರ ಮೊದಲಾದ ನಶಿಸಿಹೋಗುವ ವಸ್ತುಗಳಿಂದಲ್ಲ.

ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.