TSK

TSK · ಯಾಜಕಕಾಂಡ 5:11

مراجع Treasury of Scripture Knowledge في ಕನ್ನಡ IRV.

العودة إلى المقطع

ಓಮೆರ್ ಎಂಬುದು ಏಫಾದಲ್ಲಿ ಹತ್ತನೆಯ ಒಂದು ಪಾಲು ಹಿಡಿಯುವಂಥ ಒಂದು ಅಳತೆಯ ಮಾಪನವಾಗಿದೆ.

¶ “‘ನೀವು ಒಲೆಯಲ್ಲಿ ಅಡಿಗೆಮಾಡಿದ್ದನ್ನು ನೈವೇದ್ಯವಾಗಿ ಸಮರ್ಪಿಸಬೇಕಾದರೆ, ಅದು ಎಣ್ಣೆ ಬೆರೆಸಿದ ಹುಳಿಯಿಲ್ಲದ ಗೋದಿಹಿಟ್ಟಿನ ಹೋಳಿಗೆಗಳು ಅಥವಾ ಎಣ್ಣೆ ಹಾಕಿದ ಹುಳಿಯಿಲ್ಲದ ಕಡುಬುಗಳು ಆಗಿರಬೇಕು.

ಅವನು ದೋಷದ ಪ್ರಾಯಶ್ಚಿತ್ತಕ್ಕಾಗಿ ಹೆಣ್ಣು ಕುರಿಯನ್ನಾಗಲಿ ಅಥವಾ ಹೆಣ್ಣು ಮೇಕೆಯನ್ನಾಗಲಿ ಯೆಹೋವನಿಗೆ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡುವನು.

ಅವನು ಯಾಜಕನ ಬಳಿಗೆ ಅದನ್ನು ತಂದನಂತರ ಅದು ದೈವಾರ್ಪಿತವೆಂದು ಸೂಚಿಸುವುದಕ್ಕಾಗಿ ಯಾಜಕನು ಅದರಲ್ಲಿ ಒಂದು ಹಿಡಿಯನ್ನು ತೆಗೆದುಕೊಂಡು ಯೆಹೋವನಿಗೆ ಸಮರ್ಪಿಸಿದ ಹೋಮದ್ರವ್ಯಗಳ ಮೇಲೆ ಯಜ್ಞವೇದಿಯಲ್ಲಿ ಹೋಮಮಾಡಬೇಕು; ಅದು ದೋಷಪರಿಹಾರಕ ಯಜ್ಞ.

¶ “ಅವನು ಬಡವನಾಗಿದ್ದು ಅಷ್ಟನ್ನು ಸಮರ್ಪಿಸುವುದಕ್ಕೆ ಆಗದಿದ್ದರೆ ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಂದು ಟಗರುಮರಿಯನ್ನು ತಂದು ದೋಷಪರಿಹಾರ ಮಾಡಿಸಿಕೊಳ್ಳುವುದಕ್ಕಾಗಿ ಯಾಜಕನ ಕೈಯಿಂದ ನೈವೇದ್ಯವಾಗಿ ನಿವಾಳಿಸಬೇಕು; ಮತ್ತು ಧಾನ್ಯನೈವೇದ್ಯಕ್ಕಾಗಿ ಹತ್ತರಲ್ಲಿ ಒಂದು ಭಾಗ ಎಣ್ಣೆ ಕಲಸಿದ ಗೋದಿಹಿಟ್ಟನ್ನು ಮತ್ತು ಒಂದು ಸೇರು ಎಣ್ಣೆಯನ್ನು ತರಬೇಕು.

ಆಗ ಅವನು ಮಾಡಬೇಕಾದದ್ದೇನೆಂದರೆ, ಆ ಪುರುಷನು ತನ್ನ ಹೆಂಡತಿಯನ್ನು ಯಾಜಕನ ಬಳಿಗೆ ಕರೆದುಕೊಂಡು ಬರಬೇಕು ಮತ್ತು ಅವಳ ಸಂಗತಿಯನ್ನು ವಿಚಾರಿಸುವುದಕ್ಕಾಗಿ ಅವನು ಯಾಜಕನಿಗೆ ಮೂರು ಸೇರು ಜವೆಗೋದಿಯ ಹಿಟ್ಟನ್ನು ಕಾಣಿಕೆಯಾಗಿ ತಂದುಕೊಡಬೇಕು. ಅದು ವ್ಯಭಿಚಾರ ಸಂಶಯವನ್ನು ಸೂಚಿಸುವುದಕ್ಕೂ ಮತ್ತು ಪಾಪವನ್ನು ಹೊರಪಡಿಸುವುದಕ್ಕೂ ಯೆಹೋವನಿಗೆ ನೈವೇದ್ಯವಾದ ಕಾಣಿಕೆಯಾದುದರಿಂದ ಆ ಹಿಟ್ಟಿನ ಮೇಲೆ ಎಣ್ಣೆಯನ್ನು ಹೊಯ್ಯಲೂಬಾರದು, ಧೂಪವನ್ನು ಇಡಲೂಬಾರದು.

ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ತಟ್ಟೆಯು; ಎಪ್ಪತ್ತು ಶೆಕೆಲ್ ತೂಕವುಳ್ಳ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯ ನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.

ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ? ನೀನು ಏಕೆ ನನಗೆ ಸಹಾಯಮಾಡದೆಯೂ, ನನ್ನ ಕೂಗನ್ನು ಕೇಳದೆಯೂ ದೂರವಾಗಿದ್ದೀ?

ಒಣನೆಲದೊಳಗೆ ಬೇರಿನಿಂದ ಹೊರಡುವ ಸಸಿಯಂತೆಯೂ, ಬುಡದಿಂದ ಒಡೆಯುವ ಚಿಗುರಿನ ಹಾಗೂ ಅವನು ಯೆಹೋವನ ದೃಷ್ಟಿಯಲ್ಲಿ ಬೆಳೆದನು. ಅವನಲ್ಲಿ ಯಾವ ಅಂದಚಂದಗಳೂ ಇರಲಿಲ್ಲ; ನಾವು ಅವನನ್ನು ನೋಡಿದಾಗ ನೋಡತಕ್ಕ ಯಾವ ಲಕ್ಷಣವೂ ಕಾಣಲಿಲ್ಲ.