¶ ಅವರು ಆರೋನನಿಗೂ ಅವನ ಮಕ್ಕಳಿಗೂ ನಯವಾದ ನಾರಿನಿಂದ ನೇಕಾರರ ಕೆಲಸದ ರೀತಿಯಲ್ಲಿ ಮೇಲಂಗಿಗಳನ್ನೂ,
TSK
TSK · ಯಾಜಕಕಾಂಡ 6:10
مراجع Treasury of Scripture Knowledge في ಕನ್ನಡ IRV.
ಅದರ ಕರುಳುಗಳನ್ನು ಹಾಗು ಕಾಲುಗಳನ್ನು ನೀರಿನಲ್ಲಿ ತೊಳೆದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಸುಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗಿದೆ.
¶ “‘ನೀವು ಯೆಹೋವನಿಗೆ ಧಾನ್ಯ ನೈವೇದ್ಯವಾಗಿ ಸಮರ್ಪಿಸುವ ಯಾವ ಪದಾರ್ಥವನ್ನು ಹುಳಿಹಿಟ್ಟಿನಿಂದ ಮಾಡಬಾರದು. ಯಾವ ಹುಳಿಪದಾರ್ಥವನ್ನಾಗಲಿ ಅಥವಾ ಜೇನುತುಪ್ಪವನ್ನಾಗಲಿ ಯೆಹೋವನಿಗೆ ಹೋಮಮಾಡಬಾರದು.
ಆರೋನನ ಸಂತತಿಯವರಲ್ಲಿ ಯಾವನು ಅವನ ತರುವಾಯ ಅಭಿಷಿಕ್ತನಾದ ಯಾಜಕನ ಪಟ್ಟಕ್ಕೆ ಬರುವನೋ ಅವನೇ ಅದನ್ನು ಸಮರ್ಪಿಸಬೇಕು; ಇದು ಶಾಶ್ವತನಿಯಮ. ಅದನ್ನು ಯೆಹೋವನಿಗೆ ಸಂಪೂರ್ಣವಾಗಿ ಹೋಮಮಾಡಬೇಕು.
ದೇವರಿಗೆ ನೈವೇದ್ಯವಾದ ಆಹಾರದಲ್ಲಿ ಪರಿಶುದ್ಧವಾದದ್ದನ್ನು ಮತ್ತು ಮಹಾಪರಿಶುದ್ಧವಾದುದನ್ನು ಅವನು ಊಟಮಾಡಬಹುದು.
¶ ನಂತರ ಯೆಹೋವನ ಬಳಿಯಿಂದ ಬೆಂಕಿಹೊರಟು, ಧೂಪವನ್ನು ಅರ್ಪಿಸುತ್ತಿದ್ದ ಆ ಇನ್ನೂರೈವತ್ತು ಮಂದಿಯನ್ನು ದಹಿಸಬಿಟ್ಟಿತು.
ದುಷ್ಟರೋ ನಾಶವಾಗಿ ಹೋಗುವರು; ಯೆಹೋವನ ವೈರಿಗಳು ಹುಲ್ಲುಗಾವಲುಗಳ ಸೊಗಸಿನಂತಿದ್ದು ಮಾಯವಾಗುವರು. ಅವರು ಹಬೆಯಂತೆ ತೋರಿ ಅಡಗಿಹೋಗುವರು.
¶ ಆಗ ಇದನ್ನು ನೋಡಿ ಹಿರಿಯರಲ್ಲಿ ಒಬ್ಬನು, “ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡಿರುವವರಾದ ಇವರು ಯಾರು? ಎಲ್ಲಿಂದ ಬಂದರು” ಎಂದು ನನ್ನನ್ನು ಕೇಳಲು, “ಅಯ್ಯಾ ನೀನೇ ಬಲ್ಲೆ” ಎಂದೆನು.
ಪರಲೋಕದಲ್ಲಿರುವ ಸೈನ್ಯವು ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಹತ್ತಿದವರಾಗಿ ಆತನನ್ನು ಹಿಂಬಾಲಿಸಿದರು.