ಆ ನೈವೇದ್ಯದಲ್ಲಿ ಉಳಿದದ್ದು ಆರೋನನಿಗೂ ಮತ್ತು ಅವನ ವಂಶದವರಿಗೂ ಆಗಬೇಕು; ಅದು ಯೆಹೋವನಿಗೆ ಅರ್ಪಿತವಾದ ಹೋಮಶೇಷಗಳಲ್ಲಿ ಅತಿಪರಿಶುದ್ಧವಾಗಿದೆ.
TSK
TSK · ಯಾಜಕಕಾಂಡ 6:16
مراجع Treasury of Scripture Knowledge في ಕನ್ನಡ IRV.
ಮೇಲೆ ಕಂಡ ವಿಷಯಗಳಲ್ಲಿ ಯಾವ ವಿಧವಾಗಿ ಅವನು ದೋಷಿಯಾದರೂ, ಯಾಜಕನು ಅವನಿಗೋಸ್ಕರ ಹೀಗೆ ದೋಷಪರಿಹಾರವನ್ನು ಮಾಡಿದನಂತರ ಅವನಿಗೆ ಕ್ಷಮಾಪಣೆಯಾಗುವುದು. ಧಾನ್ಯನೈವೇದ್ಯ ದ್ರವ್ಯದಲ್ಲಿ ಉಳಿದದ್ದು ಹೇಗೆ ಯಾಜಕನಿಗೆ ಸಲ್ಲುತ್ತದೋ ಇದರಲ್ಲಿಯೂ ಉಳಿದದ್ದು ಯಾಜಕನಿಗೆ ಸಲ್ಲಬೇಕು.’”
ಅದನ್ನು ಸಮರ್ಪಿಸುವ ಯಾಜಕನು ಅದರ ಮಾಂಸವನ್ನು ಊಟಮಾಡಬೇಕು. ಪವಿತ್ರಸ್ಥಳದೊಳಗೆ ಅಂದರೆ ದೇವದರ್ಶನದ ಗುಡಾರದ ಅಂಗಳದಲ್ಲಿ ಅದನ್ನು ಊಟಮಾಡಬೇಕು.
ಬೆಂಕಿಯಲ್ಲಿ ಹೋಮಮಾಡದೆ ಉಳಿದಿರುವ ಮಹಾ ಪರಿಶುದ್ಧ ವಸ್ತುಗಳು ನಿನಗೆ ಕಾಣಿಕೆಯಾಗಿ ಸಲ್ಲಬೇಕು. ಇಸ್ರಾಯೇಲರು ನನಗೆ ಸಮರ್ಪಿಸುವ ಎಲ್ಲಾ ಧಾನ್ಯದ್ರವ್ಯ, ದೋಷಪರಿಹಾರಕ ಯಜ್ಞ, ಪ್ರಾಯಶ್ಚಿತ್ತಯಜ್ಞ ಇವುಗಳಲ್ಲಿ ಹೋಮಶೇಷವು ಮಹಾಪರಿಶುದ್ಧವಾದುದರಿಂದ ನಿನಗೂ ನಿನ್ನ ಸಂತತಿಯವರಿಗೂ ಸಲ್ಲಬೇಕು.
ಅವರು ಧಾನ್ಯನೈವೇದ್ಯವನ್ನೂ ದೋಷಪರಿಹಾರಕ ಯಜ್ಞದ್ರವ್ಯವನ್ನೂ, ಪ್ರಾಯಶ್ಚಿತ್ತ ಯಜ್ಞದ್ರವ್ಯವನ್ನೂ ಅನುಭವಿಸಲಿ; ಕೇವಲ ಯೆಹೋವನದಾಗಿಯೇ ಇರಲೆಂದು ಇಸ್ರಾಯೇಲರಲ್ಲಿ ಹರಕೆ ಮಾಡಿದ್ದೆಲ್ಲವೂ ಅವರಿಗೆ ಸಲ್ಲಬೇಕು.
ದೇವಾಲಯದಲ್ಲಿ ಸೇವೆ ಸಲ್ಲಿಸುವವರು ದೇವಾಲಯದಿಂದ ತಮ್ಮ ಬದುಕನ್ನು ಸಾಗಿಸಬೇಕೆಂದೂ ಮತ್ತು ಯಜ್ಞವೇದಿಯ ಬಳಿ ಸೇವೆಮಾಡುವವರು ಆ ವೇದಿಗೆ ಬರುವ ಪದಾರ್ಥಗಳಲ್ಲಿ ಪಾಲುಹೊಂದುತ್ತಾರೆಂಬುದೂ ನಿಮಗೆ ತಿಳಿಯದೋ?