ಹೀಗೆ ಏಳು ದಿನಗಳವರೆಗೂ ಯಜ್ಞವೇದಿಯ ನಿಮಿತ್ತವಾಗಿ ದೋಷಪರಿಹಾರಕ ಆಚಾರವನ್ನು ನಡಿಸಿ ಅದನ್ನು ಪ್ರತಿಷ್ಠಿಸಬೇಕು. ಯಜ್ಞವೇದಿಯು ಅತಿ ಪರಿಶುದ್ಧವಾಗಿರಬೇಕು. ಯಜ್ಞವೇದಿಯನ್ನು ಮುಟ್ಟುವವರೆಲ್ಲರೂ ಪರಿಶುದ್ಧರಾಗಿರಬೇಕು.
TSK
TSK · ಯಾಜಕಕಾಂಡ 6:18
مراجع Treasury of Scripture Knowledge في ಕನ್ನಡ IRV.
ಅಭಿಷಿಕ್ತನಾದ ಯಾಜಕನೇ ದೋಷಿಯಾಗಿ ಜನರೆಲ್ಲರನ್ನು ಅಪರಾಧಕ್ಕೆ ಒಳಪಡಿಸಿದರೆ, ತನ್ನ ದೋಷಪರಿಹಾರಕ್ಕಾಗಿ ಅವನು ಪೂರ್ಣಾಂಗವಾದ ಹೋರಿಯನ್ನು ಯೆಹೋವನಿಗೆ ಸಮರ್ಪಿಸಬೇಕು.
ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟನಂತರ ಸರ್ವಾಂಗಹೋಮದ ಪಶುಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ದೋಷಪರಿಹಾರಕ್ಕಾಗಿ ವಧಿಸಬೇಕು.
ಆ ಪಶುವಿನ ಮಾಂಸಕ್ಕೆ ಸೋಂಕಿದ್ದೆಲ್ಲವೂ ಪರಿಶುದ್ಧವಾಗುವುದು. ಅದರ ರಕ್ತದಲ್ಲಿ ಸ್ವಲ್ಪವಾದರೂ ಬಟ್ಟೆಯ ಮೇಲೆ ಬಿದ್ದರೆ ಆ ಬಟ್ಟೆಯನ್ನು ಪವಿತ್ರಸ್ಥಳದೊಳಗೆ ಒಗೆದುಕೊಳ್ಳಬೇಕು.
ನಪುಂಸಕನಾಗಲಿ, ಬೇರೆ ಯಾವ ಕಳಂಕವಿದ್ದವನಾಗಲಿ ಯೆಹೋವನಿಗೆ ಹೋಮದ್ರವ್ಯಗಳನ್ನು ಸಮರ್ಪಿಸುವುದಕ್ಕೆ ಸನ್ನಿಧಿಗೆ ಬರಬಾರದು. ಅಂಥವನು ದೇಹದಲ್ಲಿ ದೋಷವಿರುವುದರಿಂದ ದೇವರ ಆಹಾರವನ್ನು ಸಮರ್ಪಿಸಲೇಬಾರದು.
ನೀವು ಮಹಾಪರಿಶುದ್ಧವಾದ ಒಂದು ಸ್ಥಳದಲ್ಲಿ ಅವುಗಳನ್ನು ಊಟಮಾಡಬೇಕು. ನಿಮ್ಮಲ್ಲಿರುವ ಗಂಡಸರೆಲ್ಲರೂ ಅವುಗಳನ್ನು ತಿನ್ನಬಹುದು. ಅವು ಮಹಾಪರಿಶುದ್ಧವಾದವುಗಳೆಂದು ನೀವು ತಿಳಿದುಕೊಳ್ಳಬೇಕು.
¶ ಆ ದಿನದಲ್ಲಿ, “ಯೆಹೋವನಿಗೆ ಮೀಸಲು” ಎಂಬ ಲಿಪಿಯು ಕುದುರೆಗಳ ಘಂಟೆಗಳ ಮೇಲೂ ಕೆತ್ತಿರುವುದು; ಯೆಹೋವನ ಆಲಯದ ಪಾತ್ರೆಗಳೆಲ್ಲವೂ ಯಜ್ಞವೇದಿಯ ಪಕ್ಕದ ಬೋಗುಣಿಗಳಂತೆ ಪರಿಶುದ್ಧವಾಗಿರುವವು.
¶ ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.