TSK

TSK · ಯಾಜಕಕಾಂಡ 6:7

مراجع Treasury of Scripture Knowledge في ಕನ್ನಡ IRV.

العودة إلى المقطع

ಸಾವಿರಾರು ತಲೆಮಾರುಗಳವರೆಗೂ ದಯೆತೋರಿಸುವವನು; ದೋಷಾಪರಾಧ ಪಾಪಗಳನ್ನು ಕ್ಷಮಿಸುವವನು; ಆದರೂ ಅಪರಾಧಿಗಳನ್ನು ಶಿಕ್ಷಿಸದೆ ಬಿಡುವುದಿಲ್ಲ; ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಮಾರುಗಳವರೆಗೆ ಬರಮಾಡುವವನು ಆಗಿದ್ದಾನೆ” ಎಂಬುದೇ.

ಅವನು (ಅಭಿಷಿಕ್ತ ಯಾಜಕ) ದೋಷಪರಿಹಾರಕ ಯಜ್ಞದ ಹೋರಿಯ ವಿಷಯದಲ್ಲಿ ಹೇಗೆ ಮಾಡಬೇಕೆಂದು ವಿಧಿಸಲ್ಪಟ್ಟಿತೋ, ಇದರ ವಿಷಯದಲ್ಲಿಯೂ ಹಾಗೆಯೇ ಮಾಡಬೇಕು. ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಿದನಂತರ ಅವರಿಗೆ ಕ್ಷಮಾಪಣೆಯಾಗುವುದು.

ಸಮಾಧಾನ ಯಜ್ಞಪಶುಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲಾ ಕೊಬ್ಬನ್ನು ಪ್ರತ್ಯೇಕಿಸಿ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕೆ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು.

ಮೇಲೆ ಕಂಡ ವಿಷಯಗಳಲ್ಲಿ ಯಾವ ವಿಧವಾಗಿ ಅವನು ದೋಷಿಯಾದರೂ, ಯಾಜಕನು ಅವನಿಗೋಸ್ಕರ ಹೀಗೆ ದೋಷಪರಿಹಾರವನ್ನು ಮಾಡಿದನಂತರ ಅವನಿಗೆ ಕ್ಷಮಾಪಣೆಯಾಗುವುದು. ಧಾನ್ಯನೈವೇದ್ಯ ದ್ರವ್ಯದಲ್ಲಿ ಉಳಿದದ್ದು ಹೇಗೆ ಯಾಜಕನಿಗೆ ಸಲ್ಲುತ್ತದೋ ಇದರಲ್ಲಿಯೂ ಉಳಿದದ್ದು ಯಾಜಕನಿಗೆ ಸಲ್ಲಬೇಕು.’”

ಅವನು ಪ್ರಾಯಶ್ಚಿತ್ತಕ್ಕಾಗಿ ಹಿಂಡಿನಿಂದ ಯೋಗ್ಯವಾಗಿ ತೋರುವ ಪೂರ್ಣಾಂಗವಾದ ಟಗರನ್ನು ಯಾಜಕನ ಬಳಿಗೆ ತೆಗೆದುಕೊಂಡು ಬರಬೇಕು. ಅವನು ತಿಳಿಯದೆ ಮಾಡಿದ ತಪ್ಪನ್ನು ಪರಿಹರಿಸುವುದಕ್ಕಾಗಿ ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡಬೇಕು; ಆಗ ಅವನಿಗೆ ಕ್ಷಮಾಪಣೆಯಾಗುವುದು.

¶ “ಆದರೆ ದುಷ್ಟನು ತಾನು ಮಾಡುತ್ತಿದ್ದ ಪಾಪಗಳನ್ನೆಲ್ಲಾ ಬಿಟ್ಟುಬಿಟ್ಟು, ನನ್ನ ಸಕಲ ವಿಧಿಗಳನ್ನು ಕೈಕೊಂಡು, ನೀತಿನ್ಯಾಯಗಳನ್ನು ನಡೆಸಿದರೆ ಸಾಯುವುದಿಲ್ಲ, ಖಂಡಿತವಾಗಿ ಜೀವಿಸುವನು.

ನಾನು ದುಷ್ಟನಿಗೆ, ‘ನೀನು ಖಂಡಿತವಾಗಿ ಸಾಯುವಿ’ ಎಂದು ಹೇಳಲು ಅವನು ತನ್ನ ಪಾಪವನ್ನು ಬಿಟ್ಟು ನೀತಿನ್ಯಾಯಗಳನ್ನು ನಡೆಸಿದರೆ,

ನಿನಗೆ ಯಾವ ದೇವರು ಸಮಾನ? ನೀನು ನಿನ್ನ ಸ್ವತ್ತಿನವರಲ್ಲಿ ಉಳಿದಿರುವ ಅಪರಾಧವನ್ನು ಕ್ಷಮಿಸುವವನೂ, ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ. ಹೌದು ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ. ಕರುಣೆಯೇ ಆತನಿಗೆ ಇಷ್ಟ.

ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಸುಳ್ಳನ್ನು ನಂಬಬೇಡಿರಿ. ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಪುರುಷಗಾಮಿಗಳು, ಕಳ್ಳರು,

ನಾವು ನಮ್ಮ ಪಾಪಗಳನ್ನು ಒಪ್ಪಿಕೊಂಡು ಅರಿಕೆಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವನು.