ಆಗ ನೀನು ಲೇವಿಯರನ್ನು ದೇವದರ್ಶನ ಗುಡಾರದ ಮುಂದೆ ಕರೆದುಕೊಂಡು ಬಂದು ಇಸ್ರಾಯೇಲರ ಸಮೂಹವನ್ನೆಲ್ಲಾ ಕೂಡಿಸಬೇಕು.
TSK
TSK · ಯಾಜಕಕಾಂಡ 8:3
مراجع Treasury of Scripture Knowledge في ಕನ್ನಡ IRV.
¶ ಅಲ್ಲಿಂದ ಅವರು ಬೇರ್ ಸ್ಥಳಕ್ಕೆ ಬಂದರು. ಯೆಹೋವನು ಮೋಶೆಗೆ ಹೇಳಿದ ಮಾತು ಇಲ್ಲಿನ ಬಾವಿಯ ವಿಷಯವೇ. ಯೆಹೋವನು ಮೋಶೆಗೆ, “ಜನರನ್ನು ಸೇರಿಸು. ನಾನು ಅವರಿಗೆ ನೀರನ್ನು ಕೊಡುವೆನು” ಅಂದನು.
ಅನಂತರ ದಾವೀದನು ಯೆಹೋವನ ಮಂಜೂಷವನ್ನು ತಾನು ಸಿದ್ಧಮಾಡಿದ ಸ್ಥಳಕ್ಕೆ ತರುವುದಕ್ಕೋಸ್ಕರ ಎಲ್ಲಾ ಇಸ್ರಾಯೇಲರನ್ನು ಯೆರೂಸಲೇಮಿಗೆ ಕರೆಯಿಸಿದನು.
ಅರಸನಾದ ಸೊಲೊಮೋನನೂ, ಎಲ್ಲಾ ಇಸ್ರಾಯೇಲರೂ ಮಂಜೂಷದ ಮುಂದೆ ಕೂಡಿಬಂದು, ಅಸಂಖ್ಯವಾದ ಕುರಿ, ದನಗಳನ್ನು ಯಜ್ಞವಾಗಿ ಅರ್ಪಿಸಿದರು.
ಹೀಗೆ, ಅನೇಕಾನೇಕ ಜನರು ಎರಡನೆಯ ತಿಂಗಳಿನಲ್ಲಿ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿನಲ್ಲಿ ಸೇರಿಬಂದರು; ಆ ಜನಸಮೂಹವು ಮಹಾಸಮೂಹವಾಗಿತ್ತು.
¶ ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಾಯೇಲ್ ಸರ್ವಸಮೂಹದವರು ಏಳನೆಯ ತಿಂಗಳಲ್ಲಿ ನೀರುಬಾಗಿಲಿನ ಮುಂದೆ ಬಯಲಿನಲ್ಲಿ ಒಟ್ಟಾಗಿ ಸೇರಿ ಬಂದರು. ಯೆಹೋವನು ಮೋಶೆಯ ಮುಖಾಂತರ ಇಸ್ರಾಯೇಲರಿಗೆ ಕೊಟ್ಟ ಧರ್ಮಶಾಸ್ತ್ರವನ್ನು ತೆಗೆದುಕೊಂಡು ಬರಬೇಕೆಂದು ಧರ್ಮೋಪದೇಶಕನಾದ ಎಜ್ರನನ್ನು ಕೇಳಿಕೊಂಡನು.
¶ ಪಂಚಾಶತ್ತಮ ದಿನದ ಹಬ್ಬವು ಬಂದಿರಲಾಗಿ ಅವರೆಲ್ಲರೂ ಒಮ್ಮಸ್ಸಿನಿಂದ ಒಂದೇ ಸ್ಥಳದಲ್ಲಿ ಕೂಡಿಬಂದಿದ್ದರು.