¶ ಕಾಲಾಂತರದಲ್ಲಿ ಕಾಯಿನನು ಹೊಲದ ಬೆಳೆಯಲ್ಲಿ ಕೆಲವನ್ನು ತಂದು ಯೆಹೋವನಿಗೆ ಕಾಣಿಕೆಯಾಗಿ ಸಮರ್ಪಿಸಿದನು.
TSK
TSK · ಯಾಜಕಕಾಂಡ 9:24
مراجع Treasury of Scripture Knowledge في ಕನ್ನಡ IRV.
¶ ಅಬ್ರಾಮನು ಅಡ್ಡಬೀಳಲು ದೇವರು ಅವನ ಸಂಗಡ ಮಾತನಾಡಿ,
ಬೆಂಕಿಯು ಯಜ್ಞವೇದಿಯ ಮೇಲೆ ಯಾವಾಗಲೂ ಉರಿಯುತ್ತಿರಬೇಕು; ಆರಿಹೋಗಬಾರದು.
¶ ಆಗ ಮೋಶೆ ಮತ್ತು ಆರೋನರು ಇಸ್ರಾಯೇಲರ ಸರ್ವಸಮೂಹದವರ ಮುಂದೆ ಅಡ್ಡಬಿದ್ದರು.
ಈ ಯಾಕೋಬನಲ್ಲಿ ಯಾವ ಆಪತ್ತಿನ ಸೂಚನೆಯೂ ಕಾಣುವುದಿಲ್ಲ ಅಥವಾ ಇಸ್ರಾಯೇಲರಿಗೆ ಯಾವ ವಿಪತ್ತಿನ ಸೂಚನೆಯೂ ತೋರುವುದಿಲ್ಲ. ಅವರಿಗೆ ದೇವರಾಗಿರುವ ಯೆಹೋವನು ಅವರ ಸಂಗಡ ಇದ್ದಾನೆ, ಅವರು ತಮ್ಮ ಅರಸನಿಗಾಗಿ ಮಾಡುವ ಜಯ ಘೋಷವು ಕೇಳಿಸುತ್ತ ಇದೆ.
ಮಾನೋಹನು ಹೋತಮರಿಯನ್ನೂ ಧಾನ್ಯದ್ರವ್ಯವನ್ನೂ ತಂದು ಬಂಡೆಯ ಮೇಲಿಟ್ಟು ಯೆಹೋವನಿಗೆ ಸಮರ್ಪಿಸಿದನು. ಮಾನೋಹನೂ ಅವನ ಹೆಂಡತಿಯೂ ನೋಡುತ್ತಿರುವಾಗಲೇ ಯೆಹೋವನ ದೂತನು ಆಶ್ಚರ್ಯವನ್ನು ನಡಿಸಿದನು.
ಆದರೆ ಆಕೆಯು ಅವನಿಗೆ, “ಯೆಹೋವನು ನಮ್ಮನ್ನು ಕೊಲ್ಲಬೇಕೆಂದಿದ್ದರೆ ಆತನು ನಮ್ಮ ಕೈಯಿಂದ ಯಜ್ಞವನ್ನೂ, ನೈವೇದ್ಯವನ್ನೂ ಸ್ವೀಕರಿಸುತ್ತಿರಲಿಲ್ಲ; ಈಗ ಇವುಗಳನ್ನೆಲ್ಲಾ ನಮಗೆ ತೋರಿಸುತ್ತಿರಲಿಲ್ಲ, ಹೇಳುತ್ತಿರಲಿಲ್ಲ” ಅಂದಳು.
ಹಿಜ್ಕೀಯನು ಯೆಹೋವನ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನೆಂದರೆ, “ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲರ ದೇವರೇ, ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ, ಪರಲೋಕಭೂಲೋಕಗಳನ್ನು ಉಂಟುಮಾಡಿದವನು ನೀನೇ.
ಆದರೆ ನಾನು ನಿನಗೋಸ್ಕರ ಒಂದು ಆಲಯವನ್ನು, ನೀನು ಶಾಶ್ವತವಾಗಿ ವಾಸಮಾಡತಕ್ಕ ಸ್ಥಳವಾಗಿರಲೆಂದು ನಾನು ಕಟ್ಟಿಸಿದ್ದೇನೆ” ಎಂದನು.
ಇಸ್ರಾಯೇಲರೆಲ್ಲರೂ ಆಕಾಶದಿಂದ ಬೆಂಕಿ ಕೆಳಗೆ ಇಳಿದು ಬರುವುದನ್ನೂ ಮತ್ತು ಯೆಹೋವನ ತೇಜಸ್ಸು ಆಲಯವನ್ನು ತುಂಬಿಕೊಂಡಿರುವುದನ್ನು ನೋಡಿದಾಗ, ಜನರು ನೆಲದವರೆಗೆ ಸಾಷ್ಟಾಂಗವೆರಗಿ ಯೆಹೋವನನ್ನು ಆರಾಧಿಸಿ, “ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾದದ್ದು” ಎಂದು ಕೃತಜ್ಞತಾಸ್ತುತಿ ನಮನ ಮಾಡಿದರು.
ನೀನು ಸಮರ್ಪಿಸಿದ ನೈವೇದ್ಯಗಳು ಆತನ ನೆನಪಿಗೆ ಬರಲಿ; ನೀನು ಮಾಡಿದ ಸರ್ವಾಂಗಹೋಮಗಳು ಆತನಿಗೆ ಮೆಚ್ಚಿಕೆಯಾಗಲಿ. ಸೆಲಾ
ಆತನು ಸ್ವಲ್ಪ ಮುಂದೆ ಹೋಗಿ ಬೋರಲು ಬಿದ್ದು, ‹“ನನ್ನ ತಂದೆಯೇ, ಸಾಧ್ಯವಾದರೆ ಈ›‹ಪಾನಪಾತ್ರೆಯು ನನ್ನನ್ನು ಬಿಟ್ಟುಹೋಗಲಿ; ಆದರೂ ನನ್ನ ಚಿತ್ತದಂತಾಗದೆ ನಿನ್ನ ಚಿತ್ತದಂತೆಯೇ ಆಗಲಿ”› ಎಂದು ದೇವರನ್ನು ಪ್ರಾರ್ಥಿಸಿದನು.
ಅದನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಪಾದಕ್ಕೆ ಅಡ್ಡ ಬಿದ್ದರು. ಹಿರಿಯರ ಕೈಗಳಲ್ಲಿ ವೀಣೆಗಳೂ ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ ಚಿನ್ನದ ಧೂಪಾರತಿಗಳೂ ಇದ್ದವು.