TSK

TSK · ಯಾಜಕಕಾಂಡ 9:4

مراجع Treasury of Scripture Knowledge في ಕನ್ನಡ IRV.

العودة إلى المقطع

ಮೂರನೆಯ ದಿನದಲ್ಲಿ ಅವರು ಸಿದ್ಧರಾಗಿರಬೇಕು. ಮೂರನೆಯ ದಿನದಲ್ಲಿ ಯೆಹೋವನು ಸಮಸ್ತ ಜನರಿಗೂ ಪ್ರತ್ಯಕ್ಷನಾಗಿ ಸೀನಾಯಿ ಬೆಟ್ಟದ ಮೇಲೆ ಇಳಿದು ಬರುವನು.

ಅಲ್ಲಿಯೇ ನಾನು ಇಸ್ರಾಯೇಲರಿಗೆ ದರ್ಶನವನ್ನು ಕೊಡುವೆನು. ಅಲ್ಲಿ ಕಾಣಿಸುವ ನನ್ನ ತೇಜಸ್ಸಿನಿಂದ ಆ ಸ್ಥಳವು ಪರಿಶುದ್ಧವಾಗಿರುವುದು.

¶ “‘ಯಾವನಾದರೂ ಯೆಹೋವನಿಗೆ ಧಾನ್ಯನೈವೇದ್ಯವನ್ನು ಮಾಡಬೇಕೆಂದಿದ್ದರೆ ಅದು ಗೋದಿಹಿಟ್ಟಿನದಾಗಿರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಹೊಯ್ದು ಅದರ ಮೇಲೆ ಧೂಪವನ್ನು ಇಡಬೇಕು.

¶ “‘ಧಾನ್ಯನೈವೇದ್ಯ ವಿಷಯವಾದ ನಿಯಮಗಳು: ಆರೋನನ ವಂಶದವರು ನೈವೇದ್ಯದ್ರವ್ಯವನ್ನು ಯೆಹೋವನ ಸನ್ನಿಧಿಯಲ್ಲಿ ಯಜ್ಞವೇದಿಯ ಎದುರಾಗಿಯೇ ಸಮರ್ಪಿಸಬೇಕು.

¶ ತರುವಾಯ ಮೋಶೆ ಮತ್ತು ಆರೋನನು ದೇವದರ್ಶನದ ಗುಡಾರದೊಳಗೆ ಹೋದರು. ಅವರು ಅಲ್ಲಿಂದ ಹೊರಗೆ ಬಂದಾಗ ಜನರನ್ನು ಆಶೀರ್ವದಿಸಿದರು. ಆಗ ಯೆಹೋವನ ಮಹಿಮೆಯು ಜನರೆಲ್ಲರಿಗೆ ಪ್ರತ್ಯಕ್ಷವಾಯಿತು.

ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕಾಗಿ ಪಶುಗಳಿಂದಾಗಲಿ, ಆಡುಕುರಿ ಹಿಂಡುಗಳಿಂದಾಗಲಿ ಒಂದು ಪಶುವನ್ನು ಹೋಮಮಾಡುವವನು, ಸರ್ವಾಂಗಹೋಮ ಮಾಡುವುದಕ್ಕೂ, ಹರಕೆಸಲ್ಲಿಸುವುದಕ್ಕೂ, ಕೃತಜ್ಞತೆಯನ್ನು ತೋರಿಸುವುದಕ್ಕೂ, ಹಬ್ಬವನ್ನು ಆಚರಿಸುವುದಕ್ಕೂ ಸಮಾಧಾನಯಜ್ಞಮಾಡಿದರೆ,

ಯಾಜಕರು ಪರಿಶುದ್ಧ ಸ್ಥಳದಿಂದ ಹೊರಗೆ ಬಂದ ಕೂಡಲೆ ಮೇಘವು ಯೆಹೋವನ ಆಲಯವನ್ನು ತುಂಬಿಕೊಂಡಿತು.

ಏಳು ದಿನಗಳ ಕಾರ್ಯವನ್ನು ಮುಗಿಸಿದ ಬಳಿಕ, ಎಂಟನೆಯ ದಿನದಿಂದ ಯಾಜಕರು ಯಜ್ಞವೇದಿಯ ಮೇಲೆ ನಿಮ್ಮ ಪಕ್ಷವಾಗಿ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಮಾಡಬೇಕು. ಆಗ ನಾನು ನಿಮ್ಮನ್ನು ಅಂಗೀಕರಿಸುವೆನು” ಇದು ಕರ್ತನಾದ ಯೆಹೋವನ ನುಡಿ.