ಆದರೆ, ನಿಮ್ಮ ದೇವರಾದ ಯೆಹೋವನಲ್ಲಿ ನೀವು ಭಯಭಕ್ತಿಯುಳ್ಳವರಾಗಿರಬೇಕು. ಆಗ ಆತನು ನಿಮ್ಮನ್ನು ಎಲ್ಲಾ ಶತ್ರುಗಳ ಕೈಗೆ ಸಿಕ್ಕದಂತೆ ಕಾಪಾಡುವನು” ಎಂದು ಹೇಳಿದನು.
TSK
TSK · ಲೂಕನು 1:74
مراجع Treasury of Scripture Knowledge في ಕನ್ನಡ IRV.
ಇಸ್ರಾಯೇಲಿಗೂ ಯೆಹೋವನಿಂದ ಶಾಶ್ವತ ರಕ್ಷಣೆ ದೊರೆಯುವುದು. ಯುಗಯುಗಾಂತರಕ್ಕೂ ನೀವು ನಾಚಿಕೆಗೀಡಾಗುವುದಿಲ್ಲ, ಮಾನಭಂಗಪಡುವುದಿಲ್ಲ.
ಅಲ್ಲಿನ ಜನರು ತಾವು ಕಟ್ಟಿದ ಮನೆಗಳಲ್ಲಿ ತಾವೇ ವಾಸಿಸುವರು, ತಾವು ಮಾಡಿದ ದ್ರಾಕ್ಷಿಯ ತೋಟಗಳ ಫಲವನ್ನು ತಾವೇ ಅನುಭವಿಸುವರು.
¶ “ನಾನು ಅವರನ್ನು ಅನ್ಯಜನಾಂಗಗಳೊಳಗೆ ಸೆರೆಹೋಗುವಂತೆ ಮಾಡಿದ ಮೇಲೆ ಅವರನ್ನು ಒಟ್ಟುಗೂಡಿಸಿ, ಸ್ವದೇಶಕ್ಕೆ ಬರಮಾಡಿದುದರಿಂದ ನಾನೇ ಅವರ ದೇವರಾದ ಯೆಹೋವನು ಎಂದು ದೃಢಮಾಡಿಕೊಳ್ಳುವರು. ಅವರಲ್ಲಿ ಯಾರನ್ನೂ ದೇಶದಲ್ಲಿ ವಾಸಿಸುವುದಕ್ಕೆ ಬಿಡುವುದಿಲ್ಲ.
ಯಾರೂ ಹಾದುಹೋಗದಂತೆ ನನ್ನ ಆಲಯದ ಸುತ್ತಲು ಪಾಳೆಯನ್ನು ಹಾಕಿ ಕಾವಲಾಗಿರುವೆನು; ಇನ್ನು ಮುಂದೆ ಯಾವ ಬಾಧಕನೂ ನನ್ನ ಜನರ ಮೇಲೆ ದಾಳಿಮಾಡುವುದಿಲ್ಲ; ಏಕೆಂದರೆ ಈಗ ನಾನು ಕಣ್ಣಿಟ್ಟು ನೋಡುತ್ತಿದ್ದೇನೆ.
ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದ್ದರಿಂದ ನಿಮಗೆ ಶುದ್ಧೀಕರಣವೆಂಬ ಫಲವು ದೊರಕಿರುವುದಲ್ಲದೆ ಅಂತ್ಯದಲ್ಲಿ ನಿತ್ಯ ಜೀವವನ್ನು ಹೊಂದುವಿರಿ.
ದೇವರು ನಮಗೆ ಕೊಟ್ಟಿರುವ ಆತ್ಮವು ಬಲ, ಪ್ರೀತಿ, ಸಂಯಮಗಳ ಆತ್ಮವೇ ಹೊರತು ಹೇಡಿತನದ ಆತ್ಮವಲ್ಲ.
ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ, ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ, ನಮ್ಮನ್ನು ನಿರ್ಜೀವ ಕ್ರಿಯೆಗಳಿಂದ ಬಿಡಿಸಿ, ನಾವು ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುತ್ತದಲ್ಲವೇ?