ನೆರೆಹೊರೆಯವರೂ, ಅಣ್ಣತಮ್ಮಂದಿರೂ ಒಬ್ಬರಿಗೊಬ್ಬರು, ‘ಯೆಹೋವನ ಜ್ಞಾನವನ್ನು ಪಡೆಯಿರಿ’ ಎಂದು ಇನ್ನು ಮೇಲೆ ಬೋಧಿಸಬೇಕಾಗಿರುವುದಿಲ್ಲ; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ನನ್ನ ಜ್ಞಾನವನ್ನು ಪಡೆದಿರುವರು. ನಾನು ಅವರ ಅಪರಾಧವನ್ನು ಕ್ಷಮಿಸಿ ಅವರ ಪಾಪವನ್ನು ನನ್ನ ನೆನಪಿಗೆ ಎಂದಿಗೂ ತರುವುದಿಲ್ಲ. ಇದು ಯೆಹೋವನ ನುಡಿ” ಎಂಬುದೇ.
TSK
TSK · ಲೂಕನು 1:77
مراجع Treasury of Scripture Knowledge في ಕನ್ನಡ IRV.
ಆತನು ಯೊರ್ದನ್ ಹೊಳೆಯ ಸುತ್ತಲಿರುವ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿ ಜನರಿಗೆ, ನೀವು ಪಾಪ ಕ್ಷಮಾಪಣೆಗಾಗಿ ಪಶ್ಚಾತ್ತಾಪದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಸಾರಿ ಹೇಳುತ್ತಿದ್ದನು.
‹ಹೀಗಿರಲು ನಾನು ಹೇಳುವ ಮಾತೇನಂದರೆ, ಇವಳ ಪಾಪಗಳು ಬಹಳವಾಗಿದ್ದರೂ ಅವೆಲ್ಲಾವು ಕ್ಷಮಿಸಲ್ಪಟ್ಟಿವೆ. ಇದಕ್ಕೆ ಪ್ರಮಾಣವೇನಂದರೆ ಇವಳು ತೋರಿಸಿದ ಪ್ರೀತಿ ಬಹಳ. ಆದರೆ ಯಾವನಿಗೆ ಸ್ವಲ್ಪ ಮಾತ್ರ ಕ್ಷಮಿಸಲ್ಪಟ್ಟಿದೆಯೋ ಅವನು ತೋರಿಸುವ ಪ್ರೀತಿಯು ಸ್ವಲ್ಪವೇ”› ಅಂದನು.
¶ ಆತನ ವಿಷಯವಾಗಿ ಯೋಹಾನನು ಸಾಕ್ಷಿಕೊಡುತ್ತಾನೆ, ಹೇಗೆಂದರೆ “‘ನನ್ನ ನಂತರ ಬರುವಾತನು ನನಗಿಂತ ಮೊದಲೇ ಇದ್ದುದರಿಂದ ಆತನು ನನಗಿಂತಲೂ ಉನ್ನತನು’ ಎಂದು ನಾನು ಹೇಳಿದಾತನು ಈತನೇ” ಎಂದು ಘೋಷಿಸಿದನು.
ನಾನು ಅದನ್ನು ನೋಡಿದ್ದೇನೆ ಮತ್ತು ಈತನೇ ದೇವಕುಮಾರನೆಂದು ಸಾಕ್ಷಿ ಕೊಟ್ಟಿದ್ದೇನೆ” ಎಂದು ಹೇಳಿದನು.
ಪೇತ್ರನು ಅವರಿಗೆ, “ನಿಮ್ಮ ಪಾಪಗಳು ಕ್ಷಮಿಸಲ್ಪಡುವುದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿಕೊಳ್ಳಲಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ.
ದೇವರು ಆತನನ್ನೇ ಇಸ್ರಾಯೇಲ್ ಜನರಿಗೆ ಮಾನಸಾಂತರವನ್ನೂ, ಪಾಪಕ್ಷಮಾಪಣೆಯನ್ನೂ ದಯಪಾಲಿಸುವುದಕ್ಕಾಗಿ ಅವನನ್ನು ಪ್ರಭುವನ್ನಾಗಿಯೂ, ರಕ್ಷಕನಾಗಿಯೂ ತನ್ನ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಿದನು.
¶ “ಆದುದರಿಂದ ಸಹೋದರರೇ, ಆತನ ಮೂಲಕವಾಗಿ ಪಾಪ ಕ್ಷಮಾಪಣೆಯು ದೊರೆಯುತ್ತದೆಂಬುದು ನಿಮಗೆ ಸಾರೋಣವಾಗಿತ್ತೆಂದು ನಿಮಗೆ ತಿಳಿದಿರಲಿ.
ಪೂರ್ವ ಕಾಲದಲ್ಲಿ ಮಾನವರ ಪಾಪವನ್ನು ದಂಡಿಸದೆ ತಾಳ್ಮೆಯಿಂದಿದ್ದ ದೇವರು, ನಂಬಿಕೆಯುಳ್ಳವರಿಗೆ ಪಾಪಕ್ಷಮೆಯನ್ನು ತರುವ ಸಲುವಾಗಿ ಯೇಸುಕ್ರಿಸ್ತನನ್ನು ರಕ್ತಧಾರೆ ಎರೆಯುವಂತೆ ಮಾಡಿದನು.
ಯೇಸುಕ್ರಿಸ್ತನು ನಮಗೋಸ್ಕರ ಸುರಿಸಿದ ರಕ್ತದ ಮೂಲಕ ನಮಗೆ ಆತನ ಕೃಪೆಯ ಐಶ್ವರ್ಯಕ್ಕನುಸಾರವಾಗಿ ಪಾಪ ಕ್ಷಮಾಪಣೆಯೆಂಬ ವಿಮೋಚನೆಯು ಉಂಟಾಯಿತು.