¶ ಆಗ ಯೆಹೋವನು ಮೋಶೆಗೆ ಹೇಳಿದ್ದೇನೇಂದರೆ, “ಇಸ್ರಾಯೇಲರಲ್ಲಿ ಹಿರಿಯರೆಂದೂ ಮತ್ತು ಅಧಿಪತಿಗಳೆಂದೂ ನೀನು ತಿಳಿದುಕೊಂಡಿರುವ ಎಪ್ಪತ್ತು ಮಂದಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಕರೆದು ಅಲ್ಲಿ ನಿನ್ನೊಡನೆ ನಿಲ್ಲಿಸಿಕೋ.
TSK
TSK · ಲೂಕನು 10:1
مراجع Treasury of Scripture Knowledge في ಕನ್ನಡ IRV.
¶ ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ ದೆವ್ವಗಳನ್ನು ಬಿಡಿಸುವುದಕ್ಕೂ ಎಲ್ಲಾ ಬಗೆಯ ರೋಗಗಳನ್ನೂ ಎಲ್ಲಾ ರೀತಿಯ ಬೇನೆಗಳನ್ನೂ ವಾಸಿಮಾಡುವುದಕ್ಕೂ ಅಧಿಕಾರ ಕೊಟ್ಟನು.
ಅವನು ಎಲೀಯನ ಗುಣಶಕ್ತಿಗಳಿಂದ ಕೂಡಿದವನಾಗಿ ಕರ್ತನ ಮುಂದೂತನಾಗಿ ಹೋಗುವನು. ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ, ಅವಿಧೇಯರನ್ನು ನೀತಿವಂತರ ಜ್ಞಾನದ ಕಡೆಗೂ ತಿರುಗಿಸಿ, ಕರ್ತನಿಗಾಗಿ ಜನರನ್ನು ಸಿದ್ಧಪಡಿಸುವನು” ಎಂದು ಹೇಳಿದನು.
ಇದು ಯೆಶಾಯನೆಂಬ ಪ್ರವಾದಿಯ ಗ್ರಂಥದಲ್ಲಿ ಬರೆದಿರುವ ಮಾತಿಗೆ ಅನುಸಾರವಾಗಿ ನಡೆಯಿತು. ಆ ಮಾತು ಏನೆಂದರೆ, “‘ಕರ್ತನ ದಾರಿಯನ್ನು ಸಿದ್ಧಮಾಡಿರಿ, ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ. ಎಲ್ಲಾ ಹಳ್ಳಕೊಳ್ಳಗಳು ಮುಚ್ಚಲ್ಪಡುವವು, ಎಲ್ಲಾ ಬೆಟ್ಟಗುಡ್ಡಗಳು ತಗ್ಗಿಸಲ್ಪಡುವುದು, ಡೊಂಕಾಗಿರುವಂಥದು ನೆಟ್ಟಗಾಗುವುದು, ಕೊರಕಲಾದ ದಾರಿಗಳು ಸಮವಾಗುವವು. ಎಲ್ಲಾ ಮನುಷ್ಯರೂ ದೇವರಿಂದಾಗುವ ರಕ್ಷಣೆಯನ್ನು ಕಾಣುವರು’ ಎಂಬುದಾಗಿ ಮರುಭೂಮಿಯಲ್ಲಿ ಕೂಗುವವನ ಶಬ್ದವದೆ” ಎಂಬುದೇ.
¶ ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು ಅವರಿಗೆ ಎಲ್ಲಾ ದೆವ್ವಗಳನ್ನು ಬಿಡಿಸುವ ಮತ್ತು ರೋಗಗಳನ್ನು ವಾಸಿಮಾಡುವ ಶಕ್ತಿ ಮತ್ತು ಅಧಿಕಾರಗಳನ್ನು ಕೊಟ್ಟು,
ಇವರು ಕರ್ತನನ್ನು ಆರಾಧಿಸುತ್ತಾ, ಉಪವಾಸಮಾಡುತ್ತಾ ಇದ್ದಾಗ ಪವಿತ್ರಾತ್ಮನು; “ನಾನು ಬಾರ್ನಬ ಮತ್ತು ಸೌಲರನ್ನು ಕರೆದ ಸೇವೆಗಾಗಿ ಅವರನ್ನು ಬೇರ್ಪಡಿಸಿರಿ” ಎಂದು ಹೇಳಿದನು.