TSK

TSK · ಲೂಕನು 11:41

مراجع Treasury of Scripture Knowledge في ಕನ್ನಡ IRV.

العودة إلى المقطع

ನೀವು ಕೈತೆರೆದು ಅವನಿಗೆ ಅವಶ್ಯವಾಗಿ ಬೇಕಾದದ್ದನ್ನು ಕೊಟ್ಟು ಸಹಾಯ ಮಾಡಬೇಕು.

ದಿಕ್ಕಿಲ್ಲದವನನ್ನು ಪರಾಂಬರಿಸುವವನು ಧನ್ಯನು; ಯೆಹೋವನು ಅವನನ್ನು ಆಪತ್ಕಾಲದಲ್ಲಿ ರಕ್ಷಿಸುವನು.

ಬಡವರನ್ನು ಹಿಂಸಿಸುವವನು ಸೃಷ್ಟಿಕರ್ತನನ್ನು ಹೀನೈಸುವನು, ಗತಿಯಿಲ್ಲದವರನ್ನು ಕರುಣಿಸುವವನು ಆತನನ್ನು ಘನಪಡಿಸುವನು.

¶ ನಿನ್ನ ಆಹಾರವನ್ನು ನೀರಿನ ಮೇಲೆ ಚೆಲ್ಲು, ಬಹಳ ದಿನಗಳ ನಂತರ ಅದು ನಿನಗೆ ಸಿಕ್ಕುವುದು.

ಆದಕಾರಣ, ಅರಸನೇ, ಈ ನನ್ನ ಬುದ್ಧಿವಾದವು ನಿನಗೆ ಒಪ್ಪಿಗೆಯಾಗಲಿ, ನೀನು ಧರ್ಮವನ್ನು ಆಚರಿಸಿ ನಿನ್ನ ಪಾಪಗಳನ್ನು ನಾಶಗೊಳಿಸು, ಬಡವರಿಗೆ ಕರುಣೆಯನ್ನು ತೋರಿಸಿ ನಿನ್ನ ಅಪರಾಧಗಳನ್ನು ಧ್ವಂಸಮಾಡು; ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾದೀತು” ಎಂದು ಅರಿಕೆ ಮಾಡಿದನು.

¶ ‹“ಜನರು ನೋಡಲಿ ಎಂದು ನಿಮ್ಮ ‘ಧರ್ಮಕಾರ್ಯಗಳನ್ನು’ ಅವರ ಮುಂದೆ ಮಾಡಬಾರದು; ಹಾಗೆ ಮಾಡಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯ ಹತ್ತಿರ ನಿಮಗೆ›‹ಫಲದೊರೆಯುವುದಿಲ್ಲ.›

‹ಬಡವರು ಯಾವಾಗಲೂ ನಿಮ್ಮೊಂದಿಗೆ ಇರುತ್ತಾರಲ್ಲಾ, ಆದರೆ ನಾನು ನಿಮ್ಮೊಂದಿಗೆ ಯಾವಾಗಲೂ ಇರುವುದಿಲ್ಲ.›

¶ ಆತನು ತನ್ನನ್ನು ಊಟಕ್ಕೆ ಕರೆದವನಿಗೆ ಸಹ ಒಂದು ಮಾತು ಹೇಳಿದನು; ಅದೇನೆಂದರೆ, ‹“ನೀನು ಮಧ್ಯಾಹ್ನದ ಊಟಕ್ಕೆ ಅಥವಾ ಸಾಯಂಕಾಲದ ಊಟಕ್ಕೆ ನಿನ್ನ ಸ್ನೇಹಿತರನ್ನಾಗಲಿ, ನಿನ್ನ ಅಣ್ಣತಮ್ಮಂದಿರನ್ನಾಗಲಿ, ನಿನ್ನ ಬಂಧುಬಾಂಧವರನ್ನಾಗಲಿ, ಐಶ್ವರ್ಯವಂತರಾದ ನೆರೆಯವರನ್ನಾಗಲಿ ಕರೆಯಬೇಡ. ಒಂದು ವೇಳೆ ಅವರು ಸಹ ಪ್ರತಿಯಾಗಿ ನಿನ್ನನ್ನು ಕರೆದಾರು, ಮತ್ತು ನಿನಗೆ ಮುಯ್ಯಿಗೆಮುಯ್ಯಾಗುವುದು.›

¶ ಯೇಸು ಅದನ್ನು ಕೇಳಿ ಅವನಿಗೆ, ‹“ಇನ್ನೂ ನಿನಗೆ ಒಂದು ಕೊರತೆಯಿದೆ. ನಿನಗಿರುವುದನ್ನೆಲ್ಲಾ ಮಾರಿ ಬಡವರಿಗೆ ಹಂಚಿಕೊಡು, ಪರಲೋಕದಲ್ಲಿ ನಿನಗೆ ಸಂಪತ್ತುಂಟಾಗುವುದು. ತರುವಾಯ ನೀನು ಬಂದು ನನ್ನನ್ನು ಹಿಂಬಾಲಿಸು”› ಎಂದು ಹೇಳಿದನು.

¶ ಯೊಪ್ಪ ಪಟ್ಟಣದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು. ಆ ಹೆಸರಿಗೆ ಗ್ರೀಕ್ ಭಾಷೆಯಲ್ಲಿ “ದೊರ್ಕ” ಅಂದರೆ ಜಿಂಕೆ ಎಂದರ್ಥ. ಆಕೆಯು ಸತ್ಕ್ರಿಯೆಗಳನ್ನೂ, ದಾನಧರ್ಮಗಳನ್ನೂ ಬಹಳವಾಗಿ ಮಾಡುತ್ತಿದ್ದಳು.

ಕೊರ್ನೆಲ್ಯನೇ ‘ನಿನ್ನ ಪ್ರಾರ್ಥನೆಯನ್ನು ದೇವರು ಕೇಳಿದ್ದಾನೆ, ನಿನ್ನ ದಾನಧರ್ಮಗಳು ದೇವರ ಸನ್ನಿಧಾನದಲ್ಲಿ ನೆನಪಿಗೆ ಬಂದವು.

¶ “ಕೆಲವು ವರ್ಷಗಳಾದ ಮೇಲೆ ನಾನು, ನನ್ನ ಸ್ವದೇಶದವರಿಗೆ ಧರ್ಮದ್ರವ್ಯಗಳನ್ನು, ತರುವುದಕ್ಕೂ, ಕಾಣಿಕೆಗಳನ್ನು ಒಪ್ಪಿಸುವುದಕ್ಕೂ ಬಂದೆನು.

ನೀವು ದೇವರ ಮೇಲಣ ನಂಬಿಕೆಯಲ್ಲಿ, ವಾಕ್ಚಾತುರ್ಯದಲ್ಲಿ, ಜ್ಞಾನದಲ್ಲಿ, ಸಕಲ ವಿಧವಾದ ಆಸಕ್ತಿಯಲ್ಲಿ ಮತ್ತು ನಮ್ಮ ಪ್ರೇರಣೆಯಿಂದ ನಿಮ್ಮಲ್ಲಿ ಹುಟ್ಟಿದ ಪ್ರೀತಿಯಲ್ಲಿ ಹೇಗೆ ಸಮೃದ್ಧರಾಗಿದ್ದೀರೋ ಹಾಗೆಯೇ ಈ ಧರ್ಮಕಾರ್ಯದಲ್ಲಿಯೂ ಸಮೃದ್ಧರಾಗಿ ಮುಂದುವರೆಯಿರಿ.

¶ ಆದರೆ ಮಿತವಾಗಿ ಬಿತ್ತುವವನು ಮಿತವಾಗಿ ಕೊಯ್ಯುವನು. ಹೇರಳವಾಗಿ ಬಿತ್ತುವವನು ಹೇರಳವಾಗಿ ಕೊಯ್ಯುತ್ತಾನೆ. ಇದು ನಿಮಗೆ ತಿಳಿದಿರಲಿ.

ದೇವರು ಉಂಟುಮಾಡಿದ್ದೆಲ್ಲವೂ ಒಳ್ಳೆಯದೇ, ನಾವು ಕೃತಜ್ಞತಾಸ್ತುತಿಮಾಡಿ ತೆಗೆದುಕೊಳ್ಳುವ ಯಾವ ಆಹಾರವನ್ನು ತಿರಸ್ಕರಿಸಬೇಕಾಗಿಲ್ಲ.

ನೀವು ದೇವಜನರಿಗೆ ಉಪಚಾರ ಮಾಡಿದ್ದೀರಿ, ಇನ್ನೂ ಮಾಡುತ್ತಾ ಇದ್ದಿರಿ. ಈ ಕೆಲಸವನ್ನು ಮತ್ತು ಇದರಲ್ಲಿ ನೀವು ಆತನ ನಾಮದ ಕಡೆಗೆ ತೋರಿಸಿದ ಪ್ರೀತಿಯನ್ನು ಆತನು ಮರೆಯುವುದಿಲ್ಲ, ಯಾಕೆಂದರೆ ದೇವರು ಅನೀತಿಯುಳ್ಳವನಲ್ಲ.

ಸಂಕಟದಲ್ಲಿ ಬಿದ್ದಿರುವ ದಿಕ್ಕಿಲ್ಲದವರನ್ನೂ, ವಿಧವೆಯರನ್ನೂ ಪರಾಂಬರಿಸಿ ತನಗೆ ಇಹಲೋಕದ ದೋಷವು ಹತ್ತದಂತೆ ತನ್ನನ್ನು ತಾನು ಕಾಪಾಡಿಕೊಳ್ಳುವುದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ, ನಿರ್ಮಲವೂ ಆಗಿರುವ ಭಕ್ತಿ.

ಕ್ರಿಸ್ತನು ನಮಗೋಸ್ಕರ ತನ್ನ ಪ್ರಾಣವನ್ನು ಅರ್ಪಿಸಿದ್ದರಿಂದ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ.