TSK

TSK · ಲೂಕನು 12:19

مراجع Treasury of Scripture Knowledge في ಕನ್ನಡ IRV.

العودة إلى المقطع

ನೀವು ಹೊಟ್ಟೆತುಂಬಾ ಊಟಮಾಡಿ, ಸುಖವಾಗಿದ್ದು ಒಳ್ಳೇ ಮನೆಗಳನ್ನು ಕಟ್ಟಿಸಿಕೊಂಡು,

ತಮ್ಮ ಮಕ್ಕಳನ್ನು ಮಂದೆಮಂದೆಯಾಗಿ ನಡೆಸುವರು, ಅವರ ಮಕ್ಕಳು ಕುಣಿದಾಡುವರು.

ಕೇಡಿನ ದಿನಗಳಲ್ಲಿ ಏಕೆ ಭಯಪಡಬೇಕು? ಶತ್ರುಗಳು ಮೋಸದಿಂದ ಸುತ್ತಿಕೊಂಡಿರುವಾಗ ನಾನು ಏಕೆ ಹೆದರಬೇಕು?

ದೇವರು ನಿನ್ನನ್ನು ಎಂದಿಗೂ ಏಳದಂತೆ ಕೆಡವಿಬಿಡುವನು; ನಿನ್ನನ್ನು ಹಿಡಿದು ಗುಡಾರದೊಳಗಿಂದ ಕಿತ್ತು ಬೀಸಾಡುವನು; ಆತನು ನಿನ್ನನ್ನು ಜೀವಲೋಕದಿಂದ ಬೇರು ಸಹಿತವಾಗಿ ಕಿತ್ತುಹಾಕುವನು.

ಜ್ಞಾನಿಗಳ ಜ್ಞಾನಕಿರೀಟವೇ ಅವರ ಶ್ರೇಷ್ಠ ಸಂಪತ್ತು, ಜ್ಞಾನಹೀನರ ಮೂರ್ಖತನವು ಬರೀ ಮೂರ್ಖತನವೇ.

ನಿನ್ನ ದೃಷ್ಟಿಯು ಐಶ್ವರ್ಯದ ಮೇಲೆ ಎರಗುತ್ತದೋ? ಐಶ್ವರ್ಯವು ಅಷ್ಟರೊಳಗೆ ಮಾಯವಾಗುವುದು, ಆಕಾಶದ ಕಡೆಗೆ ಹಾರುವ ಹದ್ದಿನಂತೆ, ಅದು ರೆಕ್ಕೆಗಳನ್ನು ಕಟ್ಟಿಕೊಂಡಿದೆ.

¶ ಯೌವನಸ್ಥನೇ, ಯೌವನಪ್ರಾಯದಲ್ಲಿ ಆನಂದಿಸು, ಯೌವನದ ದಿನಗಳಲ್ಲಿ ಹೃದಯವು ನಿನ್ನನ್ನು ಹರ್ಷಗೊಳಿಸಲಿ. ಮನಸ್ಸಿಗೆ ತಕ್ಕಂತೆಯೂ, ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೋ. ಆದರೆ ಈ ಎಲ್ಲಾ ವಿಷಯಗಳಲ್ಲಿಯೂ ದೇವರು ನಿನ್ನನ್ನು ನ್ಯಾಯವಿಚಾರಣೆಗೆ ಗುರಿಮಾಡುವನೆಂದು ತಿಳಿದಿರು.

ಅಯ್ಯೋ, ಮದ್ಯದ ಗೀಳಿನಿಂದಲೇ ಮುಂಜಾನೆ ಎದ್ದು, ಸಂಜೆಯಾದ ಮೇಲೂ ದ್ರಾಕ್ಷಾರಸದಿಂದ ಅಮಲೇರಿದವರಾಗಿ ಕಾಲ ಕಳೆಯುವವರ ಗತಿಯನ್ನು ಏನೆಂದು ಹೇಳಲಿ!

ಎಫ್ರಾಯೀಮು, “ನಾನು ಐಶ್ವರ್ಯವಂತನೇ ಹೌದು, ಆಸ್ತಿಯನ್ನು ಪಡೆದಿದ್ದೇನೆ; ನನ್ನ ದುಡಿತದಲ್ಲೆಲ್ಲಾ ಪಾಪವೆನಿಸಿಕೊಳ್ಳುವ ದೋಷವೇನೂ ತೋರಲಿಲ್ಲ” ಎಂದು ಅಂದುಕೊಳ್ಳುತ್ತದೋ?

ತಮ್ಮ ಬಲೆಗಳಿಗೆ ಆರಾಧನೆ ಮಾಡುತ್ತಾ ಬಲಿ ಕೊಡುತ್ತಾರೆ, ತಮ್ಮ ಜಾಲಗಳ ಎದುರು ಧೂಪಹಾಕುತ್ತಾರೆ; ಅವುಗಳ ಮೂಲಕವೇ ಅವರ ಭೋಜನವು ಪುಷ್ಟಿಯಾಯಿತು, ಅವರ ಆಹಾರವು ರುಚಿ ಎಂದು ಹೇಳುತ್ತಾರೆ.

¶ ‹“ಐಶ್ವರ್ಯವಂತನಾದ ಒಬ್ಬ ಮನುಷ್ಯನಿದ್ದನು. ಅವನು ಬೆಲೆಬಾಳುವ ನಯವಾದ ನಾರುಮಡಿ ಮುಂತಾದ ವಸ್ತ್ರಗಳನ್ನು ಧರಿಸಿಕೊಂಡು, ಪ್ರತಿದಿನವು ಸುಖಸಂತೋಷಗಳಲ್ಲಿ ಜೀವಿಸುತ್ತಿದ್ದನು.›

ನಾನು ಎಫೆಸದಲ್ಲಿ ಮೃಗ ಯುದ್ಧ ಮಾಡಿದ್ದು ಕೇವಲ ಮಾನುಷಾಭಿಪ್ರಾಯದಿಂದಾದರೆ ನನಗೇನು ಪ್ರಯೋಜನ? ಸತ್ತವರು ಎದ್ದು ಬರುವುದಿಲ್ಲವಾದರೆ, ನಾವು ತಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ.

ದ್ರೋಹಿಗಳೂ, ದುಡುಕುವವರೂ, ದುರಹಂಕಾರವುಳ್ಳವರೂ, ದೇವರನ್ನು ಪ್ರೀತಿಸುವುದಕ್ಕಿಂತ ಅಧಿಕವಾಗಿ ಭೋಗವನ್ನೇ ಪ್ರೀತಿಸುವವರೂ,

¶ ಐಶ್ವರ್ಯವಂತರೇ, ನಿಮಗೆ ಬರುವ ಸಂಕಟಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ.

ನೀವು ಬಂಡುತನ, ದುರಾಶೆ, ಕುಡುಕತನ, ದುಂದೌತಣ, ಮದ್ಯಪಾನ ಗೋಷ್ಠಿ, ಅಸಹ್ಯವಾದ ವಿಗ್ರಹಾರಾಧನೆ, ಈ ಮೊದಲಾದವುಗಳನ್ನು ನಡಿಸುವುದರಲ್ಲಿಯೂ ಅನ್ಯಜನರಿಗೆ ಇಷ್ಟವಾದ ದುಷ್ಕೃತ್ಯಗಳನ್ನು ಮಾಡುವುದರಲ್ಲಿಯೂ ಕಾಲಕಳೆದದ್ದು ಸಾಕು.