TSK

TSK · ಲೂಕನು 12:20

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಮೋಶೆಯು ಆರೋನನಿಗೆ, “ನೀನು ಇಸ್ರಾಯೇಲರ ಸಮೂಹದ ಬಳಿಗೆ ಹೋಗಿ ಅವರಿಗೆ, ‘ಯೆಹೋವನು ನಿಮ್ಮ ಗುಣುಗುಟ್ಟುವಿಕೆಯನ್ನು ಕೇಳಿದ್ದಾನೆ. ಆದುದರಿಂದ ನೀವೆಲ್ಲರೂ ಆತನ ಸನ್ನಿಧಿಗೆ ಒಟ್ಟಾಗಿ ಸೇರಿ ಬರಬೇಕೆಂದು ಆಜ್ಞಾಪಿಸು’” ಎಂದು ಹೇಳಿದನು.

ಇದಕ್ಕೆ ಮೊದಲೇ ಅಬ್ಷಾಲೋಮನು ತನ್ನ ಆಳುಗಳಿಗೆ, “ಕೇಳಿರಿ, ಅಮ್ನೋನನು ದ್ರಾಕ್ಷಾರಸ ಕುಡಿದು ಮತ್ತನಾಗಿರುವಾಗ ನಾನು ಹೊಡೆಯಬೇಕೆಂದು ಹೇಳಿದ ಕೂಡಲೆ ಅವನನ್ನು ಹೊಡೆದು ಕೊಂದುಹಾಕಿರಿ. ಹೆದರಬೇಡಿರಿ, ನಿಮಗೆ ಆಜ್ಞಾಪಿಸಿದವನು ನಾನಲ್ಲವೇ? ಧೈರ್ಯದಿಂದಿರಿ ಮತ್ತು ಶೂರರಾಗಿರಿ” ಎಂದು ಹೇಳಿದನು.

ಅವರ ಮುಂದೆ ತನ್ನ ಘನೈಶ್ವರ್ಯಗಳನ್ನೂ, ಪುತ್ರಲಾಭಾತಿಶಯವನ್ನೂ, ಅರಸನು ತನ್ನನ್ನು ಸನ್ಮಾನಿಸಿ ಎಲ್ಲಾ ಸರದಾರರಿಗಿಂತ, ರಾಜಸೇವಕರಿಗಿಂತ ತನಗೇ ಶ್ರೇಷ್ಠಸ್ಥಾನವನ್ನು ಅನುಗ್ರಹಿಸಿದ್ದನ್ನೂ ವರ್ಣಿಸಿ,

ಅವನ ಹೊಟ್ಟೆಗೆ ತೃಪ್ತಿಯಿಲ್ಲವಾದ ಕಾರಣ, ಅವನು ತನ್ನ ಇಷ್ಟ ಸಂಪತ್ತಿನಲ್ಲಿ ಯಾವುದನ್ನೂ ಉಳಿಸಿಕೊಳ್ಳುವುದಿಲ್ಲ.

ಅವನು ಬೆಳ್ಳಿಯನ್ನು ಧೂಳಿನ ಹಾಗೆ ಹೇರಳವಾಗಿ ಕೂಡಿಸಿಟ್ಟು, ವಸ್ತ್ರಗಳನ್ನು ಮಣ್ಣಿನಂತೆ ವಿಶೇಷವಾಗಿ ಸಿದ್ಧಮಾಡಿಕೊಂಡರೂ,

ಅವನು ಸಾಯುವಾಗ ಏನೂ ತೆಗೆದುಕೊಂಡು ಹೋಗುವುದಿಲ್ಲ; ಅವನ ವೈಭವವು ಅವನೊಡನೆ ಹೋಗುವುದಿಲ್ಲ.

ಅವರು ನಿಮಿಷಮಾತ್ರದಲ್ಲಿಯೇ ಹಾಳಾಗಿ ಹೋಗುತ್ತಾರೆ; ಭಯಂಕರ ರೀತಿಯಿಂದ ಸಂಹಾರವಾಗಿ ಮುಗಿದು ಹೋಗುತ್ತಾರೆ.

ನನ್ನ ಪ್ರಯಾಸದ ಫಲವನ್ನು ಮುಂದಿನವನಿಗೆ ಬಿಟ್ಟುಬಿಡಬೇಕೆಂದು ನಾನು ಲೋಕದಲ್ಲಿ ಪಟ್ಟ ಪ್ರಯಾಸಕ್ಕೆ ಬೇಸರಗೊಂಡೆನು.

ಆಸ್ತಿಪಾಸ್ತಿಗಳನ್ನು ಅನ್ಯಾಯವಾಗಿ ಸಂಪಾದಿಸಿಕೊಂಡವನು ತನ್ನದಲ್ಲದ ಮರಿಗಳನ್ನು ಕೂಡಿಸಿಕೊಳ್ಳುವ ಕೌಜುಗ ಹಕ್ಕಿಗೆ ಸಮಾನನು. ಅವನ ಮಧ್ಯಪ್ರಾಯದಲ್ಲಿ ಅವು ಅವನಿಂದ ತೊಲಗಿಹೋಗುವವು; ಅವನು ತನ್ನ ಅಂತ್ಯಕಾಲದಲ್ಲಿ ಹುಚ್ಚನಾಗಿ ಕಂಡುಬರುವನು.

¶ “ಬರೆದ ಬರಹವು ಇದೇ, ‘ಮೆನೇ, ಮೆನೇ, ತೆಕೇಲ್, ಉಫರ್ಸಿನ್.’

‹ಆದರೆ ಆ ದುಷ್ಟ ಆಳು, ‘ನನ್ನ ಯಜಮಾನನು ಬರುವುದಕ್ಕೆ ತಡ ಮಾಡುತ್ತಾನೆ’ ಎಂದು ತನ್ನ ಮನಸ್ಸಿನಲ್ಲಿ ಅಂದುಕೊಂಡು›

‹ಹೀಗಿರುವಲ್ಲಿ ಸ್ವಲ್ಪ ಕಾಲವಾದ ಮೇಲೆ ಆ ಭಿಕ್ಷುಕನು ಸತ್ತನು. ದೇವದೂತರು ಅವನನ್ನು ತೆಗೆದುಕೊಂಡು ಹೋಗಿ ಅಬ್ರಹಾಮನ ಎದೆಗೆ ಒರಗಿಸಿದರು. ಆ ಐಶ್ವರ್ಯವಂತನು ಸಹ ಸತ್ತನು. ಅವನನ್ನು ಹೂಣಿಟ್ಟರು.›

ನಾವು ಲೋಕದೊಳಕ್ಕೆ ಏನೂ ತೆಗೆದುಕೊಂಡು ಬರಲಿಲ್ಲವಾದ್ದರಿಂದ, ಅದರೊಳಗಿಂದ ಏನೂ ತೆಗೆದುಕೊಂಡು ಹೋಗಲಾರೆವು.